ಶ್ರೀನಿವಾಸನ್ 
ಕ್ರೀಡೆ

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀನಿವಾಸನ್ ಸಮರ್ಥಿಸಿಕೊಂಡ ಬಿಸಿಸಿಐ

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಂಡಿರುವ ಎನ್. ಶ್ರೀನಿವಾಸನ್ ಅವರನ್ನು ಸಮರ್ಥಿಸಿಕೊಂಡು...

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಂಡಿರುವ ಎನ್. ಶ್ರೀನಿವಾಸನ್ ಅವರನ್ನು ಸಮರ್ಥಿಸಿಕೊಂಡು ಭಾರತೀಯ ಕ್ರಿಕೆಟ್ ಮಂಡಳಿ  (ಬಿಸಿಸಿಐ) ಮುದ್ಗಲ್ ಸಮಿತಿಗೆ ಅಫಿಡವಿಟ್ ಸಲ್ಲಿಸಿದೆ.
ಶ್ರೀನಿವಾಸನ್ ಮತ್ತು ಮಂಡಳಿಯ ಇತರ ನಾಲ್ವರು ಅಧಿಕಾರಿಗಳಿಗೆ ಕ್ರೀಡಾಪಟುಗಳು ನೀತಿ ಸಂಹಿತೆ ಉಲ್ಲಂಘಿಸಿರುವುದರ ಬಗ್ಗೆ ಮಾಹಿತಿ ಇತ್ತು. ಆದರೆ ಅವರ್ಯಾರು ಈ ಬಗ್ಗೆ ಕ್ರಮಕೈಗೊಂಡಿಲ್ಲ ಎಂದು ನ್ಯಾ. ಮುದ್ಗಲ್ ವರದಿಯಲ್ಲಿ ಹೇಳಲಾಗಿತ್ತು .

ಮುದ್ಗಲ್ ಸಮಿತಿಯ ಅಂತಿಮ ವರದಿಯಲ್ಲಿ ಶ್ರೀನಿವಾಸನ್ ಯಾವುದೇ ತಪ್ಪು ಮಾಡಿಲ್ಲ ಎನ್ನಲಾಗಿದ್ದು, ಶ್ರೀನಿವಾಸನ್‌ಗೆ ಬಿಸಿಸಿಐ ಬೆಂಬಲ ನೀಡಿತ್ತು.

ನವೆಂಬರ್ 18ರಂದು ನಡೆದ ಬಿಸಿಸಿಐ ಕಾರ್ಯಕಾರಿಣಿಸಭೆಯಲ್ಲಿ ಐಪಿಎಲ್ ಫಿಕ್ಸಿಂಗ್ ಕಳಂಕದಿಂದ ಮುಕ್ತರಾಗಿರುವ ಶ್ರೀನಿವಾಸನ್‌ಗೆ ಇಡೀ ಸಭೆ ಬೆಂಬಲ ವ್ಯಕ್ತ ಪಡಿಸಿತ್ತು. ಈ ಹಿನ್ನೆಲೆಯಲ್ಲಿ ಡಿ.17ರ ಸಭೆಯಲ್ಲಿ ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷರಾಗಿ ಪುನರಾಯ್ಕೆಗೊಳ್ಳುವುದು ಖಚಿತ ಎನ್ನಲಾಗುತ್ತಿದೆ.

ಶ್ರೀನಿವಾಸನ್ ಫಿಕ್ಸಿಂಗ್ ಆರೋಪದಿಂದ ಬಚಾವಾಗಿದ್ದರೂ, ಆಟಗಾರರ ನೀತಿ ಸಂಹಿತೆ ಉಲ್ಲಂಘಿಸಿದ ವ್ಯಕ್ತಿ ನಂ.3 ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಎದುರಿಸುತ್ತಿದ್ದಾರೆ.  ಆದಾಗ್ಯೂ, ವ್ಯಕ್ತಿ ನಂ.3 ಮಾಡಿದ ನೀತಿ ಸಂಹಿತೆ ಉಲ್ಲಂಘನೆಯ ಚಿಕ್ಕ ಪ್ರಮಾಣದ್ದು. ಈ ಬಗ್ಗೆ ಆ ಆಟಗಾರನಿಗೆ ವಾಗ್ದಂಡನೆಯನ್ನೂ ವಿಧಿಸಲಾಗಿತ್ತು ಎಂದು ಬಿಸಿಸಿಐ ಹೇಳಿದೆ.

ಟೀಂ ಪ್ರವಾಸ ಕೈಗೊಂಡಿರುವ ವೇಳೆ ರಂಜಿತ್ ಬಿಸ್ವಾಲ್ ಟೀಂ ಮ್ಯಾನೇಜರ್ ಆಗಿದ್ದರು. ಆ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಿಂದ ಗ್ರಹಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ.

ಬಿಸಿಸಿಐ ಅಫಿಡವಿಟ್ ಜತೆ ಬಿಸ್ವಾಲ್ ಅವರು ಈ ಎಲ್ಲ ವಿಷಯಗಳನ್ನು ವಿವರಿಸಿ ಪ್ರತ್ಯೇಕ ಅಫಿಡವಿಟ್‌ನ್ನೂ ಸಲ್ಲಿಸಿದ್ದಾರೆ. ಏತನ್ಮಧ್ಯೆ, ಯಾವುದೇ ಆಟಗಾರರ ಹೆಸರು ಉಲ್ಲೇಖಿಸಲಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT