ಭಾರತೀಯ ಪ್ಯಾರಾಲಿಂಪಿಕ್ಸ್ ಸಂಸ್ಥೆ 
ಕ್ರೀಡೆ

ಭಾರತೀಯ ಪ್ಯಾರಾಲಿಂಪಿಕ್ಸ್ ಸಂಸ್ಥೆ ವಜಾ: ಕೇಂದ್ರ ಕ್ರೀಡಾ ಸಚಿವಾಲಯದ ನಿರ್ಧಾರ

ಇತ್ತೀಚಿನ ದಿನಗಳಲ್ಲಿ ಪ್ಯಾರಾ ಅಥ್ಲೀಟ್ ಗಳಿಗೆ ಮೂಲಭೂತ ಸೌಕರ್ಯ ಒದಗಿಸುವ, ಆಡಳಿತ, ತಾಂತ್ರಿಕ ವಿಷಯಗಳಲ್ಲಿ ಸಾಕಷ್ಟು ದೂರುಗಳು ಕೇಳಿ ಬಂದ...

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಪ್ಯಾರಾ ಅಥ್ಲೀಟ್ ಗಳಿಗೆ ಮೂಲಭೂತ ಸೌಕರ್ಯ ಒದಗಿಸುವ, ಆಡಳಿತ, ತಾಂತ್ರಿಕ ವಿಷಯಗಳಲ್ಲಿ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಭಾರತೀಯ ಪ್ಯಾರಾಲಿಂಪಿಕ್ಸ್ (ಪಿಸಿಐ) ಸಂಸ್ಥೆಯನ್ನು ಕೇಂದ್ರ ಕ್ರೀಡಾ ಸಚಿವಾಲಯ ವಜಾಗೊಳಿಸಿದೆ.

ಮಾರ್ಚ್ 20ರಿಂದ 22ರವರೆಗೆ ಗಾಜಿಯಾಬಾದ್ ನಲ್ಲಿ ಆಯೋಜಿಸಲಾಗಿದ್ದ 15ನೇ  ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ನಲ್ಲಿ ಕಳಪೆ  ಮೂಲಸೌಕರ್ಯಗಳನ್ನು ನೀಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೇ  ಕಾರಣಕ್ಕಾಗಿ, ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಸಂಸ್ಥೆ (ಐಪಿಸಿ) ಇತ್ತೀಚೆಗಷ್ಟೇ ಪಿಸಿಐಯನ್ನು ಅಮಾನತುಗೊಳಿಸಿತ್ತು. ಇದರ ಬೆನ್ನಲ್ಲೇ ಪಿಸಿಐಗೆ ಶೋಕಾಸ್  ನೋಟಿಸ್ ನೀಡಿದ್ದ ಕೇಂದ್ರ ಕ್ರೀಡಾ ಸಚಿವಾಲಯ, ಈ ಬಗ್ಗೆ ವಿವರಣೆ ನೀಡಬೇಕೆಂದು ಸೂಚಿಸಿತ್ತಲ್ಲದೆ, ಪಿಸಿಐನ ಮಾನ್ಯತೆ ರದ್ದುಗೊಳಿಸುವ ಬಗ್ಗೆಯೂ ಪ್ರಸ್ತಾಪಿಸಿತ್ತು.

ಇದೀಗ, ಈ ಪ್ರಕರಣವನ್ನು ಗಂಭೀರವಾಗಿ  ತೆಗೆದುಕೊಂಡ ಕ್ರೀಡಾ ಇಲಾಖೆ, ಪಿಸಿಐಯನ್ನು
ಅಮಾನತುಗೊಳಿಸಿದೆಯಲ್ಲದೇ, ಭಾರತೀಯ ಕ್ರೀಡಾ ಇಲಾಖೆ, ಪಿಸಿಐಯನ್ನು ಅಮಾನತುಗೊಳಿಸಿದೆಯಲ್ಲದೇ, ಭಾರತೀಯ ಕ್ರೀಡಾ ಒಕ್ಕೂಟ(ಎನ್ಎಸ್ಎಫ್)ದ ಮಾನ್ಯತೆಯನ್ನೂ ರದ್ದುಗೊಳಿಸಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಕ್ರೀಡಾ ಇಲಾಖೆ, ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಗಾಜಿಯಾಬಾದ್‍ನಲ್ಲಿ ಆಯೋಜಿಸಲಾಗಿದ್ದ 15ನೇ ಪ್ಯಾರಾ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಯೋಜಕರ ಬೇಜವಾಬ್ದಾರಿ ಎದ್ದು ಕಾಣುತ್ತಿತ್ತು. ಅಥ್ಲೀಟ್‍ಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸುವಲ್ಲಿ ಆಯೋಜಕರು ವಿಫಲರಾಗಿದ್ದರು. ಈ ಮೂಲಕ ಭಾರತೀಯ ಪ್ಯಾರಾಲಿಂಪಿಕ್ಸ್ ಸಂಸ್ಥೆ ಮಾನ್ಯತೆ ಪಡೆಯಲು ಅನುಸರಿಸಬೇಕಾದ ನೀತಿ ನಿಯಮವನ್ನು ಅಲ್ಲದೆ ತನ್ನ ಈ ಹಿಂದಿನ ಸಂವಿಧಾನವನ್ನು ಪಿಸಿಐ ಉಲ್ಲಂಘಿಸಿದೆ.

ವಿಕಲಚೇತನರ ಕ್ರೀಡೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕಿದ್ದ ಪ್ಯಾರಾಲಿಂಪಿಕ್ಸ್ ಸಂಸ್ಥೆ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ, ಪಿಸಿಐಯನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಬೇಕಾಯಿತು
ಎಂದು ಕೇಂದ್ರ ಕ್ರೀಡಾ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT