ದ್ರವ ತ್ಯಾಜ್ಯದಿಂದ ಗೊಬ್ಬರ ತಯಾರಿಸುತ್ತಿರುವ ದೃಶ್ಯ 
ವಿಶೇಷ

ಒಣ ತ್ಯಾಜ್ಯ ರೀಸೈಕಲ್, ದ್ರವ ತ್ಯಾಜ್ಯದಿಂದ ಸಾವಯವ ಗೊಬ್ಬರ: ರೂರ್ಕೆಲ ಮಹಾನಗರ ಪಾಲಿಕೆಯ ಮಾದರಿ

ತ್ಯಾಜ್ಯದಲ್ಲಿ ಪತ್ತೆಯಾದ, ಪುನರ್ಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್ ವಸ್ತುಗಳನ್ನು ದಾಲ್ಮಿಯಾ ಸಿಮೆಂಟ್ ಕಾರ್ಖಾನೆಗೆ ಕಳಿಸಿಕೊಡಲಾಗುವುದು.

ಭುವನೇಶ್ವರ: ಒಡಿಶಾದ ರೂರ್ಕೆಲಾ ಮಹಾನಗರ ಪಾಲಿಕೆ (ಆರ್ ಎಂ ಸಿ) ನಗರದ ತ್ಯಾಜ್ಯ ಸಮಸ್ಯೆಗೆ ಸರಳ ಹಾಗೂ ಪರಿಸರಸ್ನೇಹಿ ಪರಿಹಾರವನ್ನು ಕಂಡುಕೊಂಡಿದೆ. 

ನಗರದಾದ್ಯಂತ ಪ್ರತ್ಯೇಕವಾಗಿ ಸಂಗ್ರಹಿಸಲಾಗುವ ಒಣ ತ್ಯಾಜ್ಯವನ್ನು ರೀಸೈಕಲ್ ಮಾಡಿ ಮಾರಾಟ ಮಾಡಿದರೆ, ದ್ರವ ತ್ಯಾಜ್ಯವನ್ನು ಗೊಬ್ಬರವನ್ನಾಗಿಸಿ ಮಾರಾಟ ಮಾಡಲಾಗುತ್ತಿದೆ.

ನಗರದಲ್ಲಿ ಒಟ್ಟು 8 ಮೈಕ್ರೊ ಕಾಂಪೋಸ್ಟಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಡಿಸ್ಪೋಸಲ್ ಮಾಡಲಾಗುತ್ತಿದೆ. 

ಮೊದಲಿಗೆ ತ್ಯಾಜ್ಯವನ್ನು ಒಣ ಮತ್ತು ದ್ರವ ಎಂದು ಪ್ರತ್ಯೇಕಿಸಲಾಗುವುದು. ನಂತರ ದ್ರವ ತ್ಯಾಜ್ಯವನ್ನು ಪರಿಷ್ಕರಿಸಿ ಸಾವಯವ ಗೊಬ್ಬರವನ್ನಾಗಿ ಮಾರ್ಪಾಡು ಮಾಡಲಾಗುತ್ತಿದೆ. ಪುನರ್ಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್ ವಸ್ತುಗಳನ್ನು ದಾಲ್ಮಿಯಾ ಸಿಮೆಂಟ್ ಕಾರ್ಖಾನೆಗೆ ಕಳಿಸಿಕೊಡಲಾಗುವುದು. ಒಣ ತ್ಯಾಜ್ಯವನ್ನು ರೀಸೈಕಲ್ ಮಾಡಲಾಗುತ್ತಿದೆ.

ಈ ರೀತಿಯಾಗಿ ತ್ಯಾಜ್ಯವನ್ನು ಪರಿಸರಸ್ನೇಹಿ ಮಾರ್ಗಗಳಿಂದ ಪರಿಷ್ಕರಿಸಿ ವ್ಯರ್ಥವಾಗದಂತೆ ಪುನರ್ಬಳಕೆ ಮಾಡುವ ವಿಧಾನವನ್ನು ಅಳವಡಿಸಿಕೊಳ್ಳುವುದರ ಮೂಲಕ ರೂರ್ಕೆಲ ಮಾದರಿಯೆನಿಸಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT