ಪಿ.ಎಂ. ಸುರೇಶ್ 
ವಿಶೇಷ

ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯಿಂದ ಹಲವು ಮಂದಿಗೆ ಜೀವದಾನ: ಅಂತಿಮ ಕ್ಷಣದ ಆಪದ್ಬಾಂಧವ

ಅಂಗ ದಾನ ಯೋಜನೆ 'ಮೃತ ಸಂಜೀವನಿ' ಅಡಿ ಸುರೇಶ್ ಅವರ ಕಣ್ಣುಗಳು, ಕಿಡ್ನಿ, ಯಕೃತ್ತು ಭಾಗಗಳನ್ನು ಅಗತ್ಯ ಇರುವ ರೋಗಿಗಳಿಗೆ ನೀಡಿ ಅವರಿಗೆ ಮರುಜನ್ಮ ನೀಡಲಾಗಿದೆ. 

ಕೊಚ್ಚಿ: ಅಪಘಾತಕ್ಕೀಡಾಗಿದ್ದ ಇಡುಕ್ಕಿ ನಗರದ 46 ವರ್ಷದ ವ್ಯಕ್ತಿಯನ್ನು ಆಸ್ಪತ್ರೆಗೆ ತರುವಾಗಲೇ ಮೆದುಳು ನಿಷ್ಕ್ರಿಯಗೊಂಡಿದ್ದಾಗಿ ವೈದ್ಯರು ಹೇಳಿದ್ದರು. ಭಾರ ಹೊರುವ ಕೂಲಿ ಕೆಲಸ ಮಾಡಿಕೊಂಡಿದ್ದ ಪಿ.ಎಂ. ಸುರೇಶ್ ಆ ದುರ್ದೈವಿ. 

ವೈದ್ಯರ ಯಾವುದೇ ಚಿಕಿತ್ಸೆಗೂ ಸುರೇಶ್ ಸ್ಪಂದಿಸುತ್ತಿರಲಿಲ್ಲ. ಅವರನು ಉಳಿಸಿಕೊಳ್ಳುವುದು ಅಸಾಧ್ಯ ಎನ್ನುವುದನ್ನು ಅರಿತ ಸುರೇಶ್ ಕುಟುಂಬ ವರ್ಗ ಆ ಕಠಿಣ ಸಮಯದಲ್ಲೂ ಧೃತಿಗೆಡದೆ ಸುರೇಶ್ ಅಂಗಗಳನ್ನು ದಾನ ಮಾಡಲು ಮುಂದಾದರು.

ಅಂಗ ದಾನ ಯೋಜನೆ 'ಮೃತ ಸಂಜೀವನಿ' ಅಡಿ ಸುರೇಶ್ ಅವರ ಕಣ್ಣುಗಳು, ಕಿಡ್ನಿ, ಯಕೃತ್ತು ಭಾಗಗಳನ್ನು ಅಗತ್ಯ ಇರುವ ರೋಗಿಗಳಿಗೆ ನೀಡಿ ಅವರಿಗೆ ಮರುಜನ್ಮ ನೀಡಲಾಗಿದೆ. 

ಸುರೇಶ್ ಕುಟುಂಬದ ಕಾರ್ಯವನ್ನು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶ್ಲಾಘಿಸಿದ್ದಾರೆ. ಸುರೇಶ್ ಅವರ ಅಂಗಗಳನ್ನು ಕಸಿ ಮಾಡಲ್ಪಟ್ಟ ರೋಗಿಗಳು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ಕುಟುಂಬ ಸದಸ್ಯನ ಅಗಲಿಕೆ ದುಃಖವನ್ನು ಭರಿಸುವ ಸಮಯದಲ್ಲಿ ಬೇರೊಬ್ಬರ ಜೀವ ಉಳಿಸುವ ಕಾರ್ಯಕ್ಕೆ ಮುಂದಾದ ಸುರೇಶ್ ಕುಟುಂಬಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT