ವಾಲಿಬಾಲ್ ತಂಡ (ಸಂಗ್ರಹ ಚಿತ್ರ) 
ಕ್ರೀಡೆ

ಕೇರಳದ ಮಡಿಲಿಗೆ ವಾಜಪೇಯಿ ಕಪ್

ಸಂಘಟಿತ ಆಟ ಪ್ರದರ್ಶಿಸಿದ ಕೇರಳ ವಾಲಿಬಾಲ್ ತಂಡ, ಕರ್ನಾಟಕ ರಾಜ್ಯ ವಾಲಿಬಾಲ್ ಸಂಸ್ಥೆ ಹಾಗೂ ರಾಜಾಜಿನಗರ...

ಬೆಂಗಳೂರು: ಸಂಘಟಿತ ಆಟ  ಪ್ರದರ್ಶಿಸಿದ ಕೇರಳ ವಾಲಿಬಾಲ್ ತಂಡ, ಕರ್ನಾಟಕ ರಾಜ್ಯ ವಾಲಿಬಾಲ್ ಸಂಸ್ಥೆ ಹಾಗೂ ರಾಜಾಜಿನಗರ ಕ್ರೀಡಾ ಮತ್ತು ಸಂಸ್ಕೃತಿ ಸಂಘದ ಆಶ್ರಯದಲ್ಲಿ ಆಯೋಜಿಸಲಾದ 13 ನೇ ವಾಜಪೇಯಿ ಕಪ್ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಶಸ್ತಿ ಎತ್ತಿ ಹಿಡಿದಿದೆ.

ಗುರುವಾರ ನಡೆದ ಪುರುಷರ ವಿಭಾಗದ ಫೈನಲ್ ಪಂದ್ಯದಲ್ಲಿ ಎದುರಾಳಿ ತಮಿಳುನಾಡು ತಂಡವನ್ನು 3-0 (25-18, 25-18, 25-22) ಅಂಕಗಳ ಅಂತರದಿಂದ ಮಣಿಸಿದ ಕೇರಳ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಪಂದ್ಯದ ಆರಂಭದಿಂದ ಅಂತ್ಯದವರೆಗೂ ಅದ್ಭುತ ಪ್ರದರ್ಶನ ನೀಡಿದ ಕೇರಳ ಆಟಗಾರರು ಮೊದಲ ಗೇಮ್‌ನಲ್ಲಿ 25-18 ಮುನ್ನಡೆ ಕಾಯ್ದುಕೊಂಡರು. ಇನ್ನು ಎರಡನೇ ಗೇಮ್‌ನಲ್ಲೂ ಲಯ ಮುಂದುವರಿಸಿ ಮತ್ತೆ 25-18ರ ಮೇಲುಗೈ ಸಾಧಿಸಿದರು. ಇನ್ನು ಮೂರನೇ ಸೆಟ್‌ನಲ್ಲೂ ಬಿಗಿ ಹಿಡಿತ ಸಾಧಿಸಿದ ಕೇರಳ 25-22 ಅಂತರ ಕಾಯ್ದುಕೊಂಡು ಪಂದ್ಯದಲ್ಲಿ ಗೆಲವಿನ ನಗೆ ಬೀರಿತು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT