ಲಹಿರು ತಿರಿಮಾನ್ನೆ 
ಕ್ರೀಡೆ

ಎರಡನೇ ಇನಿಂಗ್ಸ್ ನಲ್ಲಿ ಭಾರತವನ್ನು 300 ರನ್ ಗಳಿಗೆ ಕಟ್ಟಿಹಾಕುತ್ತೇವೆ: ಶ್ರೀಲಂಕಾ ಆಟಗಾರ ತಿರಿಮಾನ್ನೆ

87ರನ್ ಹಿನ್ನಡೆ ಅನುಭವಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಶ್ರೀಲಂಕಾ ತಂಡದ ಲಹಿರು ತಿರಿಮಾನ್ನೆ, ಭಾರತವನ್ನು 300 ರನ್ ಗಳಿಗೆ ಕಟ್ಟಿಹಾಕುತ್ತೇವೆ ಎಂದು ಹೇಳಿದ್ದಾರೆ.

ಕೊಲಂಬೋ: ಭಾರತದ ವಿರುದ್ಧದ ಎರಡನೇ ಟೆಸ್ಟ್ ನ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ  87ರನ್  ಹಿನ್ನಡೆ ಅನುಭವಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಶ್ರೀಲಂಕಾ ತಂಡದ ಬ್ಯಾಟ್ಸ್ ಮ್ಯಾನ್ ಲಹಿರು ತಿರಿಮಾನ್ನೆ, ಎರಡನೇ ಇನಿಂಗ್ಸ್ ನಲ್ಲಿ ಭಾರತವನ್ನು 300 ರನ್ ಗಳಿಗೆ ಕಟ್ಟಿಹಾಕುತ್ತೇವೆ ಎಂದು ಹೇಳಿದ್ದಾರೆ.

ಭಾರತ ಮೂರನೇ ದಿನದಾಟದಲ್ಲಿ 70 ರನ್ ಗಳಿಗೆ ಒಂದು ವಿಕೆಟ್ ಕಳೆದುಕೊಂಡು ಒಟ್ಟಾರೆ 157 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ಶ್ರೀಲಂಕಾ ತನ್ನ ಮೊದಲನೇ ಇನಿಂಗ್ಸ್ ನಲ್ಲಿ 306 ರನ್ ಗಳಿಗೆ ಸರ್ವಪತನ ಕಂಡಿತ್ತು. ಭಾರತ ಮೊದಲ ಇನಿಂಗ್ಸ್ ನಲ್ಲಿ 393  ರನ್ ಗಳಿಸಿ ಎರಡನೇ ಇನಿಂಗ್ಸ್ ಗೆ 87 ರನ್ ಗಳ ಮುನ್ನಡೆ ಕಾಯ್ದುಕೊಂಡಿತ್ತು.
ಊಟದ ವಿರಾಮದ ವರೆಗೂ ಬ್ಯಾಟಿಂಗ್ ಮಾಡುತ್ತೇವೆ ಎಂದು ನಿರೀಕ್ಷಿಸಿದ್ದೆವು, ಆ್ಯಂಜೆಲೊ ಮ್ಯಾಥ್ಯೂಸ್ ಕೂಡ ನನಗೆ ಸಕಾರಾತ್ಮವಾಗಿ ಬ್ಯಾಟಿಂಗ್ ಮಾಡಲು ಸಲಹೆ ನೀಡಿದ್ದರು. ಆದರೆ ಇಬ್ಬರೂ ಭಾರತದ ಬೌಲರ್ ಗಳ ಕಠಿಣ ಸವಾಲುಗಳನ್ನು ಎದುರಿಸಬೇಕಾಯಿತು ಎಂದು ತಿರಿಮಾನ್ನೆ ಹೇಳಿದ್ದಾರೆ.
350 ಕ್ಕೂ ಹೆಚ್ಚು ರನ್ ಕಲೆಹಾಕಬೇಕಿತ್ತು, ಮೂರನೇ ದಿನದಾಟ ಸ್ಪಿನ್ನರ್ ಗಳಿಗೆ ಹೆಚ್ಚು ಅನುಕೂಲವಾಗಿದ್ದು, ಹೊಸ ಬಾಲ್ ಬಂದ ನಂತರ ಅವರ ದಾಳಿ ಮತ್ತಷ್ಟು ತೀಕ್ಷ್ಣವಾಯಿತು, ಆದರೆ ಭಾರತವನ್ನು ಎರಡನೇ ಇನಿಂಗ್ಸ್ ನಲ್ಲಿ 300 ರನ್ ಗಳಿಕೆಗೆ ಸೀಮಿತಗೊಳಿಸುತ್ತೇವೆ ಎಂದು ತಿರಿಮಾನ್ನೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟಿಎಂಸಿಯಿಂದ ಅಮಾನತುಗೊಂಡ ಶಾಸಕನಿಂದ ಹೊಸ ಪಕ್ಷ ಘೋಷಣೆ; ಅಲ್ಪಸಂಖ್ಯಾತರು ಒಗ್ಗಟ್ಟಾಗುವಂತೆ ಮಮತಾ ಮನವಿ

ದೇವರೇ ಇದ್ದಿದ್ದರೆ ಗಾಜಾದಲ್ಲಿ ಅಷ್ಟು ಜನ ಯಾಕೆ ಸಾಯ್ತಿದ್ರೂ: ಆ ದೇವರಿಗಿಂತ ನಮ್ಮ ಪ್ರಧಾನಿಯೇ ಉತ್ತಮ; ಮುಫ್ತಿಗೆ ಜಾವೇದ್ ಅಖ್ತರ್ ತಿರುಗೇಟು

ಧಾರವಾಡ ಮರ್ಯಾದಾ ಹತ್ಯೆ: 'ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಮಗಳು ಬೇರೆ ಜಾತಿ ಮದುವೆಯಾದ್ರೆ ತಪ್ಪಾ'!

8 ಕೋಟಿ ಸೈಬರ್ ವಂಚನೆಗೆ ಬಲಿ: ಅವಮಾನಕ್ಕೀಡಾಗಿ ತಲೆಗೆ ಗುಂಡು ಹಾರಿಸಿಕೊಂಡ Punjab ಮಾಜಿ IPS ಅಧಿಕಾರಿ!

Hate Speech Bill: ದ್ವೇಷ ಭಾಷಣ ವಿಧೇಯಕ ತಡೆಹಿಡಿಯುವಂತೆ ರಾಜ್ಯಪಾಲರಿಗೆ ಪತ್ರ ಬರೆದ ಯತ್ನಾಳ

SCROLL FOR NEXT