ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ) 
ಕ್ರೀಡೆ

ಎಲ್‍ಬಿ ಡಿಆರ್‍ಎಸ್‍ಗೆ ಭಾರತ ಒಪ್ಪದು: ಬಿಸಿಸಿಐ

ಟೆಸ್ಟ್ ಕ್ರಿಕೆಟ್‍ನಲ್ಲಿ ಬಳಸಲಾಗುತ್ತಿರುವ ಅಂಪೈರ್ ತೀರ್ಪು ಪರಿಶೀಲನಾ ವ್ಯವಸ್ಥೆ (ಡಿಆರ್‍ಎಸ್)ನಲ್ಲಿ ಕೆಲವು ಬದಲಾವಣೆ ತರುವವರೆಗೂ ಭಾರತ ಈ ವ್ಯವಸ್ಥೆಯನ್ನು ಒಪ್ಪುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ...

ಬೆಂಗಳೂರು: ಟೆಸ್ಟ್ ಕ್ರಿಕೆಟ್‍ನಲ್ಲಿ ಬಳಸಲಾಗುತ್ತಿರುವ ಅಂಪೈರ್ ತೀರ್ಪು ಪರಿಶೀಲನಾ ವ್ಯವಸ್ಥೆ (ಡಿಆರ್‍ಎಸ್)ನಲ್ಲಿ ಕೆಲವು ಬದಲಾವಣೆ ತರುವವರೆಗೂ ಭಾರತ ಈ ವ್ಯವಸ್ಥೆಯನ್ನು ಒಪ್ಪುವುದಿಲ್ಲ  ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಈ ವ್ಯವಸ್ಥೆಯಲ್ಲಿ ಐಸಿಸಿ ಬದಲಾವಣೆ ತರುವುದೇ ಎಂಬುದನ್ನು ನೋಡುತ್ತೇವೆ. ಡಿಆರ್‍ಎಸ್‍ನಲ್ಲಿ ನೋಬಾಲ್, ಬ್ಯಾಟ್ ಪ್ಯಾಡ್ ಕ್ಯಾಚ್, ಮತ್ತು ಇತರೆ ರಿವ್ಯೂಗಳಲ್ಲಿ ಇನ್ನಷ್ಟು ಸುಧಾರಣೆ  ತರಬಹುದಾಗಿದೆ. ಆದರೆ ಎಲ್‍ಬಿಡಬ್ಲ್ಯೂನಲ್ಲಿ ಡಿಆರ್‍ಎಸ್ ಅನ್ನು ಭಾರತ ಒಪ್ಪುವುದಿಲ್ಲ. ಈ ಕುರಿತು ನಾವು ಸಾಕಷ್ಟು ಅಸಮಾಧಾನ ಹೊಂದಿದ್ದೇವೆ. ಐಸಿಸಿ ನಿಖರ ವ್ಯವಸ್ಥೆ ತರುವವರೆಗೂ ಎಲ್ ಬಿಡಬ್ಲ್ಯೂಗೆ ಡಿಆರ್‍ಎಸ್ ಅನ್ನು ಒಪ್ಪುವುದಿಲ್ಲ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಎನ್‍ಸಿಎ ಸ್ಥಳಾಂತರ ಅನಿವಾರ್ಯ
ಇನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು ಸ್ಥಳಾಂತರಿಸುವ ಬಗ್ಗೆ ಮಾತನಾಡಿರುವ ಠಾಕೂರ್, ಬೇರೆ ರಾಜ್ಯ ಸರ್ಕಾರಗಳು ಈ ಸಂಸ್ಥೆ ನಿರ್ಮಿಸಲು ಉಚಿತವಾಗಿ ಭೂಮಿಯನ್ನು ನೀಡಲು   ಮುಂದಾಗಿದೆ. ಆದರೆ, ಉಪೇಕ್ಷೆಯಿಂದಾಗಿ ಇಲ್ಲಿ ರು.50 ಕೋಟಿ ನೀಡಿದ್ದರೂ ಅಗತ್ಯ ಭೂಮಿ ಸಿಗುವುದು ಅನುಮಾನ. ಹಿಮಾಚಲ ಪ್ರದೇಶ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಮುಂದೆ ಬಂದಿದ್ದು, ಕರ್ನಾಟಕ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT