ಸಿಪಿಆರ್ ಪ್ರಕ್ರಿಯೆ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡುತ್ತಿರುವ ನರ್ಸ್ ವನಜಾ 
ವಿಶೇಷ

ಸಿಪಿಆರ್ ಮೂಲಕ 20 ವರ್ಷದ ಯುವಕನ ಜೀವ ಉಳಿಸಿದ ನರ್ಸ್!

ಆರೋಗ್ಯ ವಿಷಯದಲ್ಲಿ ತುರ್ತು ಪರಿಸ್ಥಿತಿ ಎದುರಿಸುತ್ತಿರುವವರಿಗೆ ಸಿಪಿಆರ್ ಮೂಲಕ ಪ್ರಥಮ ಚಿಕಿತ್ಸೆ ವಿಧಾನದಿಂದ ಜೀವ ಉಳಿಸಿದಬಹುದೆಂದು ತಿಳಿದೇ ಇದೆ. ಇದೇ ಮಾದರಿಯನ್ನು ಬಳಸಿ ತಿರ್ಚಿಯ ದಾದಿಯೊಬ್ಬರು 20 ವರ್ಷದ ಯುವಕನ ಜೀವ ಉಳಿಸಿದ್ದಾರೆ. 

ತಿರುಚ್ಚಿ: ಆರೋಗ್ಯ ವಿಷಯದ್ಲಲಿ ತುರ್ತು ಪರಿಸ್ಥಿತಿ ಎದುರಿಸುತ್ತಿರುವವರಿಗೆ ಸಿಪಿಆರ್ ಮೂಲಕ ಪ್ರಥಮ ಚಿಕಿತ್ಸೆ ವಿಧಾನದಿಂದ ಜೀವ ಉಳಿಸಿದಬಹುದೆಂದು ತಿಳಿದೇ ಇದೆ. ಇದೇ ಮಾದರಿಯನ್ನು ಬಳಸಿ ತಿರುಚ್ಚಿಯ ದಾದಿಯೊಬ್ಬರು 20 ವರ್ಷದ ಯುವಕನ ಜೀವ ಉಳಿಸಿದ್ದಾರೆ. 

ಸಿಪಿಆರ್ ನೀಡುತ್ತಿರುವ ನರ್ಸ್ ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಮನ್ನಾರ್ ಗುಡಿ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿರುವ ವನಜಾ, ತಮ್ಮ ಪತಿಯೊಂದಿಗೆ ಸಮಾರಂಭವೊಂದರಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನೋರ್ವ ಮೇಕೆಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ.

ನಾಡಿ ಮಿಡಿತ ಕ್ಷೀಣ ಪರಿಸ್ಥಿತಿಯಲ್ಲಿದ್ದ ಆತನ ಪರಿಸ್ಥಿತಿಯನ್ನು ಕಂಡು ವನಜಾ 2-3 ನಿಮಿಷಗಳ ಕಾಲ ಸಿಪಿಆರ್ ಪ್ರಕ್ರಿಯೆ ಮೂಲಕ ಆತನ ರಕ್ಷಣೆಗೆ ಮುಂದಾದರು. ಸಿಪಿಆರ್ ಪೂರ್ಣಗೊಳ್ಳುತ್ತಿದ್ದಂತೆಯೇ ಆತ ಪ್ರಜ್ಞಾಹೀನ ಸ್ಥಿತಿಯಿಂದ ಹೊರಬಂದಿದ್ದ. ಆ ವೇಳೆಗೆ ವನಜಾ ಅವರ ಪತಿ 108 ಆಂಬುಲೆನ್ಸ್ ಸೇವೆಗೆ ಕರೆ ಮಾಡಿದ್ದರು. 

ಪ್ರಾಥಮಿಕ ಚಿಕಿತ್ಸೆಯ ನಂತರ ಆತನನ್ನು ತಂಜಾವೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಮಾಹಿತಿಯ ಪ್ರಕಾರ ಯುವಕ ಗುಣಮುಖನಾಗುತ್ತಿದ್ದಾನೆ.
 
ಈ ಘಟನೆ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವನಜಾ ಅವರನ್ನು ಮಾತನಾಡಿಸಿದ್ದು, ಪ್ರತಿಕ್ರಿಯೆ ನೀಡಿರುವ ಆಕೆ ಇದು ನನ್ನ ಕರ್ತವ್ಯವಷ್ಟೇ ಎಂದಿದ್ದಾರೆ. ನಾನು ವಿಶೇಷವಾದದ್ದೇನನ್ನೂ ಮಾಡಿಲ್ಲ ನಾವು ದಿನ ನಿತ್ಯ ಆಸ್ಪತ್ರೆಯಲ್ಲಿ ಸಿಪಿಆರ್ ನ್ನು ಮಾಡುತ್ತಿರುತ್ತೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT