ತಮ್ಮ ಗ್ರಂಥಾಲಯದಲ್ಲಿ ಡಾ.ಕುರೆಲ್ಲ ವಿಟ್ಠಲಾಚಾರ್ಯ 
ವಿಶೇಷ

50ರ ದಶಕದಲ್ಲಿ ಪುಸ್ತಕ ಕೊಂಡು ಓದಲಾಗದ ಬಾಲಕ, ಇಂದು 2 ಲಕ್ಷ ಪುಸ್ತಕಗಳಿರುವ ಗ್ರಂಥಾಲಯ ಸ್ಥಾಪಕ

ವಿಟ್ಠಲಾಚಾರ್ಯ ಅವರಿಗೀಗ 84 ವರ್ಷ ವಯಸ್ಸು. ಉಪನ್ಯಾಸಕರಾಗಿ ಕೆಲಸಕ್ಕೆ ಸೇರಿದ್ದ ಅವರು ಕಾಲೇಜು ಪ್ರಿನ್ಸಿಪಾಲರಾಗಿ ನಿವೃತ್ತರಾಗಿದ್ದಾರೆ. ಭುವನಗಿರಿ ಜಿಲ್ಲೆಯ ರಾಮಣ್ಣ ಪೇಟ್ ಎಂಬಲ್ಲಿ ಅವರು ನೆಲೆಸಿದ್ದಾರೆ. 

ಹೈದರಾಬಾದ್: ಬಹಳ ಹಿಂದೆ ಭಾರತ ಸರ್ಕಾರದೊಡನೆ ಹೈದರಾಬಾದ್ ರಾಜ್ಯ ವಿಲೀನವಾಗುವುದನ್ನು ವಿರೋಧಿಸಿದ್ದ ರಜಾಕರು, ರಾಜ್ಯದಲ್ಲಿ ದೊಂಬಿ ನಡೆಸಿದ್ದರು. ಆ ಸಮಯದಲ್ಲಿ ಬಾಲಕನೋರ್ವ ತನ್ನ ಹಳ್ಳಿಯಲ್ಲಿ ಒಂದು ಗ್ರಂಥಾಲಯವನ್ನು ತೆರೆದಿದ್ದ.

ಹಳ್ಳಿಗರು ವಿದ್ಯಾವಂತರಾದರೆ ತನಗೇ ಕಂಟಕ ಎಂದು ತಿಳಿದ ಜಮೀನ್ದಾರರು ಆ ಗ್ರಂಥಾಲಯವನ್ನು ಮುಚ್ಚಿಹಾಕಿದ್ದರು. ಮುಂದೆ ಅದೇ ಬಾಲಕ ಓದಿ ವಿದ್ಯಾವಂತನಾಗಿ ಉಪನ್ಯಾಸಕನಾಗಿ ಕೆಲಸಕ್ಕೆ ಸೇರುತ್ತಾರೆ. ತೆಲುಗು ಸಾಹಿತ್ಯ ವಲಯದಲ್ಲಿ ಉತ್ತಮ ಬರಹಗಾರ ಎಂದು ಹೆಸರು ಪಡೆಯುತ್ತಾರೆ. ಅನೇಕ ಪ್ರತಿಷ್ಟಿತ ಪ್ರಶಸ್ತಿಗಳು, ಬಿರುದುಗಳು ಅವರನ್ನರಸಿ ಬರುತ್ತವೆ. 

ಇಂದು ಆ ಮಹನೀಯರು ಸ್ಥಾಪಿಸಿರುವ ಗ್ರಂಥಾಲಯದಲ್ಲಿ 2 ಲಕ್ಷ ಪುಸ್ತಕಗಳಿವೆ. ಆ ಮಹನೀಯರ ಹೆಸರು ಕುರೆಲ್ಲ ವಿಟ್ಠಲಾಚಾರ್ಯ. ಅವರಿಗೀಗ 84 ವರ್ಷ ವಯಸ್ಸು. ಉಪನ್ಯಾಸಕರಾಗಿ ಕೆಲಸಕ್ಕೆ ಸೇರಿದ್ದ ಅವರು ಕಾಲೇಜು ಪ್ರಿನ್ಸಿಪಾಲರಾಗಿ ನಿವೃತ್ತರಾಗಿದ್ದಾರೆ. ಭುವನಗಿರಿ ಜಿಲ್ಲೆಯ ರಾಮಣ್ಣ ಪೇಟ್ ಎಂಬಲ್ಲಿ ಅವರು ನೆಲೆಸಿದ್ದಾರೆ. 

ಇದುವರೆಗೂ ಅವರು ಒಟ್ಟು 22 ಪುಸ್ತಕಗಳನ್ನು ರಚಿಸಿದ್ದಾರೆ. ತಾವು ಚಿಕ್ಕವರಾಗಿದ್ದಾಗ ಪುಸ್ತಕ ಕೊಂಡು ಓದಲು ಶಕ್ತರಾಗಿರಲಿಲ್ಲ. ಹೀಗಾಗಿ ನೆರೆಹೊರೆಯವರು, ಸ್ನೇಹಿತರಿಂದ ಪುಸ್ತಕ ಪಡೆದು ಒಂದೇ ದಿನದಲ್ಲಿ ಓದಿ ಹಿಂದಿರುಗಿಸುತ್ತಿದ್ದರು. ಈ ಕಷ್ಟ ಇನ್ನೊಬ್ಬರಿಗೆ ಬರಬಾರದು ಎನ್ನುವ ಉದ್ದೇಶವೇ ಗ್ರಂಥಾಲಯ ಸ್ಥಾಪನೆಗೆ ಕಾರಣವಾಯಿತು.  ಈ ಗ್ರಂಥಾಲಯ ಸ್ಥಾಪನೆಗೆ ವಿಟ್ಠಲಾಚಾರ್ಯ ಅವರ್ ವಿದ್ಯಾರ್ಥಿಗಳೂ ಕಾಣಿಕೆ ನೀಡಿದ್ದಾರೆ ಎನ್ನುವುದು ವಿಶೇಷ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT