ಕರ್ನಾಟಕ ಜಾನಪದ ಪರಿಷತ್ತು 
ವಿಶೇಷ

ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ

ಜೂನ್ 2024 ರಲ್ಲಿ ಯುನೆಸ್ಕೋ ಪ್ರಧಾನ ಕಛೇರಿಯಲ್ಲಿ ನಡೆದ ಹತ್ತನೇ ಅಧಿವೇಶನದಲ್ಲಿ ಘೋಷಿಸಲಾದ ಅಮೂರ್ತ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಯುನೈಟೆಡ್ ನೇಷನ್ಸ್ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಇದನ್ನು ಗುರುತಿಸಿದೆ.

ಬೆಂಗಳೂರು: ಕರ್ನಾಟಕದ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕಲಾ ಪ್ರಕಾರಗಳ ರಕ್ಷಣೆಗೆ ಹೆಸರಾಗಿರುವ ಕರ್ನಾಟಕ ಜಾನಪದ ಪರಿಷತ್ತು ಮುಡಿಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ.

ಜೂನ್ 2024 ರಲ್ಲಿ ಯುನೆಸ್ಕೋ ಪ್ರಧಾನ ಕಛೇರಿಯಲ್ಲಿ ನಡೆದ ಹತ್ತನೇ ಅಧಿವೇಶನದಲ್ಲಿ ಘೋಷಿಸಲಾದ ಅಮೂರ್ತ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಯುನೈಟೆಡ್ ನೇಷನ್ಸ್ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಇದನ್ನು ಗುರುತಿಸಿದೆ.

ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಎಚ್.ಸಿ.ಬೋರಲಿಂಗಯ್ಯ ಮಾತನಾಡಿ, 'ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಗುರುತಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. “ನಾವು ಕಳೆದ ವರ್ಷ ಯುನೆಸ್ಕೋ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ಹೆಚ್ಚಿನ ವಿವರಗಳನ್ನು ಒದಗಿಸುವಂತೆ ಅವರು ನಮ್ಮನ್ನು ಕೇಳಿದರು ಮತ್ತು ಅದು ಪೂರ್ಣಗೊಂಡಿತು. ನಾವು ಸೆಪ್ಟೆಂಬರ್ 26 ರಂದು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇವೆ ಎಂದರು.

ಅಂತೆಯೇ ಇದರೊಂದಿಗೆ, ಪರಿಷತ್ತು ವಾರ್ಷಿಕ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಲು ಮತ್ತು ಪ್ರಪಂಚದೊಂದಿಗೆ ಸಾಂಪ್ರದಾಯಿಕ ಜ್ಞಾನವನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಹಂಪಿಯಂತೆಯೇ, ಇದು ಹೆಚ್ಚಿನ ಪ್ರವಾಸಿಗರನ್ನು ಸೆಳೆಯುತ್ತದೆ. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಸುಧಾರಣೆ ಮತ್ತು ವಿಸ್ತರಣೆಗಾಗಿ ಹೆಚ್ಚಿನ ಹಣವನ್ನು ಪಡೆಯಬಹುದು ಎಂದರು.

ಇನ್ನು 1979ರಲ್ಲಿ ಸ್ಥಾಪನೆಯಾದ ಪರಿಷತ್ ಕಳೆದ 45 ವರ್ಷಗಳಿಂದ ಜಾನಪದ ಕ್ಷೇತ್ರಕ್ಕೆ ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 15 ಎಕರೆ ಜಾಗದಲ್ಲಿ ಕರ್ನಾಟಕ ಜಾನಪದ ಪರಿಷತ್ತು ನಿರ್ಮಿಸಿರುವ ‘ಜಾನಪದ ಲೋಕ’ ವಿಶಿಷ್ಟ ಸಾಂಸ್ಕೃತಿಕ ಕೇಂದ್ರವಾಗಿ ಗುರುತಿಸಿಕೊಂಡಿದೆ. "ಮನ್ನಣೆಯು ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯ ಜಾಗತಿಕ ಸಂವಾದಕ್ಕೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಪ್ರೋತ್ಸಾಹಿಸುತ್ತದೆ. ಅಂತಾರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆ ಸಮುದಾಯದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಪಾತ್ರವನ್ನು ಹೆಚ್ಚಿಸುತ್ತದೆ" ಎಂದು ಬೋರಲಿಂಗಯ್ಯ ಹೇಳಿದರು.

ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಗೂ ಯುನೆಸ್ಕೋ ಮನ್ನಣೆ

ಉತ್ತರ ಕನ್ನಡದ ಹೊನ್ನಾವರದ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಯುನೆಸ್ಕೋದಿಂದಲೂ ಮನ್ನಣೆ ಪಡೆದಿದೆ. ಮಂಡಲಿಯ ಸಂಚಾಲಕ ಕೆರೆಮನೆ ಶಿವಾನಂದ ಹೆಗಡೆ ಈ ಬಗ್ಗೆ ಮಾತನಾಡಿ, ಈ ಭಾಗದ ಸಂಸ್ಕೃತಿ, ಜಾನಪದವನ್ನು ಜನಪ್ರಿಯಗೊಳಿಸಲು ಪ್ರಶಸ್ತಿ ಸಹಕಾರಿಯಾಗಲಿದೆ. ಹೆಚ್ಚಿನ ಸಾಂಪ್ರದಾಯಿಕ ಜಾನಪದ ಮತ್ತು ಕಲಾ ಪ್ರಕಾರಗಳು ಸಾಯುತ್ತಿವೆ. ಆದರೆ ಈ ಗುರುತಿಸುವಿಕೆ ಅವುಗಳನ್ನು ಪುನರುಜ್ಜೀವನಗೊಳಿಸಲು ಮತ್ತು ಸಾರ್ವಜನಿಕ ಗಮನವನ್ನು ಸೆಳೆಯಲು ಸಹಾಯ ಮಾಡುತ್ತದೆ. ಇದು ಸಂಸ್ಕೃತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಡಲು ಸಹಾಯ ಮಾಡುತ್ತದೆ. ಈ ಸಂಸ್ಥೆಯು ಸ್ವಾತಂತ್ರ್ಯ ಪೂರ್ವದಲ್ಲಿ 1934 ರಲ್ಲಿ ಸ್ಥಾಪನೆಯಾಯಿತು ಮತ್ತು ವರ್ಷಗಳಲ್ಲಿ ರಾಜ್ಯಕ್ಕೆ ಅನೇಕ ಶ್ರೇಷ್ಠ ಕಲಾವಿದರನ್ನು ಕೊಡುಗೆಯಾಗಿ ನೀಡಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT