ಸೌರಶಕ್ತಿ ವಿದ್ಯುತ್ ದೀಪಗಳೊಂದಿಗೆ ಕಂಗೊಳಿಸುತ್ತಿರುವ ಸೂರ್ಯ ದೇವಾಲಯದಲ್ಲಿ ಪ್ರಧಾನಿ ಮೋದಿ 
ವಿಶೇಷ

ಗುಜರಾತ್‌ನ ಮೊಧೇರಾ ದೇಶದ ಮೊದಲ ಸಂಪೂರ್ಣ ಸೌರಶಕ್ತಿ ಚಾಲಿತ ಗ್ರಾಮ!

ಗುಜರಾತ್ ರಾಜ್ಯದ ಮೊಧೇರಾ ದೇಶದ ಮೊದಲ 24x7 ಸೌರಶಕ್ತಿ ಚಾಲಿತ ಗ್ರಾಮ ಎಂದು ಪ್ರಧಾನಿ ನರೇದ್ರ ಮೋದಿ ಘೋಷಿಸಿದ್ದಾರೆ.

ಅಹಮದಾಬಾದ್: ಗುಜರಾತ್ ರಾಜ್ಯದ ಮೊಧೇರಾ ದೇಶದ ಮೊದಲ 24x7 ಸೌರಶಕ್ತಿ ಚಾಲಿತ ಗ್ರಾಮ ಎಂದು ಪ್ರಧಾನಿ ನರೇದ್ರ ಮೋದಿ ಘೋಷಿಸಿದ್ದಾರೆ.

ಮೊಧೇರಾದಲ್ಲಿ ಪ್ರಸಿದ್ದ ಸೂರ್ಯ ದೇವಾಲಯವಿದೆ. ಜಗತ್ತಿನಲ್ಲಿ ಸೌರಶಕ್ತಿಯ ಬಗ್ಗೆ ಜನರು ಚರ್ಚಿಸಿದಾಗಲೆಲ್ಲಾ ಈ ಗ್ರಾಮವು ಅದರಲ್ಲಿ ಕಾಣಿಸಿಕೊಳ್ಳುತ್ತದೆ. ಸರ್ಕಾರವು ವಿದ್ಯುತ್ ಉತ್ಪಾದಿಸುತ್ತದೆ ಮತ್ತು ಜನರು ಅದನ್ನು ಖರೀದಿಸುತ್ತಾರೆ. ಆದರೆ ಜನರು ಶಕ್ತಿಯ ಉತ್ಪಾದಕರಾಗಬೇಕೆಂದು ನಾವು ಬಯಸುತ್ತೇವೆ. ವಿದ್ಯುತ್ ಕ್ಕಾಗಿ ಪಾವತಿಸಬೇಡಿ; ಅದನ್ನು ಮಾರಿ ಅದರಿಂದ ಸಂಪಾದಿಸಿ ಎಂದು ಪ್ರಧಾನಿ ಒತ್ತಾಯಿಸಿದರು.

ಮೊಧೇರಾದ ಜನರು ವಿದ್ಯುತ್ ಗ್ರಾಹಕರು ಮತ್ತು ಉತ್ಪಾದಕರು. ಸರ್ಕಾರ ಹೆಚ್ಚುವರಿಯಾಗಿ ಉತ್ಪಾದಿಸಿದ ವಿದ್ಯುತ್ ಖರೀದಿಸುತ್ತಿದೆ. ಇಂತಹ ಯಶಸ್ವಿ ಪ್ರಯತ್ನಗಳು ದೇಶದಾದ್ಯಂತ ಪುನರಾವರ್ತನೆಯಾಗಬೇಕು ಎಂದು ಅವರು ಹೇಳಿದರು. ಮೊಧೇರಾ ಸೂರ್ಯ ದೇವಾಲಯ ಮತ್ತು ಪಟ್ಟಣದ ಸೌರ ವಿದ್ಯುತೀಕರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲುದಾರಿಕೆಯಿಂದ ಆಗಿದೆ.  ಸೂರ್ಯ ದೇವಾಲಯದಿಂದ ಸುಮಾರು 6 ಕಿಮೀ ದೂರದಲ್ಲಿರುವ ಮೆಹ್ಸಾನಾದ ಸುಜ್ಜನಪುರದಲ್ಲಿ ಬ್ಯಾಟರಿ ಶಕ್ತಿ ಶೇಖರಣಾ ವ್ಯವಸ್ಥೆಯೊಂದಿಗೆ (ಬಿಇಎಸ್ ಎಸ್) ಗ್ರಾಮವನ್ನು ಸಂಯೋಜಿಸಿದೆ ಎಂದರು. 

ವಿದ್ಯುತ್ ಉತ್ಪಾದನೆಗಾಗಿ ಮನೆಗಳ ಮೇಲೆ 1,300 ಕ್ಕೂ ಹೆಚ್ಚು ಛಾವಣಿಯ ಸೌರ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಹಗಲು ಹೊತ್ತು ಸೌರ ಫಲಕಗಳಿಂದ ವಿದ್ಯುತ್  ಬಂದರೆ, ರಾತ್ರಿಯಲ್ಲಿ ಬಿಇಎಸ್‌ಎಸ್‌ನಿಂದ ವಿದ್ಯುತ್ ನಿಂದ ಪೂರೈಕೆಯಾಗುತ್ತದೆ. ಮೊಧೇರಾ ಸೌರ ಆಧಾರಿತ ಆಧುನಿಕ ವಿದ್ಯುತ್ ವಾಹನ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮೊದಲ ಆಧುನಿಕ ಗ್ರಾಮವಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT