ಶಿಕ್ಷಕಿ ಅನಿತಾ ಮೇರಿ 
ವಿಶೇಷ

ಬಡವರು, ಕೋವಿಡ್‌ ಅನಾಥ ಮಕ್ಕಳಿಗೆ ಸಹಾಯ ಹಸ್ತಚಾಚಿ ಇತರರಿಗೆ ಮಾದರಿಯಾದ ದೈಹಿಕ ಶಿಕ್ಷಕಿ!

ಕೋವಿಡ್ ಸಾಂಕ್ರಾಮಿಕ ರೋಗದ ನಡುವಲ್ಲೇ ಸಂಕಷ್ಟದಲ್ಲಿರುವ ಬಡವರು ಹಾಗೂ ಕೋವಿಡ್ ನಿಂದ ಅನಾಥರಾಗಿರುವ ಮಕ್ಕಳಿಗೆ ಸಹಾಯ ಹಸ್ತ ಚಾಚುತ್ತಿರುವ ಇಲ್ಲಿನ ದೈಹಿಕ ಶಿಕ್ಷಕಿಯೊಬ್ಬರು ಇತರರಿಗೆ ಮಾದರಿಯಾಗಿದ್ದಾರೆ.

ಶಿವಮೊಗ್ಗ: ಸಾಂಕ್ರಾಮಿಕ ರೋಗದ ಪರಿಣಾಮ ಸಾಕಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಪ್ರಮುಖವಾಗಿ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣ ಮೇಲೆ ಈ ಸಾಂಕ್ರಾಮಿಕ ರೋಗ ಗಂಭೀರ ಪರಿಣಾಮ ಬೀರಿದೆ. ಈ ನಡುವಲ್ಲೇ ಸಂಕಷ್ಟದಲ್ಲಿರುವ ಬಡವರು ಹಾಗೂ ಕೋವಿಡ್ ನಿಂದ ಅನಾಥರಾಗಿರುವ ಮಕ್ಕಳಿಗೆ ಸಹಾಯ ಹಸ್ತ ಚಾಚುತ್ತಿರುವ ಇಲ್ಲಿನ ದೈಹಿಕ ಶಿಕ್ಷಕಿಯೊಬ್ಬರು ಇತರರಿಗೆ ಮಾದರಿಯಾಗಿದ್ದಾರೆ.

ಹುಣಸೇಕಟ್ಟೆಯಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಅನಿತಾ ಮೇರಿಯವರು ಬಡವರು ಹಾಗೂ ಅನಾಥ ಮಕ್ಕಳಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. 

ಹಸಿವು ಹಾಗೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಅನಿತಾ ಅವರ ಸಹೋದರಿ ಸಾವನ್ನಪ್ಪಿದ್ದರು. ಇದರಿಂದ ತೀವ್ರವಾಗಿ ನೊಂದಿದ್ದ ಅನಿತಾ ಅವರು ಬಡವರು ಹಾಗೂ ಹಿಂದುಳಿದ ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರಕ್ಕೆ ಬಂದಿದ್ದರು. 

ಕೋವಿಡ್ ಪರಿಣಾಮ ಸರ್ಕಾರ ವಿದ್ಯಾಗಮ ಯೋಜನೆಯನ್ನು ಆರಂಭ ಮಾಡಿತ್ತು. ಈ ಸಂದರ್ಭದಲ್ಲಿ ಅನಿತಾ ಅವರು, ಶಿಕ್ಷಣದಿಂದ ವಂಚಿತರಾಗುತ್ತಿದ್ದ ಮಕ್ಕಳಿಗೆ 25-30 ಪುಟಗಳುಳ್ಳ ನೋಟ್ಸ್ ಗಳ ಫೋಟೋಕಾಪಿ ಮಾಡಿಸಿ ವಿತರಿಸಿದ್ದರು.  

ಇಸ್ರೇಲ್ ಮೂಲದ ಅರ್ಪಿತ್ ಪೆರೇರಾ ಎಂಬುವವರು ಫೋಟೋಕಾಪಿ ಕಮ್ ಪ್ರಿಂಟರ್ ಯಂತ್ರವನ್ನು ಮಕ್ಕಳಿಗಾಗಿ ದಾನ ಮಾಡಿದ್ದು, ಇದರ ಸಹಾಯದೊಂದಿಗೆ ಅನಿತಾ ಅವರು ನೋಟ್ಸ್ ಗಳನ್ನು ಪ್ರಿಂಟ್ ಮಾಡಿ ಮಕ್ಕಳಿಗೆ ವಿತರಿಸಿದ್ದರು. 

ಶಿಕ್ಷಣದ ಪ್ರಾಮುಖ್ಯತೆ ಹಾಗೂ ಕಲಿಕೆಯ ಕುರಿತು ಪೋಷಕರಿಗೆ ವಿವರಿಸಿ ಹೇಳುವುದು ಕಷ್ಟ. ಆದರೂ, 3-5 ಮಕ್ಕಳು ಶಾಲೆಗೆ ಬಂದು ನೋಟ್ಸ್ ಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂದು ಎನಿತಾ ಅವರು ಹೇಳಿದ್ದಾರೆ. 

ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರ ವಾಟ್ಸಾಪ್ ಸಂದೇಶವನ್ನು ನೋಡಿದ್ದ ಅನಿತಾ ಅವರು ಕೋವಿಡ್ ನಿಂದ ಅನಾಥರಾದ ಮಕ್ಕಳಿಗೂ ಸಹಾಯ ಮಾಡಲು ಮುಂದಾಗಿದ್ದರು. ತಾವಿದ್ದ ಜಿಲ್ಲೆಯಲ್ಲಿ ನಾಲ್ಕು ಅನಾಥ ಮಕ್ಕಳನ್ನು ಗುರುತಿಸಿ, ಉಚಿತ ಶಿಕ್ಷಣ ಕೊಡಿಸಿದ್ದಾರೆ. ಇದಷ್ಟೇ ಅಲ್ಲದೆ, ಅನಾಥ ಮಕ್ಕಳ ಮನೆಗಳಿಗೆ ತಮ್ಮ ಒಂದು ತಿಂಗಳ ವೇತನವನ್ನು ಖರ್ಚು ಮಾಡಿ ದಿನಸಿ ಸಾಮಾಗ್ರಿಗಳನ್ನು ನೀಡಿದ್ದಾರೆ. ಇತರರು ಸಹಾಯ ಮಾಡುವಂತೆ ಮಾಡಿದ್ದಾರೆ. ಇವರ ಈ ಕಾರ್ಯದಿಂದ ಇದೀಗ ಖಾಸಗಿ ಆಭರಣ ಮಳಿಗೆಗಳ ಮಾಲೀಕರೂ ಕೂಡ ನೆರವು ನೀಡಲು ಮುಂದಾಗಿದ್ದು, ಅನಾಥ ಮಕ್ಕಳ ಕುಟುಂಬಕ್ಕೆ ರೇಷನ್ ಕಿಟ್ ಗಳನ್ನು ವಿತರಿಸುವ ಕೆಲಸ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT