ಸಾಂದರ್ಭಿಕ ಚಿತ್ರ 
ವಿಶೇಷ

ಪತ್ನಿಯ ಕೊನೆಯಾಸೆ ಈಡೇರಿಸಿದ ಪತಿ: ಉಜ್ಜೈನಿ ದೇಗುಲಕ್ಕೆ 17 ಲಕ್ಷ ರೂ. ಚಿನ್ನಾಭರಣ ದೇಣಿಗೆ

ರಶ್ಮಿ ಪ್ರಭಾ ಎಂಬ ಮಹಿಳೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ದೇವಾಲಯದ ಭಕ್ತೆಯಾಗಿದ್ದರು. ಆಕೆ ಕಾಯಿಲೆಗೆ ತುತ್ತಾಗಿ ಹಾಸಿಗೆಯಿಂದ ಮೇಲೇಳಲು ಆಗದ ಸ್ಥಿತಿ ನಿರ್ಮಾಣವಾಗಿತ್ತು.

ರಾಂಚಿ: ಜಾರ್ಖಂಡ್ ರಾಜ್ಯದ ವ್ಯಕ್ತಿಯೋರ್ವ ತನ್ನ ಪತ್ನಿಯ ಕಡೆಯಾಸೆಯಂತೆ 17 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಉಜ್ಜೈನಿ ದೇಗುಲಕ್ಕೆ ದೇಣಿಗೆ ನೀಡಿದ ಅಚ್ಚರಿಯ ಘಟನೆ ನಡೆದಿದೆ. 

ರಶ್ಮಿ ಪ್ರಭಾ ಎಂಬ ಮಹಿಳೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ದೇವಾಲಯದ ಭಕ್ತೆಯಾಗಿದ್ದರು. ಆಕೆ ಆಗಾಗ್ಗೆ ದೇವಾಲಯಕ್ಕೆ ಭೇಟಿ ನೀಡುತ್ತಿದ್ದರು. ಆಕೆ ಕಾಯಿಲೆಗೆ ತುತ್ತಾಗಿ ಹಾಸಿಗೆಯಿಂದ ಮೇಲೇಳಲು ಆಗದ ಸ್ಥಿತಿ ನಿರ್ಮಾಣವಾಗಿತ್ತು.

ಈ ಸಂದರ್ಭದಲ್ಲಿ ಸಾಯುವ ಮುನ್ನ ದೇಗುಲಕ್ಕೆ ೧೭ ಲಕ್ಷ ರೂ. ಚಿನ್ನಾಭರಣ ದೇಣಿಗೆ ನೀಡಬೇಕು ಎಂಬ ಬಯಕೆಯನ್ನು ಪತಿ ಬಳಿ ಹಂಚಿಕೊಂಡಿದ್ದರು. ಅದರಂತೆಯೇ ಪತ್ನಿಯ ಕಡೆಯಾಸೆಯನ್ನು ಪತಿ ನೆರವೇರಿಸಿದ್ದಾರೆ. 

ಜೂನ್೨೮ರಂದು ದೇವಸ್ಥಾನವನ್ನು ಸಾರ್ವಜನಿಕರಿಗಾಗಿ ಮುಕ್ತಗೊಳಿಸಲಾಗಿತ್ತು. ಅಂದಿನಿಂದ ಅಕ್ಟೋಬರ್ ೧೫ರ ತನಕ ೨೩ ಕೋಟಿಗೂ ಅಧಿಕ ಹಣ ಭಕ್ತಾದಿಗಳಿಂದ ಸಂಗ್ರಹವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT