ಸಾಂದರ್ಭಿಕ ಚಿತ್ರ 
ವಿಶೇಷ

ವಿಮಾನ 2 ಗಂಟೆ ತಡವಾದುದಕ್ಕೆ ಪ್ರಯಾಣಿಕರಿಗೆ ಗಗನಸಖಿಯರ ಪತ್ರ: ಕೋಪ ಶಮನಕ್ಕೆ ವಿನೂತನ ಮಾರ್ಗ

ಕಾಲು ಗಂಟೆ ವಿಮಾನ ಬಸ್ಸು, ರೈಲು ಬರುವುದು ತಡವಾದರೂ ಸಿಡಿಮಿಡಿಗುಟ್ಟುವ ಪ್ರಯಾಣಿಕರು 2 ಗಂಟೆ ವಿಮಾನ ವಿಳಂಬವಾದರೂ ಶಾಂತರಾಗಿದ್ದರು. ಅದಕ್ಕೆ ಕಾರಣವಾಗಿದ್ದು ಇಬ್ಬರು ಗಗನಸಖಿಯರ ವಿನೂತನ ಮಾರ್ಗ 

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಿಂದ ಆಂಧ್ರಪ್ರದೇಶದ ಕರ್ನೂಲಿಗೆ ಹೊರಡಲಿದ್ದ ವಿಮಾನ 2 ಗಂಟೆ ತಡವಾಗಿತ್ತು. ಏರ್ ಇಂಡಿಗೊ ವಿಮಾನದಲ್ಲಿ ಈ ಘಟನೆ ನಡೆದಿದೆ.

ಕಾಲು ಗಂಟೆ ವಿಮಾನ ಬಸ್ಸು, ರೈಲು ಬರುವುದು ತಡವಾದರೂ ಸಿಡಿಮಿಡಿಗುಟ್ಟುವ ಪ್ರಯಾಣಿಕರು 2 ಗಂಟೆ ವಿಮಾನ ವಿಳಂಬವಾದರೂ ಶಾಂತರಾಗಿದ್ದರು. ಅದಕ್ಕೆ ಕಾರಣವಾಗಿದ್ದು ಇಬ್ಬರು ಗಗನಸಖಿಯರ ವಿನೂತನ ಮಾರ್ಗ 

ಕರ್ನೂಲಿನಲ್ಲಿ ವಿಪರೀತ ಮಳೆ ಇದ್ದುದರಿಂದ ಅಲ್ಲಿನ ಎಟಿಸಿ ವಿಮಾನ ಇಳಿಸಲು ಅನುಮತಿ ನೀಡಿರಲಿಲ್ಲ. ಹೀಗಾಗಿ ಬೆಂಗಳೂರಿನಿಂದ ಬೆಳಿಗ್ಗೆ 9 ಗಂಟೆಗೆ ಹೊರಡಬೇಕಿದ್ದ ವಿಮಾನ ಹೊರಟಿರಲಿಲ್ಲ. 

ಪ್ರಯಾಣಿಕರು ಕೋಪಗೊಳ್ಳುವ ಸೂಚನೆ ಸಿಕ್ಕಾಕ್ಷಣವೇ  ಇಬ್ಬರು ಗಗನಸಖಿಯರಾದ ಮೃದುಲ ಮತ್ತು ಮೆರೆಂತುಲಾ ಅವರು ತಾವೇ ಖುದ್ದಾಗಿ ಪ್ರತಿ ಪ್ರಯಾಣಿಕರಿಗೂ ವಿಳಂಬಕ್ಕೆ ಕ್ಷಮೆ ಕೋರಿ ಪತ್ರ ಬರೆದಿದ್ದರು.

ಹವಾಮಾನ ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಹೀಗಾಗಿ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ವಿಮಾನ ಹಾರಾಟ ತಡವಾಗುತ್ತಿದೆ. ಕರ್ನೂಲು ಎಟಿಸಿ ಯಿಂದ ವಿಮಾನ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕ ಕೂಡಲೆ ವಿಮಾನ ಹೊರಡಲಿದೆ ಎಂಬುದಾಗಿ ಪತ್ರದಲ್ಲಿ ಬರೆಯಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT