ವಿಶ್ವನಾಥನ್ ಆನಂದ್ 
ಕ್ರೀಡೆ

'ವಿಶ್ವನಾಥ'ನಾಗದ ಆನಂದ್

ಕಳೆದ ವರ್ಷ ಚೆನ್ನೈನಲ್ಲಿ ನಡೆದ ಚಾಂಪಿಯನ್ಶಿಪ್ನಲ್ಲಿ ಪ್ರಶಸ್ತಿ ಸೋತಿದ್ದ ಆನಂದ್, ಈ ಬಾರಿಯೂ ನಿರಾಸೆ...

ಸೋಚಿ: ಹಾಲಿ ವಿಶ್ವ ಚಾಂಪಿಯನ್ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಆಕ್ರಮಣಕಾರಿ ಆಟದ ಮುಂದೆ ಮಂಕಾದ ಮಾಜಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್, ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ತಮ್ಮ ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಭಾನುವಾರ ನಡೆದ 11ನೇ ಸುತ್ತಿನ ಪಂದ್ಯದಲ್ಲಿ ಕಾರ್ಲ್ಸನ್, ಆನಂದ್ ವಿರುದ್ಧ ಅರ್ಹ ಗೆಲುವು ದಾಖಲಿಸಿದರು. ಪಂದ್ಯದಲ್ಲಿ ಬಿಳಿ ಕಾಯಿ ಹಾಕುವಲ್ಲಿ ಯಶಸ್ವಿಯಾದರು. ಈ ಗೆಲುವಿನಿಂದ ಟೂರ್ನಿಯಲ್ಲಿ 6.5 ಅಂಕಗಳನ್ನು ಸಂಪಾದಿಸಿದ ಕಾರ್ಲ್ಸನ್, ತಮ್ಮ ವಿಶ್ವ ಚಾಂಪಿಯನ್ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಟೂರ್ನಿಯಲ್ಲಿ ಇನ್ನು ಪಂದ್ಯ ಬಾಕಿ ಇರುವಾಗಲೇ ಆನಂದ್ ಪ್ರಶಸ್ತಿ ಆಸೆ ಕೈ ಬಿಟ್ಟಿದ್ದಾರೆ.

ಪಂದ್ಯದಲ್ಲಿ 24ನೇ ನಡೆಯಲ್ಲಿ ಆನಂದ್ ಎಸಗಿದ ತಪ್ಪು ದುಬಾರಿಯಾಗಿ ಪರಿಣಮಿಸಿತು. ಇದರ ಲಾಭ ಪಡೆದ ಕಾರ್ಲ್ಸನ್, ಆನಂದ್ಗೆ ಮತ್ತೆ ಚೇತಿರಿಸಿಕೊಳ್ಳುವ ಅವಕಾಶ ನೀಡಲೇ ಇಲ್ಲ. ಹಾಗಾಗಿ ಪಂದ್ಯ 45ನೇ ನಡೆಯಲ್ಲಿ ಅಂತ್ಯ ಕಂಡಿತು.

ಕಳೆದ ವರ್ಷ ಚೆನ್ನೈನಲ್ಲಿ ನಡೆದ ಚಾಂಪಿಯನ್ಶಿಪ್ನಲ್ಲಿ 10ನೇ ಸುತ್ತಿಗೆ ಪ್ರಶಸ್ತಿ ಸೋತಿದ್ದ ಆನಂದ್, ಈ ಬಾರಿಯೂ ನಿರಾಸೆ ಅನುಭವಿಸಿದ್ದಾರೆ. ಈ ಪಂದ್ಯದಲ್ಲಿ ಡ್ರಾ ಸಾಧಿಸಿದ್ದರೂ, ಆನಂದ್ ಮುಂದಿನ ಪಂದ್ಯದಲ್ಲಿ ಗೆಲುವಿನ ಪ್ರಯತ್ನ ನಡೆಸಬಹುದಾಗಿತ್ತು.

ಕಾರಣ ಮುಂದಿನ ಪಂದ್ಯದಲ್ಲಿ ಬಿಳಿ ಕಾಯಿ ನಡೆಸುವ ಅವಕಾಶ ಆನಂದ್ಗೆ ಲಭಿಸಿತ್ತು. ಆದರೆ, ಇಬ್ಬರು ಆಟಗಾರರ ನಡುವೆ 2 ಅಂಕಗಳ ಅಂತರವಿದ್ದು, ಒಂದು ಪಂದ್ಯದಲ್ಲಿ ಗೆದ್ದರೂ ಕಾರ್ಲ್ಸನ್ರನ್ನು ಮಣಿಸಲು ಅಸಾಧ್ಯ. ಹಾಗಾಗಿ ಆರನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಆನಂದ್ ಆಸೆ ಕಮರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT