ಗದಗ ಪೊಲೀಸ್ ಅಧಿಕಾರಿ ಯತೀಶ್ 
ವಿಶೇಷ

ಲಾಕ್ಡೌನ್ ಸಂಕಷ್ಟ: ವಲಸೆ ಕಾರ್ಮಿಕರಿಗೆ ಗದಗ ಪೊಲೀಸರ ನೆರವು

ಲಾಕ್ಡೌನ್ ಪರಿಣಾಮ ತಮ್ಮೂರಿಗೂ ತೆರಳಲು ಸಾಧ್ಯವಾಗದೆ, ಅಗತ್ಯ ವಸ್ತುಗಳನ್ನು ಖರೀದಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರ ನೆರವಿಗೆ ಗದಗ ಜಿಲ್ಲೆಯ ಪೊಲೀಸರು ಮುಂದಾಗಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. 

ಗದಗ: ಲಾಕ್ಡೌನ್ ಪರಿಣಾಮ ತಮ್ಮೂರಿಗೂ ತೆರಳಲು ಸಾಧ್ಯವಾಗದೆ, ಅಗತ್ಯ ವಸ್ತುಗಳನ್ನು ಖರೀದಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರ ನೆರವಿಗೆ ಗದಗ ಜಿಲ್ಲೆಯ ಪೊಲೀಸರು ಮುಂದಾಗಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. 

ವಾರ್ಷಿಕ ಜಾತ್ರೆಗಳು ನಡೆಯುವ ಹಿನ್ನೆಲೆಯಲ್ಲಿ ಕೃಷಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ವಿವಿಧ ರಾಜ್ಯಗಳಿಂದ ಹಲವು ಕಾರ್ಮಿಕರು ಗದಗ ಜಿಲ್ಲೆಗೆ ಆಗಮಿಸಿದ್ದರು. ಆದರೆ, ಲಾಕ್ಡೌನ್ ಬಗ್ಗೆ ತಿಳಿಯದ ಕಾರಣ ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. 

ಈ ಕುರಿತು ಮಾಹಿತಿ ತಿಳಿದ ಗದಗ ಜಿಲ್ಲೆಯ ಪೊಲೀಸ್ ಅಧಿಕಾರಿ ಯತೀಶ್ ಹಾಗೂ ಅವರ ಸಿಬ್ಬಂದಿ ಕಾರ್ಮಿಕರಿಗೆ ಸಹಾಯದ ಹಸ್ತ ಚಾಚಿದ್ದಾರೆ. ಇದಷ್ಟೇ ಅಲ್ಲದೆ, ಹಲವು ಸಂಘಟನೆಗಳು ಹಾಗೂ ಜನರೂ ಕೂಡ ನೆರವಿಗೆ ಧಾವಿಸಿದ್ದಾರೆ. 

ಲಾಕ್ಡೌನ್ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಗ್ರಾಮದಲ್ಲಿ ಕೃಷಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡಲು ಇಲ್ಲಿಗೆ ಬಂದಿದ್ದೆವು. ಇದೀಗ ನಮಗೆ ಯಾವುದೇ ಕೆಲಸಗಳೂ ಇಲ್ಲ. ಹೀಗಾಗಿ ಭವಿಷ್ಯದ ಬಗ್ಗೆ ಚಿಂತೆಯಾಗಿದೆ. ನಮ್ಮ ಬಳಿಯಿದ್ದ ಎಲ್ಲಾ ಹಣವೂ ಖಾಲಿಯಾಯಿತು. ಆದಾಯ ಮೂಲಗಳೂ ಇಲ್ಲ. ಆದರೆ, ಅದೃಷ್ಟವಶಾತ್ ಪೊಲೀಸರು ಸಹಾಯಕ್ಕೆ ಬಂದಿದ್ದು, ಆಹಾರ ಕಿಟ್ ಗಳನ್ನು ನೀಡಿದ್ದಾರೆ. ಇದೀಗ ನಮ್ಮ ಮಕ್ಕಳಿಗೆ ಆಹಾರ ಸಿಕ್ಕಿದೆ ಎಂದು ಕಾರ್ಮಿಕರು ಹೇಳಿದ್ದಾರೆ. 

ದಾನಿಗಳು ಹಾಗೂ ಪೊಲೀಸ್ ಇಲಾಖೆಯಿಂದ ಬಂದ ನೆರವಿನಿಂದ ಸಹಾಯ ಮಾಡಲಾಗುತ್ತಿದೆ. ಸಹಾಯ ಬಯಸುತ್ತಿರುವ ಜನರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇಲಾಖೆಯು ಸಮನ್ವಯ ಸಾಧಿಸುತ್ತಿದ್ದು, ಸಾಧ್ಯವಾದಷ್ಟು ಜನರಿಗೆ ಸಹಾಯ ಮಾಡುತ್ತಿದೆ ಎಂದು ಪೊಲೀಸ್ ಅಧಿಕಾರಿ ಯತೀಶ್ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT