ತ್ರಿಕೋನ ಸರಣಿ: ಭಾರತ ಎ ತಂಡ (ಫೋಟೋ ಕೃಪೆ: ಬಿಸಿಸಿಐ) 
ಕ್ರೀಡೆ

ಉನ್ಮುಕ್ತ್ ಚಾಂದ್ ಪಡೆಗೆ ಗೆಲ್ಲುವ ಅನಿವಾರ್ಯತೆ

ಈಗಾಗಲೇ ಆರಂಭಗೊಂಡಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ `ಎ' ತಂಡಗಳುಳ್ಳ ತ್ರಿಕೋನ ಸರಣಿಯಲ್ಲಿ ಮೊದಲ ಸೋಲನುಭವಿಸಿ ತತ್ತರಿಸಿರುವ ಭಾರತ `ಎ' ತಂಡಕ್ಕೆ ಭಾನುವಾರ ಎರಡನೇ ಸವಾಲು ಕಾದಿದ್ದು, ದಕ್ಷಿಣ ಆಫ್ರಿಕಾ `ಎ' ತಂಡದ ವಿರುದ್ಧದ ಪಂದ್ಯ...

ಚೆನ್ನೈ: ಈಗಾಗಲೇ ಆರಂಭಗೊಂಡಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ `ಎ' ತಂಡಗಳುಳ್ಳ ತ್ರಿಕೋನ ಸರಣಿಯಲ್ಲಿ ಮೊದಲ ಸೋಲನುಭವಿಸಿ ತತ್ತರಿಸಿರುವ ಭಾರತ `ಎ' ತಂಡಕ್ಕೆ ಭಾನುವಾರ ಎರಡನೇ ಸವಾಲು ಕಾದಿದ್ದು, ದಕ್ಷಿಣ ಆಫ್ರಿಕಾ `ಎ' ತಂಡದ ವಿರುದ್ಧದ ಪಂದ್ಯ ಅದಕ್ಕೆ ಮಹತ್ವಪೂರ್ಣವೆನಿಸಿದೆ.

ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಸರಣಿಯ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಒತ್ತಡಕ್ಕೆ ಉನ್ಮುಕ್ತ್ ಚಾಂದ್ ಬಳಗ ಒಳಗಾಗಿದ್ದರೆ, ಇದೇ ಪರಿಸ್ಥಿತಿ ದ.ಆಫ್ರಿಕಾ ತಂಡಕ್ಕೂ ಇದೆ. ಏಕೆಂದರೆ ಆರಂಭಿಕ ಎರಡು ಪಂದ್ಯಗಳಲ್ಲಿ ಬಲಿಷ್ಟ ಆಸ್ಟ್ರೇಲಿಯಾ `ಎ' ತಂಡ ಜಯಭೇರಿ ಮೊಳಗಿಸಿದೆ. ಅನೌಪಚಾರಿಕ ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡದ ಆಟಗಾರರು ತೋರಿದ ಪ್ರದರ್ಶನವನ್ನೇ ಗಮನಿಸುವುದಾದರೆ, ಧವಳ್ ಕುಲಕರ್ಣಿ ಹಾಗೂ ಸಂದೀಪ್ ಶರ್ಮಾ, ಆಸ್ಟ್ರೇಲಿಯಾದ ಉಸ್ಮಾನ್ ಖವಾಜಾ ಹಾಗೂ ಜೊ ಬರ್ನ್ಸ್ ಅವರನ್ನು ಕಟ್ಟಿಹಾಕುವಲ್ಲಿ ಆರಂಭಿsಕ ಯಶಸ್ಸು ಸಂಪಾದಿಸಿದರೂ, ಎಕ್ರಮೇಣ ಇದರಲ್ಲಿ ವಿಫಲರಾಗಿದ್ದಾರೆ.

ಇನ್ನು, ಬ್ಯಾಟಿಂಗ್‍ನಲ್ಲಿ ಉನ್ಮುಕ್ತ್ ಚಾಂದ್ ಹಾಗೂ ಕೇದಾರ್ ಜಾಧವ್ ತಕ್ಕಮಟ್ಟಿಗೆ ಯಶಸ್ವಿಯಾಗಿದ್ದರೂ, ಮಾಯಾಂಕ್ ಅಗರ್ವಾಲ್, ಮನೀಶ್ ತಿವಾರಿ ಹಾಗೂ ಕರುಣ್ ನಾಯರ್ ಉತ್ತಮ ಮೊತ್ತ ಪೇರಿಸುವಲ್ಲಿ ವಿಫಲವಾಗಿದ್ದು, ಪುಟಿದೆದ್ದು ನಿಲ್ಲಬೇಕಾದ ಸಮಯ ಬಂದೊದಗಿದೆ. ಅತ್ತ, ಹರಿಣಗಳ ಪಡೆ ಅನುಭವಿಗಳಿಂದ ಬಲಿಷ್ಠವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT