ಹಕ್ಕಿ ಮರಿ 
ವಿಶೇಷ

ಯಾವ ಜೀವವೂ ಪುಟ್ಟದಲ್ಲ: ಲಿಫ್ಟ್ ಸಂಧಿಯಲ್ಲಿ ಸಿಲುಕಿಕೊಂಡ ಹಕ್ಕಿ ಮರಿ; ಅಗ್ನಿಶಾಮಕ ದಳ ಕಾರ್ಯಾಚರಣೆ

ಕೇವಲ ಒಂದು ಹಕ್ಕಿ ಮರಿಯನ್ನು ರಕ್ಷಿಸಲು ಅಧಿಕಾರಿಗಳು, ಸಿಬ್ಬಂದಿ ವರ್ಗ ಬರುವುದೆಂಬ ಕಲ್ಪನೆ ಅಲ್ಲಿ ಯಾರಿಗೂ ಇರಲಿಲ್ಲ. ಆದರೆ ಅಂಥದ್ದೊಂದು ಘಟನೆ ಅಂದು ಸಂಭವಿಸಿತು.

ಕಾಸರಗೋಡು: ಯಾವುದೇ ಒಂದು ಜೀವ ಪುಟ್ಟದಲ್ಲ ಎನ್ನುವುದಕ್ಕೆ ನಿದರ್ಶನವೆಂಬಂತೆ ಕಾಸರಗೋಡಿನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಘಟನೆ ನಡೆದ ಸ್ಥಳ ಸೆಂಟ್ರಲ್ ಯೂನಿವರ್ಸಿಟಿ.

ಆ ಯೂನಿವರ್ಸಿಟಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭೇಟಿ ನೀಡಲಿದ್ದರು. ಹೀಗಾಗಿ ಪೊಲೀಸರು ಕಟ್ಟಡವನ್ನು ಪಹರೆ ಕಾಯುತ್ತಿದ್ದರು. ಈ ಸಂದರ್ಭ ತಾಯಿ ಹಕ್ಕಿಯೊಂದು ಪೊಲೀಸ್ ಪೇದೆಯೊಬ್ಬರ ಸುತ್ತ ಹಾರಾಡುತ್ತಾ ಅವರ ಗಮನ ಸೆಳೆಯಲು ಯತ್ನಿಸುತ್ತಿತ್ತು. ಈ ವಿಚಾರವನ್ನು ಪೇದೆ ಉಪನ್ಯಾಸಕಿ ಆಶಾಲಕ್ಷ್ಮಿ ಅವರ ಗಮನಕ್ಕೆ ತಂದಿದ್ದರು. 

ಆಶಾಲಕ್ಷ್ಮಿ ಅವರಿಗೆ ಯೂನಿವರ್ಸಿಟಿ ಕಟ್ಟಡದಲ್ಲಿ ಗೂಡು ಮಾಡಿಕೊಂಡಿದ್ದ ಹಕ್ಕಿಗಳ ಪರಿಚಯವಿತ್ತು. ಈ ಹಿಂದೆ ಹಲವು ಬಾರಿ ಆ ಹಕ್ಕಿಗಳನ್ನು ಗಮನಿಸಿ ಅವುಗಳ ಆಟ ಕಂಡು ಹರ್ಷಿಸಿದ್ದರು ಕೂಡಾ.

ಹಕ್ಕಿಯ ಚೀರಾಟ ಕಂಡು ಆಶಾಲಕ್ಷ್ಮಿ ಪರಿಶೀಲಿಸಿದಾಗ ಆ ಹಕ್ಕಿ ಮರಿ ಲಿಫ್ಟ್ ನಲ್ಲಿ ಸಿಲುಕಿಕೊಂಡಿರುವುದು ತಿಳಿದುಬಂದಿತ್ತು. ಒಡನೆಯೇ ಅವರು ರಕ್ಷಣಾ ಅಧಿಕಾರಿಗಳಿಗೆ ಕರೆ ಮಾಡಲು ಮುಂದಾದರು. ಆದರೆ ಕೇವಲ ಹಕ್ಕಿಯನ್ನು ರಕ್ಷಿಸಲು ಅವರು ಬರುವರೇ ಎನ್ನುವ ಆತಂಕ ಅವರಿಗಿತ್ತು.

ಅವರ ಅಚ್ಚರಿಗೆ ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರು. ಕೆಲ ಗಂಟೆಗಳ ಪರಿಶ್ರಮದ ನಂತರ ಅವರು ಹಕ್ಕಿ ಮರಿಯನ್ನು ರಕ್ಷಿಸುವಲ್ಲಿ ಸಫಲರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ