ಸಚಿನ್ ತೆಂಡೂಲ್ಕರ್ 
ಕ್ರೀಡೆ

ಕ್ರೀಡಾ ಸಾಧಕರ ಯಶಸ್ಸು ತೃಪ್ತಿ ತಂದಿದೆ: ಸಚಿನ್

ಪ್ರಸ್ತುದ ಕ್ರೀಡಾಲೋಕದಲ್ಲಿ ಭಾರತ ಸಾಧಿಸಿರುವ ಪ್ರಗತಿ ತೃಪಿ ತಂದಿದೆ ಎಂದು ಮಾಜಿ ಕ್ರಿಕೆಟಿಗ...

ಮುಂಬೈ: ಪ್ರಸ್ತುದ ಕ್ರೀಡಾಲೋಕದಲ್ಲಿ ಭಾರತ ಸಾಧಿಸಿರುವ ಪ್ರಗತಿ ತೃಪಿ ತಂದಿದೆ ಎಂದು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

ಜಾಗತಿಕ ಮಟ್ಟದಲ್ಲಿ ಭಾರತೀಯ ಕ್ರೀಡಾ ಸಾಧಕರು ಗಳಿಸಿರುವ ಯಶಸ್ಸು ಹಾಗೂ ಸಾಧನೆಯಿಂದ ಹರ್ಷಗೊಂಡಿರುವುದಾಗಿ ಅವರು ತಿಳಿಸಿದರು.

ರಾಜರ್ಹತ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಈಜು ಕೊಳವನ್ನು ಉದ್ಘಾಟಿಸಲು ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ 34 ಸಾವಿರ ಗುಲಾಬಿ ಹೂಗಳುಳ್ಳ ದೊಡ್ಡ ಹಾರವನ್ನು ಹಾಕಿ ಗೌರವಿಸಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ಅವರು, ಬಾಕ್ಸಿಂಗ್, ಕುಸ್ತಿ, ಆರ್ಚೆರಿ, ಈಜು ಮುಂತಾದ ಕ್ರೀಡಾ ವಿಭಾಗಗಳಲ್ಲಿ ಭಾರತೀಯ ಕ್ರೀಡಾಪಟುಗಳು ವಿಶ್ವಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ದೇಶದ ಮೂಲೆಮೂಲೆಗಳಲ್ಲಿ ಅನೇಕ ಕ್ರೀಡಾಪತ್ರಿಭೆಗಳಿದ್ದಾರೆ. ಅವರೆಲ್ಲರನ್ನೂ ಹುಡುಕಿ ಅವರನ್ನು ಸೂಕ್ತವಾದ ರೀತಿಯಲ್ಲಿ ತರಬೇತುಗೊಳಿಸಬೇಕು. ಇದರಿಂದ, ಭವಿಷ್ಯದ ಜಾಗತಿಕ ಕ್ರೀಡಾರಂಗದಲ್ಲಿ ಭಾರತ ಬೆಳಗಲು ಸಹಾಯವಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT