ವಿವೇಕಾನಂದಗೌಡ ಪಾಟೀಲ್ 
ವಿಶೇಷ

ಗದಗ: ವಿದ್ಯಾರ್ಥಿಗಳನ್ನು ತಲುಪಲು ವಿಡಿಯೊ ಮಾರ್ಗ ಕಂಡುಕೊಂಡ ಶಿಕ್ಷಕ!

ಕೋವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ 52 ವರ್ಷದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿಗಳು ತರಗತಿಗಳನ್ನು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಅವರನ್ನು ತಲುಪಲು ವಿಡಿಯೋ ಮಾರ್ಗ....

ಗದಗ: ಕೋವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ 52 ವರ್ಷದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿಗಳು ತರಗತಿಗಳನ್ನು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಅವರನ್ನು ತಲುಪಲು ವಿಡಿಯೋ ಮಾರ್ಗ ಕಂಡುಕೊಂಡಿದ್ದಾರೆ.

ಗದಗ ಪಟ್ಟಣದ ಎಸ್.ಎಂ.ಕೃಷ್ಣ ನಗರದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಾದ ವಿವೇಕಾನಂದಗೌಡ ಪಾಟೀಲ್ ಅವರು ಅಸಂಖ್ಯಾತ ವಿಷಯಗಳ ಕುರಿತು ಕಿರು ವೀಡಿಯೋಗಳನ್ನು ತಯಾರಿಸುತ್ತಿದ್ದಾರೆ. ಸಣ್ಣ ಕಥೆಳು, ಪತ್ರ ಬರೆಯುವಿಕೆಯಿಂದ ಪ್ರಸ್ತುತ ವಿಷಯಗಳವರೆಗೆ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಡಿಯೋ ಮೂಲಕ ಮಾಹಿತಿ ನೀಡುತ್ತಿದ್ದಾರೆ.

ವಿವೇಕಾನಂದಗೌಡ ಪಾಟೀಲ್ ಅವರ ಯೂಟ್ಯೂಬ್ ಚಾನೆಲ್ 2,91,000 ಚಂದಾದಾರರನ್ನು ಹೊಂದಿದೆ. ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ವೀಡಿಯೊಗಳನ್ನು ಒದಗಿಸುತ್ತಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಶಾಲೆಗಳು ಬಂದ್ ಆಗಿದ್ದರಿಂದ ಪಾಟೀಲ್ ಅವರು 15 ದಿನಗಳಲ್ಲಿಯೇ ವಿಡಿಯೊ ಎಡಿಟಿಂಗ್ ಮತ್ತು ಗ್ರಾಫಿಕ್ ಸಾಫ್ಟ್‌ವೇರ್‌ಗಳನ್ನು ಕಲಿತು ಸಣ್ಣ ಮಾಹಿತಿಯ ವಿಡಿಯೋ ಕ್ಲಿಪ್‌ಗಳನ್ನು ತಯಾರಿಸಲು ಪ್ರಾರಂಭಿಸಿದರು. ಅವರು ಇದಕ್ಕಾಗಿ ಲ್ಯಾಪ್ಟಾಪ್, ಕ್ಯಾಮರಾ ಮತ್ತು ಇತರ ಸಲಕರಣೆಗಳಿಗೆ 1,10,000 ರೂ. ವೆಚ್ಚ ಮಾಡಿದ್ದಾರೆ. 

ವೀಡಿಯೊಗಳು ಗ್ರಾಫಿಕ್ಸ್‌ನೊಂದಿಗೆ ಬರುತ್ತವೆ, ಇದು ನಮಗೆ ಸಂಕೀರ್ಣ ಪಾಠಗಳನ್ನು, ಕವಿತೆಗಳನ್ನು ಮತ್ತು ಇತರ ವಿಷಯಗಳನ್ನು ಅರ್ಥಮಾಡಿಕೊಳ್ಳಲು ಸುಲಭವಾಗಿಸುತ್ತದೆ. ಪಾಟೀಲರು ತಮ್ಮ ವಿಡಿಯೊಗಳನ್ನು ಹೆಚ್ಚು ಹೆಚ್ಚು ವಿದ್ಯಾರ್ಥಿಗಳಿಗೆ ತಲುಪಿಸುವುದೇ ಅವರ ಉದ್ದೇಶವಾಗಿದೆ ಎಂದು ಸರ್ಕಾರಿ ಶಾಲೆಯ ಅವರ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

"ಕೋವಿಡ್‌ನ ಮೊದಲ ಅಲೆಯಲ್ಲಿ ವಿದ್ಯಾರ್ಥಿಗಳು ಸುಮ್ಮನೆ ಕುಳಿತಿದ್ದಾಗ ನಾನು ನನ್ನ ಚಾನೆಲ್ ಅನ್ನು ಪ್ರಾರಂಭಿಸಿದೆ. ನನ್ನ ವಿಡಿಯೋಗಳು ಅನೇಕರನ್ನು ಆಕರ್ಷಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ನಾನು ವೀಡಿಯೊಗಳನ್ನು ಮಾಡುವುದನ್ನು ಮುಂದುವರಿಸುತ್ತೇನೆ, ”ಎಂದು ಪಾಟೀಲ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT