ಟೀಂ ಇಂಡಿಯಾ ಆರಂಭಿಕ ಆಟಗಾರ ಮುರಳಿ ವಿಜಯ್ (ಸಂಗ್ರಹ ಚಿತ್ರ) 
ಕ್ರೀಡೆ

ಗಾಲೆ ಟೆಸ್ಟ್ ಗೆ ಮುರಳಿ ಅಲಭ್ಯ

ಟೀಂ ಇಂಡಿಯಾ ಆರಂಭಿಕ ಆಟಗಾರ ಮುರಳಿ ವಿಜಯ್, ಗಾಯದ ನಿಮಿತ್ತ ಬುಧವಾರದಿಂದ ಗಾಲೆಯಲ್ಲಿ ಆರಂಭಗೊಳ್ಳಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ...

ನವದೆಹಲಿ: ಟೀಂ ಇಂಡಿಯಾ ಆರಂಭಿಕ ಆಟಗಾರ ಮುರಳಿ ವಿಜಯ್, ಗಾಯದ ನಿಮಿತ್ತ ಬುಧವಾರದಿಂದ ಗಾಲೆಯಲ್ಲಿ ಆರಂಭಗೊಳ್ಳಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸ್ನಾಯು ಸೆಳೆತದಿಂದ ಬಳಲುತ್ತಿರುವ ಮುರಳಿ ವಿಜಯ್ ಅವರನ್ನು ಮೊದಲ ಟೆಸ್ಟ್ ನಿಂದ ಕೈ ಬಿಟ್ಟಿರುವುದನ್ನು ಟೀಂ ಇಂಡಿಯಾ ನಿರ್ದೇಶಕ ರವಿಶಾಸ್ತ್ರಿ ಖಾತ್ರಿ ಪಡಿಸಿದ್ದಾರೆ. ಅವರ ಜಾಗಕ್ಕೆ ಕರ್ನಾಟಕದ ಆಟಗಾರ ಕೆ.ಎಲ್.ರಾಹುಲ್ ಸ್ಥಾನ ಪಡೆಯುವುದು ನಿಕ್ಕಿಯಾಗಿದೆ.

ಇತ್ತೀಚೆಗೆ, ಟೀಂ ಇಂಡಿಯಾ ಕೈ ಗೊಂಡಿದ್ದ ಜಿಂಬಾಬ್ವೆ ಪ್ರವಾಸದ ವೇಳೆಯೇ ಗಾಯದ ಸಮಸ್ಯೆಗೆ ತುತ್ತಾಗಿದ್ದ ಮುರಳಿ ವಿಜಯ್, ಶನಿವಾರ ಮುಕ್ತಾಯ ಕಂಡ ಭಾರತ ಹಾಗೂ ಶ್ರೀಲಂಕಾ ಮಂಡಳಿ ಅಧ್ಯಕ್ಷರ ಇಲೆವೆನ್ ತಂಡದ ನಡುವಿನ ಪಂದ್ಯದ ವೇಳೆಯೂ ಸ್ನಾಯು ಸೆಳೆತದಿಂದ ಬಳಲಿದ್ದರು. ಹಾಗಾಗಿ, ಭಾರತದ ಎರಡೂ ಇನಿಂಗ್ಸ್ ಗಳಲ್ಲಿ ಅವರು ಕ್ರೀಸ್ ಗೆ ಇಳಿದಿರಲಿಲ್ಲ.

ಪೂಜಾರಗೆ ಕೊಕ್?
ಬದಲಾದ ಸನ್ನಿವೇಶದಲ್ಲಿ ಚೇತೇಶ್ವರ ಪೂಜಾರ ಟೀಂ ಇಂಡಿಯಾದ ಅಂತಿಮ ಹನ್ನೊಂದರಲ್ಲಿ ಕಕಾಣಿಸಿಕೊಳ್ಳುವುದು ಅನುಮಾನವಾಗಿದೆ. ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಗಳಿವೆ ಎಂದು ರವಿಶಾಸ್ತ್ರಿ ಹೇಳಿರುವುದು ಈ ಅನುಮಾನಕ್ಕೆ ಆಸ್ಪದ ಮಾಡಿಕೊಟ್ಟಿದೆ.

ರ್ಯಾಕಿಂಗ್: 3ನೇ ಸ್ಥಾನದ ಮೇಲೆ ಕಣ್ಣು
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡ 3-0 ಅಂತರದಲ್ಲಿ ಗೆದ್ದರೆ, ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅದು ಈಗಿರುವ 5ನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಿಗಿಯಲಿದ್ದು, ಕೊಹ್ಲಿ ಪಡೆ ಇದರತ್ತ ಗಂಭೀರ ಚಿತ್ತ ಹರಿಸಿದೆ. ಆದರೆ, ಇದು ಪ್ರಸ್ತುತ ನಡೆಯುತ್ತಿರುವ ಆ್ಯಶಸ್ ಸರಣಿಯ ಒಟ್ಟಾರೆ ಫಲಿತಾಂಶದ ಮೇಲೆ ಅವಲಂಬಿತವಾಗಲಿದೆ. ಆ್ಯಶಸ್ ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿಯಿದ್ದು, ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ, ಇಂಗ್ಲೆಂಡ್ ತಂಡವನ್ನು ಮಣಿಸಿದರೆ, ಭಾರತಕ್ಕೆ ರ್ಯಾಂಕಿಂಗ್ ಪಟ್ಟಿಯಲ್ಲಿ ಮೇಲೆ ಸಾಗಲು ಹೆಚ್ಚು ಅನುಕೂಲವಾಗುತ್ತದೆ. ಆಗ, ಲಂಕಾ ವಿರುದ್ಧ 2-1ರ ಅಂತರದಲ್ಲಿ ಗೆದ್ದರೂ ಸಾಕು ಅದಕ್ಕೆ 3 ಅಂಕಗಳು ಲಭ್ಯವಾಗಲಿದ್ದು, ಆಗ 3ನೇ ಸ್ಥಾನಕ್ಕೇರುವುದು ಖಚಿತ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಂಡೆ ಬ್ಲಾಸ್ಟ್ ಗೆ ಗರ್ಭಿಣಿ ಚಿರತೆ, 3 ಮರಿಗಳ ಸಾವು: ತನಿಖೆಗೆ ಆದೇಶ, 'ತಪ್ಪು ಮಾಡಿದವರ ಬಿಡೋ ಮಾತೇ ಇಲ್ಲ'!

SCROLL FOR NEXT