ಸಾಂದರ್ಭಿಕ ಚಿತ್ರ 
ವಿಶೇಷ

ನಿರುಪಯುಕ್ತರೆಂದು ಸಮಾಜ ಕಡೆಗಣಿಸಿದ ವಯೋವೃದ್ಧರಿಗೆ ಆರ್ಥಿಕ ಸ್ವಾವಲಂಬನೆ ದಾರಿ ತೋರುವ ಸ್ವನಿರ್ಭರ್ ಸ್ಟಾರ್ಟಪ್

ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಆತ್ಮ ನಿರ್ಭರ್ ಎನ್ನುವ ಹೊಸ ಕನಸನ್ನು ದಯಪಾಲಿಸಿದ್ದರು. ಅದನ್ನೇ ಸ್ಫೂರ್ತಿಯನ್ನಾಗಿ ಪರಿಗಣಿಸಿ ರಾಂಚಿಯ ಯುವಕರು ವಯಸ್ಕರ ಸ್ವಾಲಂಬನೆಗಾಗಿ ಒಂದುಗೂಡಿದ್ದಾರೆ

ರಾಂಚಿ: ವಯಸ್ಸಾದ ಮೇಲೆ ಎಲ್ಲವನ್ನೂ ಬಿಸಾಕುವ ನಾವುಗಳು ಮನುಷ್ಯರನ್ನೂ ಬಿಟ್ಟಿಲ್ಲ. ಹಿರಿಯರನ್ನೂ ನಿರುಪಯುಕ್ತರೆಂದು ಬಗೆದು ಸಮಾಜದಿಂದ ಹೊರಗಿಟ್ಟಿದ್ದೇವೆ. 

ಅವರನ್ನು ನೋಡಿಕೊಳ್ಳಲಾಗದೆ ವೃದ್ಧಾಶ್ರಮಗಳಲ್ಲಿ ಇರಿಸಿದ್ದೇವೆ. ಆದರೆ ನಿರುಪಯುಕ್ತರೆಂದು ಸಮಾಜದಿಂದ ಕಡೆಗಣನೆಗೆ ಒಳಗಾಗಿರುವ ವರ್ಗಕ್ಕೆ ಸ್ವಾವಲಂಬನೆಯ ಪಾಠ ಮಾಡಿ ಕೊನೆಯುಸಿರು ಇರುವವರೆಗೂ ಅರ್ಥಪೂರ್ಣ ಜೀವನ ನಡೆಸಿದ ಸಾರ್ಥಕ್ಯ ನೀಡುವ ಕೆಲಸ ಜಾರ್ಖಂಡ್ ರಾಜ್ಯದಲ್ಲಿ ಆಗುತ್ತಿದೆ. 

ರಾಂಚಿಯಲ್ಲಿನ ಆಪ್ ಕಿ ಲತಿ ಟೆಕ್ನಾಲಜೀಸ್ ಎನ್ನುವ ಸ್ಟಾರ್ಟಪ್ ಸಂಸ್ಥೆ ಹಿರಿಯರಿಗೆ ಆರ್ಥಿಕವಾಗಿ ಸ್ವತಂತ್ರರಾಗುವ ಮಾರ್ಗವನ್ನು ತೋರುತ್ತಿದೆ. ಈ ವಯಸ್ಸಿನಲ್ಲಿ ಅವರಿಗೆ ಅವರ ಆಸಕ್ತಿಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಿ ಅವರಿಂದ ಉತ್ಪನ್ನ ತಯಾರಿಕೆ ಉದ್ಯಮವನ್ನು ಸಂಸ್ಥೆ ನಡೆಸುತ್ತಿದೆ. ನಂತರ ಆ ಉತ್ಪನ್ನಗಳನ್ನು ಮಾರಾಟ ಮಾಡಲೂ ವೇದಿಕೆ ಕಲ್ಪಿಸಿಕೊಡುತ್ತಿದೆ.  

ಹಿರಿಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಈ ಕಾರ್ಯಕ್ರಮಕ್ಕೆ ಸ್ವನಿರ್ಭರ್ ಎನ್ನುವ ಹೆಸರು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಆತ್ಮ ನಿರ್ಭರ್ ಎನ್ನುವ ಹೊಸ ಕನಸನ್ನು ದಯಪಾಲಿಸಿದ್ದರು. ಅದನ್ನೇ ಸ್ಫೂರ್ತಿಯನ್ನಾಗಿ ಪರಿಗಣಿಸಿ ರಾಂಚಿಯ ಯುವಕರು ವಯಸ್ಕರ ಸ್ವಾವಲಂಬನೆಗಾಗಿ ಒಂದುಗೂಡಿದ್ದಾರೆ ಎನ್ನುವುದು ಶ್ಲಾಘನಾರ್ಹ ಸಂಗತಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT