ಮಹೇಂದ್ರ ಸಿಂಗ್ ಧೋನಿ 
ಕ್ರೀಡೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಧೋನಿಗೆ ಕೋರ್ಟ್ ತರಾಟೆ

ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ...

ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. 
ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ ಪ್ರಕರಣ ರದ್ದು ಕೋರಿ ಮಹೇಂದ್ರ ಸಿಂಗ್ ಧೋನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 9ನೇ ಎಸಿಎಂಎಂ ನ್ಯಾಯಾಮೂರ್ತಿ ಎ.ಎನ್ ವೇಣುಗೋಪಾಲಗೌಡ ಅವರು ಧೋನಿ ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 
ಹಣಕ್ಕಾಗಿ ಸೆಲೆಬ್ರಿಟಿಗಳು ಏನೇನೆಲ್ಲಾ ದಾರಿ ಹಿಡಿತ್ತಾರೆ. ಇಂತ ಸೆಲೆಬ್ರಿಟಿಗಳ ಹಿಂದೆ ಜನರೂ ಬೀಳುತ್ತಾರೆ ಇದು ದುರಾದೃಷ್ಟಕರ. ಈ ಸೆಲೆಬ್ರಿಟಿಗಳು ಕಷ್ಟಪಟ್ಟು ದುಡಿಯಲ್ಲ, ಇವರಿಗೆ ಸುಲಭದಲ್ಲಿ ಹಣ ಬೇಕು ಎಂದು ಧೋನಿಯನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಹಾಜರಿದ್ದ ಧೋನಿ ಪರ ವಕೀಲರು ಈ ಜಾಹಿರಾತಿಗಾಗಿ ಧೋನಿ ಸಂಭಾವನೆ ಪಡೆದಿಲ್ಲ ಎಂದು ಹೇಳಿದರು. ಇದಕ್ಕೆ ನ್ಯಾಯಾಧೀಶರು ಜಾಹಿರಾತಿಗೆ ಧೋನಿ ಸಂಭಾವನೆ ಪಡೆದಿಲ್ಲ ಎನ್ನುವುದಾದರೆ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಿದ್ದಾರೆ. 
ಪ್ರಕರಣ ಸಂಬಂಧ ವಿಚಾರಣೆಗೆ ಇಂದು ಧೋನಿ ಹಾಜರಾಗಬೇಕಿತ್ತು. ಆದರೆ ಧೋನಿಗೆ ವಿನಾಯಿತಿ ನೀಡಲಾಗಿದೆ. 
ಬಿಸಿನೆಸ್ ಟುಡೇ ವಾರಪತ್ರಿಕೆಯ ಜಾಹೀರಾತು ಒಂದರಲ್ಲಿ ಮಹೇಂದ್ರ ಸಿಂಗ್ ಧೋನಿಯು ವಿಷ್ಣು ದೇವರ ಅವತಾರದಲ್ಲಿ ಕೈಯಲ್ಲಿ ಶೂ ಹಾಗೂ ಇತರ ವಸ್ತುಗಳನ್ನು ಹಿಡಿದು ಕಾಣಿಸಿಕೊಂಡಿದ್ದರು. ಇದು ಹಿಂದೂ ಧರ್ಮಕ್ಕೆ ವಿರುದ್ದವಾಗಿತ್ತಲ್ಲದೆ, ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿಯಲ್ಲಿ ಜಯಕುಮಾರ್ ಹೀರೆಮಠ್ ಎಂಬವರು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT