ಸಾಂದರ್ಭಿಕ ಚಿತ್ರ 
ವಿಶೇಷ

ಹಿಮಾಚಲ ಪ್ರದೇಶ: 18,570 ಅಡಿ ಆಳದ ಕಂದಕದಿಂದ ಗಾಯಗೊಂಡ ಚಾರಣಿಗನನ್ನು ರಕ್ಷಿಸಿದ ಐಟಿಬಿಪಿ ತಂಡ!

ಜೀವ ರಕ್ಷಕ ಕಾರ್ಯಾಚರಣೆಯೊಂದರಲ್ಲಿ, 19 ನೇ ಬೆಟಾಲಿಯನ್ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆ 18 ಸಾವಿರದ 570 ಅಡಿ ಆಳದಲ್ಲಿ ಬಿದ್ದು ಗಾಯಗೊಂಡಿದ್ದ ಚಾರಣಿಗನನ್ನು ರಕ್ಷಣೆ ಮಾಡಿದ್ದಾರೆ.

ಕಲ್ಲು: ಜೀವ ರಕ್ಷಕ ಕಾರ್ಯಾಚರಣೆಯೊಂದರಲ್ಲಿ, 19 ನೇ ಬೆಟಾಲಿಯನ್ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆ 18 ಸಾವಿರದ 570 ಅಡಿ ಆಳದಲ್ಲಿ ಬಿದ್ದು ಗಾಯಗೊಂಡಿದ್ದ ಚಾರಣಿಗನನ್ನು ರಕ್ಷಣೆ ಮಾಡಿದ್ದಾರೆ.

ಹಿಮಾಚಲ ಪ್ರದೇಶದ ಶ್ರೀಖಂಡ್ ಮಹಾದೇವ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಾಯಕಾರಿ ಅತಿ ಎತ್ತರ ಸಾಂದ್ರತೆಯ ಕಾರ್ಯಾಚರಣೆಯಲ್ಲಿ ಐಟಿಬಿಪಿ ಸಿಬ್ಬಂದಿ ಗಾಯಗೊಂಡ ಚಾರಣಿಗನನ್ನು ಶ್ರೀಖಂಡ್ ಮಹದೇವ್ ಟ್ರೆಕ್ಕಿಂಗ್ ನ ಎತ್ತರ ಪ್ರದೇಶ ಸರ್ಕಂಡ್ ನಿಂದ 18 ಕಿಲೋ ಮೀಟರ್ ದೂರದವರೆಗೆ ಹೊತ್ತು ಸಾಗಿದ್ದಾರೆ.

ಇಡೀ ಮಾರ್ಗವು ಎತ್ತರದ ಅಪಾಯದ ಸವಾಲುಗಳಿಂದ ತುಂಬಿತ್ತು, ಇದರಲ್ಲಿ ಜವಾನರು ಸಿಕ್ಕಿಬಿದ್ದ ಚಾರಣಿಗರನ್ನು ಹೆಚ್ಚು ವೃತ್ತಿಪರ ರೀತಿಯಲ್ಲಿ ರಕ್ಷಿಸಿದರು. 19 ನೇ ಬೆಟಾಲಿಯನ್ ಐಟಿಬಿಪಿಯ ಪರ್ವತಾರೋಹಿಗಳು ಗಾಯಾಳುವನ್ನು 18 ಕಿಲೋ ಮೀಟರ್ ಗಿಂತಲೂ ಹೆಚ್ಚು ಸ್ಟ್ರೆಚರ್‌ನಲ್ಲಿ ಸಾಗಿಸಿ ಸುರಕ್ಷಿತವಾಗಿ ಕರೆತಂದಿದ್ದಾರೆ.

ಗಾಯಾಳು ಚಾರಣಿಗನನ್ನು ನಂತರ ನಾಗರಿಕ ಆಡಳಿತ ವಿಭಾಗಕ್ಕೆ ಹಸ್ತಾಂತರಿಸಲಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT