ಯುವರಾಜ್ ಸಿಂಗ್ 
ಕ್ರೀಡೆ

ನನಗೆ ರು.16 ಕೋಟಿ ಕೊಡಿ ಅಂತ ಕೇಳಿರಲಿಲ್ಲ

ನನಗೆ ರು.16 ಕೋಟಿ ಕೊಡಿ ಅಂತ ನಾನು ಯಾರಲ್ಲೂ ಬೇಡಿರಲಿಲ್ಲ. ಇತರ ಆಟಗಾರರಂತೆಯೇ ನಾನೂ ಈ ಬಾರಿಯ ಐಪಿಎಲ್ ನಲ್ಲಿ ಹರಾಜಾಗಿದ್ದೇನಷ್ಟೇ..

ನವದೆಹಲಿ: `ನನಗೆ ರು.16 ಕೋಟಿ ಕೊಡಿ ಅಂತ ನಾನು ಯಾರಲ್ಲೂ ಬೇಡಿರಲಿಲ್ಲ. ಇತರ ಆಟಗಾರರಂತೆಯೇ ನಾನೂ ಈ ಬಾರಿಯ ಐಪಿಎಲ್ ನಲ್ಲಿ ಹರಾಜಾಗಿದ್ದೇನಷ್ಟೇ.. ಡೆಲ್ಲಿ ತಂಡದ ಬ್ಯಾಟ್ಸ್‍ಮನ್ ಯುವರಾಜ್ ಸಿಂಗ್ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಬಾರಿಯ ಐಪಿಎಲ್ ಆಟಗಾರರ ಹರಾಜಿಗೂ ಕೆಲವೇ ದಿನಗಳ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯಿಂದ ಗೇಟ್ ಪಾಸ್ ಪಡೆದಿದ್ದ ಅವರಿಗೆ ಡೆಲ್ಲಿ ತಂಡ 16 ಕೋಟಿ ಕೊಟ್ಟು ಖರೀದಿಸಿತ್ತು. ಆದರೆ, ಈಗ ಡೆಲ್ಲಿ ತಂಡದ ಪರ ಆಡಿದ್ದು ಅಷ್ಟಕ್ಕಷ್ಟೇ. ಇದೇ ಕಾರಣಕ್ಕಾಗಿ ತಮ್ಮನ್ನು ಪ್ರಶ್ನಿಸಿದ ಸುದ್ದಿಗಾರರಿಗೆ ಹೀಗೆ ಖಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಇಷ್ಟೇ ಅಲ್ಲದೇ ತಮ್ಮ ಮಾತುಗಳನ್ನು ಮುಂದುವರೆಸಿ, ನಾನು ರು.16 ಕೋಟಿ ಪಡೆದದ್ದಕ್ಕೇ ನನ್ನ ಮೇಲೆ ಒತ್ತಡವಿಲ್ಲ. ನನಗೆ ಕ್ರಿಕೆಟ್ ಅಂದರೆ ಜೀವ. ಹಣ ಸಿಗದೇ ಇದ್ದಿದ್ದರೂ ನಾನು ಈ ಬಾರಿಯ ಐಪಿಎಲ್ ನಲ್ಲಿ ಆಡುತ್ತಿದ್ದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್; ಲೋಕಾಯುಕ್ತ ಸಲ್ಲಿಸಿದ್ದ 'ಬಿ' ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

Baramati plane crash: ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನಕ್ಕೂ ಮುನ್ನ ಆಗಿದ್ದೇನು? ಸ್ಫೋಟಕ ಮಾಹಿತಿ ಬಹಿರಂಗ!

ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ; ಕೆಲಸ ಎಲ್ಲಿ ಗೊತ್ತಾ?

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ; 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಅತಂತ್ರದಲ್ಲಿ NCP ಭವಿಷ್ಯ?; ರಾಜಕೀಯ ವಿಶ್ಲೇಷಕರು ಹೇಳೋದೇನು?

SCROLL FOR NEXT