ಪ್ರೊ ಕಬಡ್ಡಿ: ಜಯದ ಹಾದಿಗೆ ಮರಳಿದ ಹಾಲಿ ಚಾಂಪಿಯನ್ಸ್ ಜೈಪುರ ಪಿಂಕ್ ಪ್ಯಾಂಥರ್ಸ್ 
ಕ್ರೀಡೆ

ಮುಂಬೈ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಜೈಪುರ

ಪ್ರಸಕ್ತ ಸಾಲಿನ ಪ್ರೊ ಕಬಡ್ಡಿ ಟೂರ್ನಿಯ ಆರಂಭಿಕ ಎಂಟು ಪಂದ್ಯಗಳಲ್ಲಿ ಸತತ ಗೆಲುವಿನ ಮೂಲಕ ಮೆರೆಯುತ್ತಿದ್ದ ಮುಂಬೈಗೆ...

ಹೈದರಾಬಾದ್: ಪ್ರಸಕ್ತ ಸಾಲಿನ ಪ್ರೊ ಕಬಡ್ಡಿ ಟೂರ್ನಿಯ ಆರಂಭಿಕ ಎಂಟು ಪಂದ್ಯಗಳಲ್ಲಿ ಸತತ ಗೆಲುವಿನ ಮೂಲಕ ಮೆರೆಯುತ್ತಿದ್ದ ಮುಂಬೈಗೆ, ಈಗ ಟೂರ್ನಿಯಲ್ಲಿ ಮೊದಲ ಆಘಾತವಾಗಿದ್ದು, ಅದರ ಗೆಲುವಿನ ಓಟಕ್ಕೆ ತಡೆಬಿದ್ದಿದೆ.

ಗಾಚಿಬೋಲಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಟೂರ್ನಿಯ 34ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ 35-25 ಅಂಕಗಳ ಅಂತರದಲ್ಲಿ ಗೆಲುವು ದಾಖಲಿಸುವ ಮುಖೇನಯು ಮುಂಬಾಗೆ ಸೋಲಿನ ರುಚಿಯುಣಿಸಿತು. ಅಂದಹಾಗೆ ಟೂರ್ನಿಯ ಆರಂಭಿಕ ಪಂದ್ಯದಲ್ಲಿಯು ಮುಂಬಾ ವಿರುದ್ಧ ಸೋತಿದ್ದ ಜೈಪುರ ತಂಡಕ್ಕೆ ಈ ಗೆಲುವು ತುಸು ಸಮಾಧಾನ ತಂದಿತು.

ಈ ಗೆಲುವಿನೊಂದಿಗೆ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದಿದೆ. ಪಂದ್ಯದ ಆರಂಭದಿಂದಲೂ ಆಕರ್ಷಕ ಪ್ರದರ್ಶನ ನೀಡಿದ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ ಎಲ್ಲ ವಿಭಾಗಗಳಲ್ಲೂ ಸಂಘಟಿತ ಪ್ರದರ್ಶನ ನೀಡಿತು. ಇನ್ನು ಜೈಪುರ ತಂಡದ ರಕ್ಷಣಾತ್ಮಕ ವಿಭಾಗ ಎಂದಿನಂತೆ ಪರಿಣಾಮಕಾರಿ ಪ್ರದರ್ಶನ ನೀಡಿತು. ಪ್ರಶಾಂತ್ ಚೌಹಾಣ್, ಕುಲ್ದೀಪ್ ಸಿಂಗ್ ಹಾಗೂ ರಣ್ ಸಿಂಗ್ ಸೂಪರ್ ಟ್ಯಾಕಲ್ ಮಾಡುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು.

ಯು ಮುಂಬಾ ತಂಡದ ಪರ ಸುರೇಂದರ್ ನಾಡಾ ರಕ್ಷಣಾತ್ಮಕ ವಿಭಾಗದಲ್ಲಿ 6 ಅಂಕ ಪಡೆದಿದ್ದು, ತಂಡದ ಪರ ಗರಿಷ್ಠ ಪಾಯಿಂಟ್ ಎನಿಸಿತು. ಇನ್ನು ಟೂರ್ನಿಯಲ್ಲಿ ತಂಡದ ಪರ ಪ್ರಮುಖ ಆಟಗಾರನೆನಿಸಿರುವ ನಾಯಕ ಅನುಪ್ ಕುಮಾರ್ 14 ರೈಡ್‍ಗಳಲ್ಲಿ ಕೇವಲ 2 ಅಂಕಗಳನ್ನು ಪಡೆದಿದ್ದು, ತಂಡದ ಹಿನ್ನಡೆಗೆ ಪ್ರಮುಖ ಕಾರಣವಾಯಿತು. ಮತ್ತೊಬ್ಬ ರೈಡರ್ ಪವನ್ ಕುಮಾರ್ ಸಹ 12 ರೈಡ್ ಮಾಡಿ ಕೇವಲ 2 ಅಂಕಗಳನ್ನು ಗಳಿಸಿ ತೀವ್ರ ನಿರಾಸೆ ಮೂಡಿಸಿದರು.

ಪಂದ್ಯದ ಆರಂಭದಿಂದ ಮುನ್ನಡೆ ಸಾಧಿಸಿದ ಜೈಪುರ ತಂಡ 32ನೇ ನಿಮಿಷದ ವೇಳೆಗೆ 3019 ಅಂಕಗಳ ಅಂತರದ ಮುನ್ನಡೆಯೊಂದಿಗೆ ಪಂದ್ಯದಲ್ಲಿ ಸುಸ್ಥಿತಿಗೆ ತಲುಪಿತು. ಹಾಗಾಗಿ ಪಂದ್ಯದ ಅಂತಿಮ ಅವಧಿಯಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ಒತ್ತಡದಿಂದ ಹೊರಬಂದು ರಕ್ಷಣಾತ್ಮಕ ಪ್ರದರ್ಶನದಿಂದ ಅಂತರ ಕಾಯ್ದುಕೊಳ್ಳುವತ್ತ ಗಮನ ಹರಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT