(ಎಡದಿಂದ) ರಾಹುಲ್ ರಾವತ್, ತನ್ವೀರ್ ಅಹಮದ್, ಅನಿರುದ್ ಶರ್ಮಾ 
ವಿಶೇಷ

ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ನಿಂದ ಬಾಹ್ಯಾಕಾಶಕ್ಕೆ 40 ಉಪಗ್ರಹಗಳ ಉಡಾವಣೆ: ಭೂ ಕಕ್ಷೆಯಲ್ಲಿ ಅವಶೇಷಗಳ ಡೇಟಾ ಸಂಗ್ರಹ

ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ 40 ಉಪಗ್ರಹಗಳ ಸಮೂಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಯೋಜಿಸಿದೆ. ಅದು ಭೂ ಕಕ್ಷೆಯಲ್ಲಿ ಮಾಲಿನ್ಯ, ತ್ಯಾಜ್ಯ ಮತ್ತಿತರ ಅವಶೇಷಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ.

ನವದೆಹಲಿ: ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ 40 ಉಪಗ್ರಹಗಳ ಸಮೂಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಯೋಜಿಸಿದೆ. ಅದು ಭೂ ಕಕ್ಷೆಯಲ್ಲಿ ಮಾಲಿನ್ಯ, ತ್ಯಾಜ್ಯ ಮತ್ತಿತರ ಅವಶೇಷಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ. 

ಮುಂದಿನ ವರ್ಷದ ಆರಂಭದಲ್ಲಿ ಉಡಾವಣೆಯಾಗಲಿರುವ ಉಪಗ್ರಹಗಳು, ಭೂ ಕಕ್ಷೆಯಲ್ಲಿ ಲಕ್ಷಾಂತರ ಅವಶೇಷಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತವೆ, ಇದನ್ನು ನಾಸಾ 'ಕಕ್ಷೆಯ ಬಾಹ್ಯಾಕಾಶ ಜಂಕ್ ಯಾರ್ಡ್" ಎಂದು ವಿವರಿಸುತ್ತದೆ. ಮೂವರು ಯುವ ಇಂಜಿನಿಯರ್‌ಗಳು ಪ್ರಾರಂಭಿಸಿದ ಸ್ಟಾರ್ಟ್ ಅಪ್ ದಿಗಂತರಾ ಸ್ವಯಂ ಪ್ರೇರಿತವಾಗಿ  ಭೂ ಕಕ್ಷೆಯಲ್ಲಿ ಸ್ವಚ್ಛತೆಯ ಕಾರ್ಯವನ್ನು ಕೈಗೆತ್ತಿಕೊಂಡಿದೆ. 

ನಾಸಾ ಪ್ರಕಾರ, ಈ ಸ್ಪೇಸ್ ಜಂಕ್ ಪ್ರತಿ ಗಂಟೆಗೆ 18,000 ಮೈಲಿ ವೇಗದಲ್ಲಿ ಕ್ರಮಿಸಲಿದೆ. ಅವುಗಳಲ್ಲಿ ಹಲವು 1 ಸೆಂ.ಮೀ ನಿಂದ 10 ಸೆಂ.ಮೀ ವ್ಯಾಸವನ್ನು ಹೊಂದಿರುತ್ತವೆ. ಭೂ ಕಕ್ಷೆಯಲ್ಲಿನ ಬಹುತೇಕ ಅವಶೇಷಗಳು  ಮಾನವ-ಉತ್ಪಾದಿತ ವಸ್ತುಗಳನ್ನು ಒಳಗೊಂಡಿರುತ್ತದೆ, ಉದಾಹರಣೆಗೆ ರಾಕೆಟ್ ಮತ್ತು ಉಪಗ್ರಹ ಘಟಕಗಳು, ಬಾಹ್ಯಾಕಾಶ ನೌಕೆಯ ಬಣ್ಣದ ಸಣ್ಣ ತುಣುಕುಗಳ ಮತ್ತಿತರ ವಸ್ತುಗಳಾಗಿವೆ. 

ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳು ಬಾಹ್ಯಾಕಾಶದಲ್ಲಿರುವ ಶೇಕಡಾ 4 ರಷ್ಟು ವಸ್ತುಗಳ ಬಗ್ಗೆ ಮಾತ್ರ ತಿಳಿದಿರುತ್ತವೆ ಆದರೆ, ಇನ್ನೂ ಶೇ. 96 ರಷ್ಟು ಅಂಕಿಅಂಶಗಳು  ಕಾಣೆಯಾಗಿವೆ ಎಂದು ಕೇವಲ 23 ವರ್ಷ ವಯಸ್ಸಿನ ದಿಗಂತರಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರಾವತ್ ಹೇಳಿದರು.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಇ ಕ್ಯೂಬೇಟ್ ಆಗಿರುವ ದಿಗಂತಾರಾ ಸ್ಟಾರ್ಟ್ ಅಪ್, ಬಾಹ್ಯಾಕಾಶದಲ್ಲಿನ ವಾತಾವರಣ ತಿಳಿಯಲು ಇದೇ ವರ್ಷದ ಜೂನ್ 30 ರಂದು ಶೂ ಬಾಕ್ಸ್ ಗಾತ್ರದ ಸಣ್ಣ ಉಪಗ್ರಹವೊಂದನ್ನು  ಕಳುಹಿಸಲಾಗಿತ್ತು ಎಂದು ಸ್ಟಾರ್ಟ್ ಅಪ್ ಸಿಇಒ ಅನಿರುದ್ ಶರ್ಮಾ ತಿಳಿಸಿದರು.

ಯುಎಸ್ ಮತ್ತು ಕೆನಡಾದಲ್ಲಿ ಪ್ರತಿಸ್ಪರ್ಧಿಗಳಿದ್ದರೂ ನಾವು ಭಾರತದಲ್ಲಿ ಈ ರೀತಿಯ ಏಕೈಕ ಸ್ಟಾರ್ಟ್-ಅಪ್ ಆಗಿದ್ದೇವೆ.  ಸಂಗ್ರಹಿಸಿದ ಡೇಟಾದಿಂದ ತುಂಬಾ ಅನುಕೂಲವಾಗಲಿದೆ ಎಂದು ರಾವತ್ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT