ರಾಮಾಲಯ 
ವಿಶೇಷ

ಸ್ವಂತ ಖರ್ಚಿನಲ್ಲಿ ರಾಮಾಲಯ ನಿರ್ಮಿಸಿದ ಮುಸ್ಲಿಂ ಸರಪಂಚ್!

ಮುಸ್ಲಿಂ ವ್ಯಕ್ತಿಯೊಬ್ಬರು ತನ್ನ ಗ್ರಾಮದಲ್ಲಿ 25 ಲಕ್ಷ ರೂಪಾಯಿ ಖರ್ಚು ಮಾಡಿ ರಾಮ ಮಂದಿರ ಕಟ್ಟಿಸಿದ ಘಟನೆ ಎಲ್ಲರ ಮನ ಸೆಳೆದಿದೆ. 

ಖಮ್ಮಂ: ಮುಸ್ಲಿಂ ವ್ಯಕ್ತಿಯೊಬ್ಬರು ತನ್ನ ಗ್ರಾಮದಲ್ಲಿ 25 ಲಕ್ಷ ರೂಪಾಯಿ ಖರ್ಚು ಮಾಡಿ ರಾಮ ಮಂದಿರ ಕಟ್ಟಿಸಿದ ಘಟನೆ ಎಲ್ಲರ ಮನ ಸೆಳೆದಿದೆ. 

ಖಮ್ಮಂ ಜಿಲ್ಲೆಯ ರಘುನಾಡಪಾಲಂ ಮಂಡಲದ ಬುಡಿದಂಪಾಡು ಗ್ರಾಮದ ಸರಪಂಚ್ ಶೇಕ್ ಮೀರಾ ಸಾಹೇಬ್ ದೇಣಿಗೆ ಮೂಲಕ 25 ಲಕ್ಷ ರೂ ಸಂಗ್ರಹಿಸಿದ್ದು ಇನ್ನು 25 ಲಕ್ಷ ರೂಪಾಯಿ ಹಾಕಿ 50 ಲಕ್ಷ ರುಪಾಯಿಯಲ್ಲಿ ದೇವಸ್ಥಾನ ಕಟ್ಟಿಸಿದ್ದಾರೆ.

ಹಲವು ಮುಖಂಡರ ಪ್ರಯತ್ನಗಳು ವಿಫಲವಾದ ನಂತರ ಶೇಕ್ ಮೀರಾ ರಾಮಾಲಯವನ್ನು ನಿರ್ಮಿಸಲು ಉಪಕ್ರಮವನ್ನು ತೆಗೆದುಕೊಳ್ಳಲು ನಿರ್ಧರಿಸಿದರು. ಮೂವರು ಬುಡಕಟ್ಟು ಸಹೋದರರಾದ ಕೆ ಬಿಚಾ, ನಂದಾ ಮತ್ತು ಕೊನ್ಯಾ ಅವರು ದೇವಾಲಯದ ನಿರ್ಮಾಣಕ್ಕಾಗಿ 1000 ಚದರ ಗಜಗಳಷ್ಟು ಭೂಮಿಯನ್ನು ದಾನ ಮಾಡಿದರು. ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಶೇಕ್ ಮೀರಾ, ತಾವು ದೇವಾಲಯ ಹಾಗೂ ಚರ್ಚ್‌ಗಳಿಗೆ ಪ್ರಾರ್ಥನೆ ಸಲ್ಲಿಸಲು ಭೇಟಿ ನೀಡುತ್ತೇನೆ. ನಾವು ಸಾಯುವಾಗ ನಮ್ಮೊಂದಿಗೆ ಏನನ್ನೂ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ, ಆದರೆ ನಮ್ಮ ಕೆಲಸವು ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಅನೇಕ ದೇವಾಲಯಗಳನ್ನು ಮುಸ್ಲಿಮರು ನಿರ್ಮಿಸಿದ್ದಾರೆ. ಉದಾಹರಣೆಗೆ, ಭದ್ರಾಚಲಂ ರಾಮಾಲಯವನ್ನು ನಿಜಾಮರು ನಿರ್ಮಿಸಿದರು. ಬ್ರಿಟಿಷರ ಆಡಳಿತಾವಧಿಯಲ್ಲಿ ಮಹಬೂಬಾಬಾದ್ ಜಿಲ್ಲೆಯ ಡೋರ್ನಕಲ್ ನಲ್ಲಿ ಮುಸ್ಲಿಂರೊಬ್ಬರು 20 ಕೋಟಿ ರೂಪಾಯಿ ವೆಚ್ಚದಲ್ಲಿ ಚರ್ಚ್ ನಿರ್ಮಿಸಿದ್ದರು ಎಂದರು. ಶೇಕ್ ಮೀರಾ ಎರಡನೇ ಬಾರಿಗೆ ಸರಪಂಚ್ ಆಗಿ ಆಯ್ಕೆಯಾಗಿದ್ದಾರೆ.

ಸಚಿವ ಕೆಟಿ ರಾಮರಾವ್ ಸಹ ಸಮುದಾಯಗಳನ್ನು ಒಗ್ಗೂಡಿಸುವ ಶೇಕ್ ಮೀರಾ ಅವರ ಉದಾತ್ತ ಮನಸನ್ನು ಶ್ಲಾಘಿಸಿದರು. ಟ್ವೀಟ್‌ನಲ್ಲಿ ಸಚಿವರು, ಇದು ತೆಲಂಗಾಣ! ನಾವು ಹಂಚಿಕೊಳ್ಳಬೇಕಾದ ಕಥೆಗಳು! ತೆಲಂಗಾಣದ ಬೂದಿಡಂಪಾಡು ಗ್ರಾಮದ ಸರಪಂಚರಾದ ಶೇಖ್ ಮೀರಾ ಸಾಹೇಬ್ ಅವರು ತಮ್ಮ ಸ್ವಂತ ಹಣದಲ್ಲಿ 25 ಲಕ್ಷ ರೂ.ಗಳಿಂದ ರಾಮಮಂದಿರವನ್ನು ನಿರ್ಮಿಸಿದ್ದಾರೆ ಎಂದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT