ಮಲಯಾಳಂ ನಟ, ರಾಜಕಾರಣಿ ಸುರೇಶ್ ಗೋಪಿಯವರಿಂದ ಸೀಬೆ ಗಿಡ ಸ್ವೀಕರಿಸುತ್ತಿರುವ ಮೋದಿ 
ವಿಶೇಷ

ಪ್ರಧಾನಿ ನರೇಂದ್ರ ಮೋದಿ ಮನೆಯಂಗಳ ತಲುಪಿದ ಕೇರಳ ಬಾಲಕಿಯ ಸೀಬೆ ಗಿಡ!

ಸಾವಯವ ಕೃಷಿಯ ಕನಸನ್ನು ಹೊತ್ತಿರುವ ಜಯಲಕ್ಷ್ಮಿ ಎನ್ನುವ 10ನೇ ತರಗತಿಯ ಬಾಲಕಿಗೆ ಸೇರಿದ ಗಿಡ ಅದು. ಈ ಹಿಂದೆ ಜಯಲಕ್ಷ್ಮಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಳು ಎನ್ನುವುದು ವಿಶೇಷ.

ಕೊಲ್ಲಂ: ಪ್ರಧಾನಿ ನರೇಂದ್ರ ಮೋದಿ ನಿವಾಸದ ಅಂಗಳದ ಉದ್ಯಾನವನದಲ್ಲಿ ಇನ್ನುಮುಂದೆ ಕೇರಳ ಬಾಲಕಿಯ ಸೀಬೆ ಗಿಡ ಹೂ ಬಿಡಲಿದೆ. ಸಾವಯವ ಕೃಷಿಯ ಕನಸನ್ನು ಹೊತ್ತಿರುವ ಜಯಲಕ್ಷ್ಮಿ ಎನ್ನುವ 10ನೇ ತರಗತಿಯ ಬಾಲಕಿಗೆ ಸೇರಿದ ಗಿಡ ಅದು. ಆಕೆ ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಪಂಡಲಂ ಊರಿನ ನಿವಾಸಿ.

ಬಾಲಕಿ ಜಯಲಕ್ಷ್ಮಿ ಬೆಳೆಸಿದ ಗಿಡವನ್ನು ಮಲಯಾಲಂ ಚಿತ್ರನಟ, ರಾಜಕಾರಣಿ ಸುರೇಶ್ ಗೋಪಿ ಉಡುಗೊರೆಯಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ್ದಾರೆ. ಜಯಲಕ್ಷ್ಮಿ ಆ ಗಿಡವನ್ನು ಸುರೇಶ್ ಗೋಪಿಯವರಿಗೆ ಉಡುಗೊರೆಯಾಗಿ ನೀಡಿದ್ದಳು.

ಜಯಲಕ್ಷ್ಮಿ ತನ್ನ ಮನೆಯ ಅಂಗಳದಲ್ಲಿ ಸಾವಯವ ಉದ್ಯಾನವನ ನಿರ್ಮಿಸಿದ್ದಾಳೆ. ಅದೇ ಕಾರಣಕ್ಕೆ ರಾಜ್ಯ ಸರ್ಕಾರದಿಂದ ಪ್ರಶಸ್ತಿಯನ್ನೂ ಪಡೆದಿದ್ದಾಳೆ. 

ಈ ಹಿಂದೆ ಜಯಲಕ್ಷ್ಮಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಳು ಎನ್ನುವುದು ವಿಶೇಷ. ಪತ್ರದಲ್ಲಿ ಸಾವಯವ ಕೃಷಿಯತ್ತ ಹೊರಳಲು ಯುವಜನತೆಗೆ ಸ್ಫೂರ್ತಿ ಮತ್ತು ಪ್ರೋತ್ಸಾಹ ನೀಡಬೇಕೆಂದು ಆಕೆ ಮೋದಿಯವರಲ್ಲಿ ಮನವಿ ಮಾಡಿಕೊಂಡಿದ್ದಳು.

ತನ್ನ ಗಿಡ ಪ್ರಧಾನಿ ಮೋದಿಯವರನ್ನು ತಲುಪುತ್ತದೆ ಎಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ ಎಂದು ಜಯಲಕ್ಷ್ಮಿ ಪ್ರತಿಕ್ರಿಯಿಸಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT