ಮದ್ಯ ನಿಷೇಧಕ್ಕಾಗಿ ಹಕ್ಕು ಚಲಾಯಿಸುತ್ತಿರುವ ಗ್ರಾಮಸ್ಥರು 
ವಿಶೇಷ

ರಾಜಸ್ಥಾನ: ಮಹಿಳಾ ಸರ್ಪಂಚ್ ನೇತೃತ್ವ; ಗ್ರಾಮವನ್ನು ಮದ್ಯ ಮುಕ್ತ ಮಾಡಲು ಮತ ಚಲಾಯಿಸಿದ ಹಳ್ಳಿಗರು!

ರಾಜಸ್ಥಾನದ ರಾಜಸಮಂದ್ ಜಿಲ್ಲೆಯ ಥಾನೆಟಾ ಗ್ರಾಮದ ಮಹಿಳಾ ಸರ್ಪಂಚ್ ನೇತೃತ್ವದಲ್ಲಿ ತಮ್ಮ ಗ್ರಾಮವನ್ನು ಮದ್ಯ ಮುಕ್ತ ಮಾಡಲು ಗ್ರಾಮಸ್ಥರು ಶುಕ್ರವಾರ ಅತ್ಯಂತ ಉತ್ಸಾಹದಿಂದ ಮತ ಚಲಾಯಿಸಿದ್ದು,

ಜೈಪುರ: ರಾಜಸ್ಥಾನದ ರಾಜಸಮಂದ್ ಜಿಲ್ಲೆಯ ಥಾನೆಟಾ ಗ್ರಾಮದ ಮಹಿಳಾ ಸರ್ಪಂಚ್ ನೇತೃತ್ವದಲ್ಲಿ ತಮ್ಮ ಗ್ರಾಮವನ್ನು ಮದ್ಯ ಮುಕ್ತ ಮಾಡಲು ಗ್ರಾಮಸ್ಥರು ಶುಕ್ರವಾರ ಅತ್ಯಂತ ಉತ್ಸಾಹದಿಂದ ಮತ ಚಲಾಯಿಸಿದ್ದು, ಪಂಚಾಯತ್‌ನಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡುವ ನಿರ್ಧಾರಕ್ಕೆ ಗೆಲುವು ಸಿಕ್ಕಿದೆ.

ತಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಮಾಡಬೇಕೆ ಅಥವಾ ಬೇಡವೇ ಎಂಬ ವಿಚಾರವನ್ನು ಮತಕ್ಕೆ ಹಾಕಲಾಗಿದ್ದು, ಅರ್ಹ 3245 ಮತದಾರರಲ್ಲಿ 2206 ಮಂದಿ ಮದ್ಯ ನಿಷೇಧದ ಪರವಾಗಿ ಮತ ಚಲಾಯಿಸಿದ್ದಾರೆ. ನಿಷೇಧದ ವಿರುದ್ಧ ಕೇವಲ 61 ಮತ ಚಲಾಯಿಸಲಾಗಿದ್ದು, 40 ಮತಗಳು ಅಮಾನ್ಯವೆಂದು ಘೋಷಿಸಲಾಗಿದೆ. ಅಂತಿಮವಾಗಿ ಗ್ರಾಮದ ಮಹಿಳೆಯರ ಮದ್ಯ ವಿರೋಧಿ ಅಭಿಯಾನಕ್ಕೆ ಜಯ ಸಿಕ್ಕಿದೆ.

ಗ್ರಾಮದಲ್ಲಿ ಶುಕ್ರವಾರ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮತ್ತು ಕಲೆಕ್ಟರ್ ಅರವಿಂದ್ ಪೋಸ್ವಾಲ್ ಮತ್ತು ಎಸ್‌ಡಿಎಂ ಸಿಪಿ ವರ್ಮಾ ಸೇರಿದಂತೆ ರಾಜಸಮಂದ್ ಜಿಲ್ಲಾಡಳಿತದ ಅಧಿಕಾರಿಗಳು ಈ ಮತದಾನದ ಮೇಲ್ವಿಚಾರಣೆ ಮಾಡಿದರು. ಈ ವಿಶೇಷ ಮತದಾನವನ್ನು ರಾಜಸ್ಥಾನ್ ಅಬಕಾರಿ ನಿಯಮಗಳ ಅಡಿಯಲ್ಲಿ ನಡೆಸಲಾಯಿತು, ಈ ನಿಯಮ ಶೇ. 50 ರಷ್ಟು ನಿವಾಸಿಗಳು ಮಧ್ಯ ನಿಷೇಧದ ಪರವಾಗಿ ಮತ ಚಲಾಯಿಸಿದರೆ ಮದ್ಯದಂಗಡಿಯೊಂದನ್ನು ಮುಚ್ಚುವ ಅಧಿಕಾರವನ್ನು ಪಂಚಾಯತ್‌ಗೆ ನೀಡುತ್ತದೆ.

ಈ ಫಲಿತಾಂಶದಿಂದ ನಮಗೆ ಸಂತೋಷವಾಗಿದೆ. ನಮ್ಮ ಹಳ್ಳಿಯ ಜನ ಬಯಸಿದಂತೆ ಅಂತಿಮವಾಗಿ ಮದ್ಯ ನಿಷೇಧವಾಗಿದೆ. ಎಲ್ಲಾ ಮದ್ಯದಂಗಡಿಗಳನ್ನು ನಿಷೇಧಿಸಬೇಕೆಂದು ನಾವು ಬಯಸುತ್ತೇವೆ. ಮದ್ಯ ನಿಷೇಧ ಸಂಬಂಧ ನಾವು ಕಳೆದ ಹಲವಾರು ತಿಂಗಳುಗಳಿಂದ ಜನರ ಬೆಂಬಲದೊಂದಿಗೆ ನಡೆಸಿದ ಹೋರಾಟ ಫಲ ನೀಡಿದೆ ಎಂದು ಥಾನೆಟಾ ಗ್ರಾಮ ಸರ್ಪಂಚ್, ದೀಕ್ಷಾ ಚೌಹಾನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT