ಜಾನುವಾರುಗಳ ಚಾಕಲೇಟ್ ಕೇಕ್ 
ವಿಶೇಷ

ಜಾನುವಾರುಗಳಿಗೆ ಚಾಕಲೇಟ್ ಕೇಕ್: ವಿನೂತನ ಪ್ರಯೋಗದಿಂದ ಹಾಲಿನ ಇಳುವರಿ ಹೆಚ್ಚಳದ ಭರವಸೆ

ಬಡ ರೈತರಿಗೆ ನೆರವಾಗುವ ಸಲುವಾಗಿ ಜಾನುವಾರುಗಳಿಗೆ ಅಗತ್ಯವಿರುವ ಪೋಷಕಾಂಶಗಳು ಹಾಗೂ ನಾಲಗೆಗೆ ರುಚಿಸುವ ಪದಾರ್ಥಗಳನ್ನು ಸೇರಿಸಿ ಸಂಶೋಧಕರು ಚಾಕಲೇಟ್ ಕೇಕ್ ತಯಾರಿಸಿದ್ದಾರೆ. ಒಂದೊಂದು ಗಟ್ಟಿಯೂ 2.5- 3 ಕೆ.ಜಿ ತೂಕವಿದೆ. 

ಭೋಪಾಲ್: ಮಕ್ಕಳು ಆಸೆ ಪಟ್ಟು ಚಾಕಲೇಟ್ ಗಾಗಿ ತಿನ್ನುವುದು ಸಹಜ. ಹದಿಹರೆಯದ ಕಾಲೇಜು ತರುಣಿಯರೂ ಉಡುಗೊರೆಯಾಗಿ ಚಾಕಲೇಟನ್ನು ಅಪೇಕ್ಷಿಸುವುದೂ ಸಹಜವೇ. ಮುಂದಿನ ದಿನಗಳಲ್ಲಿ ಮನುಷ್ಯರು ಮಾತ್ರವಲ್ಲದೆ ಜಾನುವಾರುಗಳೂ ಚಾಕಲೇಟಿಗಾಗಿ ಬೇಡಿಕೆ ಇಡುವ ಕಾಲವೂ ಸನ್ನಿಹಿತವಾಗಿದೆ. ಅದಕ್ಕೆ ಮುನ್ನುಡಿ ಬರೆದಿದೆ ಮಧ್ಯಪ್ರದೇಶದ, ಜಬಲ್ಪುರದಲ್ಲಿರುವ ನಾನಾಜಿ ಪಶುವೈದ್ಯಕೀಯ ಕೇಂದ್ರದ (NDVSU) ಸಂಶೋಧಕರು. ಅವರು ಜಾನುವಾರುಗಳಿಗಾಗಿ ಚಾಕಲೇಟ್ ಕೇಕ್(ಗಟ್ಟಿ) ಗಳನ್ನು ತಯಾರಿಸುವಲ್ಲಿ ಸಫಲರಾಗಿದ್ದಾರೆ.  

ಹೈನುಗಾರಿಕೆಯಲ್ಲಿ ತೊಡಗಿರುವ ಬಡ ರೈತರಿಗೆ ಈ ಚಾಕಲೇಟ್ ಗಟ್ಟಿಗಳು ವರದಾನವಾಗಬಲ್ಲುದು ಎಂದು ಸಂಶೋಧಕರು ತಿಳಿಸಿದ್ದಾರೆ. ನಿಜ ಹೇಳಬೇಕೆಂದರೆ ಈ ಜಾನುವಾರುಗಳ ಚಾಕಲೇಟ್ ಅಭಿವೃದ್ಧಿಯ ಉದ್ದೇಶವೇ ಅದು. 

ಹಾಲಿನ ಇಳುವರಿ ಹೆಚ್ಚಿಸಬೇಕೆಂದರೆ ಜಾನುವಾರುಗಳಿಗೆ ಚೆನ್ನಾಗಿ ಮೇವು ಹಾಕಬೇಕು. ಬಡ ರೈತರು ಮೇವು ಒದಗಿಸಲು ಸಾಧ್ಯವಾಗದೆ ಜಾನುವಾರುಗಳಿಂದ ಹಾಲಿನ ಇಳುವರಿ ಪಡೆಯುವಲ್ಲಿ ಹಿಂದೆ ಬೀಳುತ್ತಿರುವುದು ಸಂಶೋಧಕರ ಗಮನಕ್ಕೆ ಬಂದಿತ್ತು. 

ಬಡ ರೈತರಿಗೆ ನೆರವಾಗುವ ಸಲುವಾಗಿ ಜಾನುವಾರುಗಳಿಗೆ ಅಗತ್ಯವಿರುವ ಪೋಷಕಾಂಶಗಳು ಹಾಗೂ ನಾಲಗೆಗೆ ರುಚಿಸುವ ಪದಾರ್ಥಗಳನ್ನು ಸೇರಿಸಿ ಸಂಶೋಧಕರು ಚಾಕಲೇಟ್ ಕೇಕ್ ತಯಾರಿಸಿದ್ದಾರೆ. ಒಂದೊಂದು ಗಟ್ಟಿಯೂ 2.5- 3 ಕೆ.ಜಿ ತೂಕವಿದೆ. 

ಈ ಉತ್ಪನ್ನ ಐ ಎಸ್ ಒ ಮತ್ತು ಬಿಐಎಸ್ ಸಂಸ್ಥೆಗಳಿಂದ ಪ್ರಮಾಣೀಕೃತಗೊಂಡಿದೆ. ಈ ಚಾಕಲೇಟ್ ಕೇಕ್ ಗೆ ನರ್ಮದಾ ವಿಟಮಿನ್ ಲಿಕ್ ಎಂದು ನಾಮಕರಣ ಮಾಡಲಾಗಿದೆ. ಈ ಚಾಕಲೇಟು ಸೇವನೆಯಿಂದ ಜಾನುವಾರುಗಳು ಶೇ.15- 20 ಪ್ರತಿಶತ ಹೆಚ್ಚಿನ ಪ್ರಮಾಣದ ಹಾಲನ್ನು ನೀಡುವ ಭರವಸೆಯನ್ನು ಸಂಶೋಧಕರು ನೀಡಿದ್ದಾರೆ. ಈ ಉತ್ಪನ್ನ ಕೇವಲ ಜಾನುವಾರುಗಳಿಗೆ ಮಾತ್ರ ಸೀಮಿತವಾಗಿಲ್ಲ. ಎಮ್ಮೆ, ಆಡು, ಕುರಿ, ಹಂದಿಗಳ ಪೋಷಣೆಗೂ ನೆರವಾಗುವುದರಿಂದ ಅವುಗಳಿಗೂ ನೀಡಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

'ಮುಂದುವರಿಯಲು ನಿರ್ಧರಿಸಿದ್ದೇನೆ': ಸ್ಮೃತಿ ಮಂಧಾನ ಬಳಿಕ ಮದುವೆ ರದ್ದಾದ ಬಗ್ಗೆ ಪಲಾಶ್ ಮುಚ್ಚಲ್ ಮಾತು!

500 ಕೋಟಿ ರು ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ; ನವಜೋತ್ ಸಿಧು ಪತ್ನಿ ಹೇಳಿಕೆ

SCROLL FOR NEXT