ಸಾಂದರ್ಭಿಕ ಚಿತ್ರ 
ವಿಶೇಷ

ವಿಮಾನ 2 ಗಂಟೆ ತಡವಾದುದಕ್ಕೆ ಪ್ರಯಾಣಿಕರಿಗೆ ಗಗನಸಖಿಯರ ಪತ್ರ: ಕೋಪ ಶಮನಕ್ಕೆ ವಿನೂತನ ಮಾರ್ಗ

ಕಾಲು ಗಂಟೆ ವಿಮಾನ ಬಸ್ಸು, ರೈಲು ಬರುವುದು ತಡವಾದರೂ ಸಿಡಿಮಿಡಿಗುಟ್ಟುವ ಪ್ರಯಾಣಿಕರು 2 ಗಂಟೆ ವಿಮಾನ ವಿಳಂಬವಾದರೂ ಶಾಂತರಾಗಿದ್ದರು. ಅದಕ್ಕೆ ಕಾರಣವಾಗಿದ್ದು ಇಬ್ಬರು ಗಗನಸಖಿಯರ ವಿನೂತನ ಮಾರ್ಗ 

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಿಂದ ಆಂಧ್ರಪ್ರದೇಶದ ಕರ್ನೂಲಿಗೆ ಹೊರಡಲಿದ್ದ ವಿಮಾನ 2 ಗಂಟೆ ತಡವಾಗಿತ್ತು. ಏರ್ ಇಂಡಿಗೊ ವಿಮಾನದಲ್ಲಿ ಈ ಘಟನೆ ನಡೆದಿದೆ.

ಕಾಲು ಗಂಟೆ ವಿಮಾನ ಬಸ್ಸು, ರೈಲು ಬರುವುದು ತಡವಾದರೂ ಸಿಡಿಮಿಡಿಗುಟ್ಟುವ ಪ್ರಯಾಣಿಕರು 2 ಗಂಟೆ ವಿಮಾನ ವಿಳಂಬವಾದರೂ ಶಾಂತರಾಗಿದ್ದರು. ಅದಕ್ಕೆ ಕಾರಣವಾಗಿದ್ದು ಇಬ್ಬರು ಗಗನಸಖಿಯರ ವಿನೂತನ ಮಾರ್ಗ 

ಕರ್ನೂಲಿನಲ್ಲಿ ವಿಪರೀತ ಮಳೆ ಇದ್ದುದರಿಂದ ಅಲ್ಲಿನ ಎಟಿಸಿ ವಿಮಾನ ಇಳಿಸಲು ಅನುಮತಿ ನೀಡಿರಲಿಲ್ಲ. ಹೀಗಾಗಿ ಬೆಂಗಳೂರಿನಿಂದ ಬೆಳಿಗ್ಗೆ 9 ಗಂಟೆಗೆ ಹೊರಡಬೇಕಿದ್ದ ವಿಮಾನ ಹೊರಟಿರಲಿಲ್ಲ. 

ಪ್ರಯಾಣಿಕರು ಕೋಪಗೊಳ್ಳುವ ಸೂಚನೆ ಸಿಕ್ಕಾಕ್ಷಣವೇ  ಇಬ್ಬರು ಗಗನಸಖಿಯರಾದ ಮೃದುಲ ಮತ್ತು ಮೆರೆಂತುಲಾ ಅವರು ತಾವೇ ಖುದ್ದಾಗಿ ಪ್ರತಿ ಪ್ರಯಾಣಿಕರಿಗೂ ವಿಳಂಬಕ್ಕೆ ಕ್ಷಮೆ ಕೋರಿ ಪತ್ರ ಬರೆದಿದ್ದರು.

ಹವಾಮಾನ ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಹೀಗಾಗಿ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ವಿಮಾನ ಹಾರಾಟ ತಡವಾಗುತ್ತಿದೆ. ಕರ್ನೂಲು ಎಟಿಸಿ ಯಿಂದ ವಿಮಾನ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕ ಕೂಡಲೆ ವಿಮಾನ ಹೊರಡಲಿದೆ ಎಂಬುದಾಗಿ ಪತ್ರದಲ್ಲಿ ಬರೆಯಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT