ಚೈತ್ರಾ ಹೆಗಡೆ 
ವಿಶೇಷ

ಉತ್ತರ ಕನ್ನಡ ಜಿಲ್ಲೆಯ ಕುಗ್ರಾಮ ಶೀಗೆಹಳ್ಳಿಯ ವಿದ್ಯಾರ್ಥಿನಿ ಚೈತ್ರ ಹೆಗಡೆಗೆ 20 ಚಿನ್ನದ ಪದಕ!

ರಸ್ತೆ ಬದಿಯ ಬೀದಿ ದೀಪದ ಕೆಳಗೆ ಕುಳಿತು ವಿಶ್ವೇಶ್ವರಯ್ಯನವರು ವ್ಯಾಸಂಗ ಮಾಡಿ ಸಾಧನೆ ಮಾಡಿದ ಸಾಹಸ ಕೇಳಿದ್ದೀರಿ. ಆದರೆ ಕೇವಲ ದಿನಕ್ಕೆರಡು ಭಾರಿ ಸರ್ಕಾರಿ ಬಸ್ ದರ್ಶನಭಾಗ್ಯ ಪಡೆಯುವ ಕುಗ್ರಾಮದ ಯುವತಿಯೊಬ್ಬಳು 20 ಚಿನ್ನದ ಪದಕ ಗೆದ್ದಿದ್ದಾರೆ.

ಮೈಸೂರು: ರಸ್ತೆ ಬದಿಯ ಬೀದಿ ದೀಪದ ಕೆಳಗೆ ಕುಳಿತು ವಿಶ್ವೇಶ್ವರಯ್ಯನವರು ವ್ಯಾಸಂಗ ಮಾಡಿ ಸಾಧನೆ ಮಾಡಿದ ಸಾಹಸ ಕೇಳಿದ್ದೀರಿ. ಆದರೆ ಕೇವಲ ದಿನಕ್ಕೆರಡು ಭಾರಿ ಸರ್ಕಾರಿ ಬಸ್ ದರ್ಶನಭಾಗ್ಯ ಪಡೆಯುವ ಕುಗ್ರಾಮದ ಯುವತಿಯೊಬ್ಬಳು 20 ಚಿನ್ನದ ಪದಕ ಗೆದ್ದಿದ್ದಾರೆ.

ಮೈಸೂರು ವಿಶ್ವವಿದ್ಯಾಲಯ ದಲ್ಲಿ ಎಂಎಸ್ಸಿ ರಸಾಯನಶಾಸ್ತ್ರದಲ್ಲಿ ವ್ಯಾಸಂಗ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಕುಗ್ರಾಮದ, ಬಡ ಕುಟುಂಬದ ವಿದ್ಯಾರ್ಥಿನಿ ಚೈತ್ರ ಹೆಗಡೆ ಅಪ್ರತಿಮ ಸಾಧನೆ ಮಾಡಿ ಒಂದಲ್ಲ, ಎರಡಲ್ಲ 20 ಚಿನ್ನದ ಪದಕ ಹಾಗೂ ನಾಲ್ಕು ದತ್ತಿ ಬಹುಮಾನಗಳನ್ನು ಒಟ್ಟಿಗೆ ಬಾಚಿಕೊಂಡಿದ್ದಾರೆ.

ಎಂ.ಎಸ್ಸಿ ರಸಾಯನ ವಿಜ್ಞಾನ ವಿಷಯದಲ್ಲಿ ಸಾಧನೆ ಮಾಡಿರುವ ಚೈತ್ರಾ ನಾರಾಯಣ ಹೆಗಡೆ ಅವರಿಗೆ ಮೈಸೂರು ವಿ.ವಿ ಯ ಕ್ರಾಫರ್ಡ್ ಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪದಕ ಪ್ರದಾನ ಮಾಡಿದರು.

ಭಾರತೀಯ ವಿಜ್ಞಾನ ಸಂಸ್ಥೆಯ ಬಯೊಕೆಮಿಸ್ಟ್ರಿ ವಿಭಾಗದ ಗೌರವ ಪ್ರಾಧ್ಯಾಪಕ ಗೋವಿಂದರಾಜನ್ ಪದ್ಮನಾಭನ್ ಹಾಗೂ ಆಕ್ಸೆಲ್ ಇಂಡಿಯಾ ಸಂಸ್ಥಾಪಕ ಪಾಲುದಾರ ಪ್ರಶಾಂತ್ ಪ್ರಕಾಶ್ ಅವರಿಗೂ ಸಹ ಇಂದು ಗೌರವ ರಾಜ್ಯಪಾಲರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT