ದಿನೇಶ್ ಕಾರ್ತಿಕ್ ಮತ್ತು ದೀಪಿಕಾ ಪಳ್ಳಿಕಲ್ (ಚಿತ್ರ ಕೃಪೆ: ಬಿಸಿಸಿಐ) 
ಕ್ರೀಡೆ

ಎರಡನೇ ಬಾರಿಗೆ ಗೃಹಸ್ಥಾಶ್ರಮಕ್ಕೆ ಕಾಲಿರಿಸಿದ ದಿನೇಶ್ ಕಾರ್ತಿಕ್

ಭಾರತ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಅವರಿಗೆ ಎರಡನೇ ಬಾರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಮಂಗಳವಾರ ಖ್ಯಾತ ಸ್ಕ್ವಾಷ್ ತಾರೆ ದೀಪಿಕಾ ಪಳ್ಳಿಕಲ್ ಅವರನ್ನು ವಿವಾಹವಾಗಿದ್ದಾರೆ...

ಚೆನ್ನೈ: ಭಾರತ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಅವರಿಗೆ ಎರಡನೇ ಬಾರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಮಂಗಳವಾರ ಖ್ಯಾತ ಸ್ಕ್ವಾಷ್ ತಾರೆ ದೀಪಿಕಾ ಪಳ್ಳಿಕಲ್ ಅವರನ್ನು ವಿವಾಹವಾಗಿದ್ದಾರೆ.

ಮಂಗಳವಾರ ಚೆನ್ನೈನ ಚರ್ಚ್ ನಲ್ಲಿ ನಡೆದ ಸಮಾರಂಭದಲ್ಲಿ ಕ್ರೈಸ್ತ ಧರ್ಮದ ಪದ್ಧತಿಯಂತೆ ದಿನೇಶ್ ಕಾರ್ತಿಕ್ ತಮ್ಮ ಬಹುದಿನದ ಗೆಳತಿ ಮತ್ತು ಖ್ಯಾತ ಸ್ಕ್ವಾಶ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಅವರನ್ನು ವಿವಾಹವಾಗಿದ್ದಾರೆ. ವಿಶೇಷವೆಂದರೆ ದಿನೇಶ್ ಕಾರ್ತಿಕ್ ಮತ್ತು ದೀಪಿಕಾ ಪಳ್ಳಿಕಲ್ ಅವರ ವಿವಾಹ ಎರಡು ಸಂಪ್ರದಾಯದಂತೆ ನಡೆಯಲಿದ್ದು, ಮಂಗಳವಾರ ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆದಿದೆ.

ದೀಪಿಕಾ ಪಳ್ಳಿಕಲ್ ಕ್ರೈಸ್ತ ಕುಟುಂಬದಿಂದ ಬಂದಿರುವುದರಿಂದ ಮದುವೆ ಆರಂಭದಲ್ಲಿ ಕ್ರೈಸ್ತ ಸಂಪ್ರದಾಯದಂತೆ ನಡೆದಿದ್ದು, ದಿನೇಶ್ ಕಾರ್ತಿಕ್ ಹಿಂದೂ ಧರ್ಮದವರಾದ್ದರಿಂದ ಗುರುವಾರ ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಇದೇ ಗುರುವಾರ ಹಿಂದೂ ಸಂಪ್ರದಾಯದಂತೆ ದಂಪತಿಗಳು ಮದುವೆಯಾಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕ್ರಿಕೆಟ್ ಆಟಗಾರ ದಿನೇಶ್ ಕಾರ್ತಿಕ್ ಈ ಹಿಂದೆಯೇ ಅಂದರೆ 2007ರಲ್ಲಿ ವಿವಾಹವಾಗಿದ್ದರು. ಕಾರ್ತಿಕ್ ತಮ್ಮ ಬಾಲ್ಯದ ಗೆಳತಿ ನಿಕಿತಾ ಅವರೊಂದಿಗೆ ಹೊಸ ಬದುಕನ್ನು ಆರಂಭಿಸಿದ್ದರು. ಆದರೆ ಕೌಟುಂಬಿಕ ಮತ್ತು ವೈಯುಕ್ತಿಕ ಕಾರಣಗಳಿಂದಾಗಿ ಈ ಸಂಬಂಧ ಹೆಚ್ಚು ಕಾಲ ಉಳಿಯದೆ ವಿಚ್ಛೇದನದಲ್ಲಿ ಅಂತ್ಯವಾಗಿತ್ತು. ಬಳಿಕ ನಿಕಿತಾ ಅವರು ಭಾರತದ ಟೆಸ್ಟ್ ಕ್ರಿಕೆಟ್ ಆಟಗಾರ ಮುರಳಿ ವಿಜಯ್ ಅವರನ್ನು ವಿವಾಹವಾದರು.

2013ರಲ್ಲಿ ಕಾರ್ತಿಕ್ ಗೆ ದೀಪಿಕಾ ಅವರ ಪರಿಚಯವಾಗಿತ್ತು. ಪರಿಚಯ ಸ್ನೇಹವಾಗಿ ಇದೀಗ ಇಬ್ಬರೂ ಆಟಗಾರರು ಮದುವೆಯಾಗುವ ಮೂಲಕ ತಮ್ಮ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT