ವಿಕಾಸ್ ಗೌಡ 
ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಗೆ ವಿಕಾಸ್ ಅರ್ಹತೆ

ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಡಿಸ್ಕಸ್ ಥ್ರೋ ಪಟು ಕರ್ನಾಟಕದ ವಿಕಾಸ್ ಗೌಡ ಬಿಜೀಂಗ್ ನಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಡಿಸ್ಕಸ್ ಥ್ರೋ ಪಟು ಕರ್ನಾಟಕದ ವಿಕಾಸ್ ಗೌಡ ಬಿಜೀಂಗ್ ನಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಅಮೆರಿದಕ ಸ್ಯಾನ್ ಡಿಗೋದ ಒಲಂಪಿಕ್ಸ್ ತರಬೇತಿ ಕೇಂದ್ರದಲ್ಲಿ ನಡೆದ ಪುರುಷರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಜಯ ಸಾಧಿಸಿದ ವಿಕಾಸ್ ಗೌಡ ಈ ಮೂಲಕ ಮುಂಬರುವ ಆಗಸ್ಟ್ 22 ರಿಂದ 30 ರವರೆಗೆ ನಡೆಯಲಿರುವ ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್ ಶಿಪ್ ಗೆ ಅರ್ಹತೆ ಸಂಪಾದಿಸಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಗೆ ಅರ್ಹತೆ ಪಡೆಯಲು 65 ಕಿಮೀ ದೂರ ಎಸೆಯಬೇಕಿತ್ತು.  ವಿಕಾಸಗೌಡ ಸ್ಪರ್ಧೆಯಲ್ಲಿ ಈ ಋತುವಿನ  ಶ್ರೇಷ್ಠ ಸಾಧನೆಯಾಗಿರುವ 65. 25 ಮೀ. ದೂರ ಎಸೆಯುವ ಮೂಲಕ ತೇರ್ಗಡೆಯಾಗಿದ್ದಾರೆ.
ಇದು ಪ್ರಸಕ್ತ ಋತುವಿನಲ್ಲಿ ನನ್ನ ಎರಡನೇ ಸ್ಪರ್ಧೆಯಾಗಿದೆ, ಆರಂಭದಲ್ಲೇ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಗೆ ಅರ್ಹತೆ ಪಡೆದು ಕೊಂಡಿರುವುದು ಸಂತೋಷವಾಗಿದೆ.
ಈಗ ಯಾವುದೇ ವಿಷಯದ ಬಗ್ಗೆಯೂ ತಲೆ ಕೆಡಿಸಿಕೊಳ್ಳದೇ ವಿಶ್ವ ಚಾಂಪಿಯನ್ ಶಿಪ್ ಮತ್ತು ಶಾಂಘೈನಲ್ಲಿ ನಡೆಯಲಿರುವ ಲೀಗ್ ಸೇರಿದಂತೆ ವಿಶ್ವ ಚಾಂಪಿಯನ್ ಶಿಪ್ ಗೂ ಮೊದಲು 5-6 ಸ್ಪರ್ಧೆಗಳಲ್ಲಿ  ಭಾಗವಹಿಸುತ್ತಿದ್ದೇನೆ. ಹಾಗಾಗಿ ಚಾಂಪಿಯನ್ ಶಿಪ್ ಗೂ ಮೊದಲು ಉತ್ತಮ ತಯಾರಿ ನಡೆಸಿದಂತಾಗಲಿದೆ. ಎಂದು ವಿಕಾಸ್ ತಿಳಿಸಿದ್ದಾರೆ.
ಕಳೆದ ಎರಡು ವಿಶ್ವ ಚಾಂಪಿಯನ್ ನ ಫೈನಲ್ ಸುತ್ತಿಗೆ ಪ್ರವೇಶಿಸಿದ್ದ ವಿಕಾಸ್, ಈ ಬಾರಿ  ಪದಕ ಪಡೆಯುವ ಗುರಿ ಹೊಂದಿದ್ದಾರೆ. ಪದಕ ಗೆದ್ದರೆ, ಕನಸು ನನಸಾದಂತಾಗಲಿದೆ. ಈ ಸಾಧನೆ ಮಾಡುವುದು ಸುಲಭವಲ್ಲ, ಮುಂದಿನ ವರ್ಷ ಒಲಂಪಿಕ್ಸ್ ಕ್ರೀಡಾಕೂಟ ನಡೆಯಲಿರುವ ಹಿನ್ನೆಲೆಯಲ್ಲಿ ಈ ಋತು ಬಹಳ ಪ್ರಮುಖವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT