ಪ್ರಶಸ್ತಿ ಸ್ವೀಕರಿಸುತ್ತಿರುವ ಯಶಸ್ವಿ 
ವಿಶೇಷ

ಚಿಕನ್, ಫಿಶ್ ತ್ಯಾಜ್ಯದಿಂದ ಪರಿಸರಸ್ನೇಹಿ ಉತ್ಪನ್ನ ತಯಾರಿ: ಪಿಯುಸಿ ವಿದ್ಯಾರ್ಥಿನಿಗೆ ರಾಷ್ಟ್ರಪತಿ ಪ್ರಶಸ್ತಿ

ಪುಕ್ಕಗಳಲ್ಲಿ ಶೇ.90ರಷ್ಟು ಕೆರಾಟಿನ್ ಇರುತ್ತದೆ, ಮೀನಿನ ಮುಳ್ಳುಗಳಲ್ಲಿ ಕೊಲಾಜೆನ್, ಕ್ಯಾಲ್ಷಿಯಂ ಕಾರ್ಬೊನೇಟ್ ಇರುತ್ತದೆ. ಈ ಅಂಶಗಳು ಇರುವುದರಿಂದ ಅವನ್ನು ಹಗುರ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಬಳಸಬಹುದು ಎನ್ನುತ್ತಾರೆ ಯಶಸ್ವಿ. 

ವಿಜಯವಾಡ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮಾಟ್ಲಾ ಯಶಸ್ವಿ ರಾಷ್ಟ್ರಪತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶೀಘ್ರದಲ್ಲಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಇನ್ಸ್ ಪೈರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಚಿಕನ್ ಮತ್ತು ಫಿಶ್ ತ್ಯಾಜ್ಯದಿಂದ ಪರಿಸರಸ್ನೇಹಿ ವಸ್ತುಗಳನ್ನು ತಯಾರಿಸಿ ಅವರು ದೇಶದ ಗಮನ ಸೆಳೆದಿದ್ದಾರೆ. ದೇಶಾದ್ಯಂತ ಒಟ್ಟು 581 ಪ್ರಾಜೆಕ್ಟ್ ಗಳು ಪ್ರಶಸ್ತಿಗಾಗಿ ಸಲ್ಲಿಕೆಯಾಗಿದ್ದವು. ಅವುಗಳಲ್ಲಿ ಯಶಸ್ವಿ ಪ್ರಾಜೆಕ್ಟ್ ಆಯ್ಕೆಯಾಗಿದೆ. ತ್ಯಾಜ್ಯದಲ್ಲಿ ಚಿಕನ್ ಗರಿಗಳು ಮತ್ತು ಮೀನಿನ ಮುಳ್ಳುಗಳು ಪರಿಸರಕ್ಕೆ ಹಾನಿಯುಂಟುಮಾಡುತ್ತದೆ. 

ಪುಕ್ಕಗಳಲ್ಲಿ ಶೇ.90ರಷ್ಟು ಕೆರಾಟಿನ್ ಇರುತ್ತದೆ, ಮೀನಿನ ಮುಳ್ಳುಗಳಲ್ಲಿ ಕೊಲಾಜೆನ್, ಕ್ಯಾಲ್ಷಿಯಂ ಕಾರ್ಬೊನೇಟ್ ಇರುತ್ತದೆ. ಈ ಅಂಶಗಳು ಇರುವುದರಿಂದ ಅವನ್ನು ಹಗುರ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಬಳಸಬಹುದು ಎನ್ನುತ್ತಾರೆ ಯಶಸ್ವಿ. 

ಪುಕ್ಕಗಳ ಡಿಸ್ಕ್ ತಯಾರಿಸಿ ಅದನ್ನು ಕಾರ್ಖಾನೆಗಳ ಚಿಮಣಿ ಕೊಳವೆ ಮೇಲೆ ಇರಿಸುವುದರಿಂದ ವಾಯುಮಾಲಿನ್ಯವನ್ನು ನಿಯಂತ್ರಿಸಬಹುದು. ಚಿಕನ್ ಪುಕ್ಕ, ಮೀನಿನ ಮುಳ್ಳುಗಳನ್ನು ಬಳಸಿ ಬಯೊ ಪ್ಲಾಸ್ಟಿಕ್ ತಯಾರಿಸಬಹುದು ಎನ್ನುವುದರ ಬಗ್ಗೆಗೆ ಯಶಸ್ವಿ ಪ್ರಾಜೆಕ್ಟ್ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT