ಸಾಂದರ್ಭಿಕ ಚಿತ್ರ 
ವಿಶೇಷ

ನಿರುಪಯುಕ್ತರೆಂದು ಸಮಾಜ ಕಡೆಗಣಿಸಿದ ವಯೋವೃದ್ಧರಿಗೆ ಆರ್ಥಿಕ ಸ್ವಾವಲಂಬನೆ ದಾರಿ ತೋರುವ ಸ್ವನಿರ್ಭರ್ ಸ್ಟಾರ್ಟಪ್

ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಆತ್ಮ ನಿರ್ಭರ್ ಎನ್ನುವ ಹೊಸ ಕನಸನ್ನು ದಯಪಾಲಿಸಿದ್ದರು. ಅದನ್ನೇ ಸ್ಫೂರ್ತಿಯನ್ನಾಗಿ ಪರಿಗಣಿಸಿ ರಾಂಚಿಯ ಯುವಕರು ವಯಸ್ಕರ ಸ್ವಾಲಂಬನೆಗಾಗಿ ಒಂದುಗೂಡಿದ್ದಾರೆ

ರಾಂಚಿ: ವಯಸ್ಸಾದ ಮೇಲೆ ಎಲ್ಲವನ್ನೂ ಬಿಸಾಕುವ ನಾವುಗಳು ಮನುಷ್ಯರನ್ನೂ ಬಿಟ್ಟಿಲ್ಲ. ಹಿರಿಯರನ್ನೂ ನಿರುಪಯುಕ್ತರೆಂದು ಬಗೆದು ಸಮಾಜದಿಂದ ಹೊರಗಿಟ್ಟಿದ್ದೇವೆ. 

ಅವರನ್ನು ನೋಡಿಕೊಳ್ಳಲಾಗದೆ ವೃದ್ಧಾಶ್ರಮಗಳಲ್ಲಿ ಇರಿಸಿದ್ದೇವೆ. ಆದರೆ ನಿರುಪಯುಕ್ತರೆಂದು ಸಮಾಜದಿಂದ ಕಡೆಗಣನೆಗೆ ಒಳಗಾಗಿರುವ ವರ್ಗಕ್ಕೆ ಸ್ವಾವಲಂಬನೆಯ ಪಾಠ ಮಾಡಿ ಕೊನೆಯುಸಿರು ಇರುವವರೆಗೂ ಅರ್ಥಪೂರ್ಣ ಜೀವನ ನಡೆಸಿದ ಸಾರ್ಥಕ್ಯ ನೀಡುವ ಕೆಲಸ ಜಾರ್ಖಂಡ್ ರಾಜ್ಯದಲ್ಲಿ ಆಗುತ್ತಿದೆ. 

ರಾಂಚಿಯಲ್ಲಿನ ಆಪ್ ಕಿ ಲತಿ ಟೆಕ್ನಾಲಜೀಸ್ ಎನ್ನುವ ಸ್ಟಾರ್ಟಪ್ ಸಂಸ್ಥೆ ಹಿರಿಯರಿಗೆ ಆರ್ಥಿಕವಾಗಿ ಸ್ವತಂತ್ರರಾಗುವ ಮಾರ್ಗವನ್ನು ತೋರುತ್ತಿದೆ. ಈ ವಯಸ್ಸಿನಲ್ಲಿ ಅವರಿಗೆ ಅವರ ಆಸಕ್ತಿಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಿ ಅವರಿಂದ ಉತ್ಪನ್ನ ತಯಾರಿಕೆ ಉದ್ಯಮವನ್ನು ಸಂಸ್ಥೆ ನಡೆಸುತ್ತಿದೆ. ನಂತರ ಆ ಉತ್ಪನ್ನಗಳನ್ನು ಮಾರಾಟ ಮಾಡಲೂ ವೇದಿಕೆ ಕಲ್ಪಿಸಿಕೊಡುತ್ತಿದೆ.  

ಹಿರಿಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಈ ಕಾರ್ಯಕ್ರಮಕ್ಕೆ ಸ್ವನಿರ್ಭರ್ ಎನ್ನುವ ಹೆಸರು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಆತ್ಮ ನಿರ್ಭರ್ ಎನ್ನುವ ಹೊಸ ಕನಸನ್ನು ದಯಪಾಲಿಸಿದ್ದರು. ಅದನ್ನೇ ಸ್ಫೂರ್ತಿಯನ್ನಾಗಿ ಪರಿಗಣಿಸಿ ರಾಂಚಿಯ ಯುವಕರು ವಯಸ್ಕರ ಸ್ವಾವಲಂಬನೆಗಾಗಿ ಒಂದುಗೂಡಿದ್ದಾರೆ ಎನ್ನುವುದು ಶ್ಲಾಘನಾರ್ಹ ಸಂಗತಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT