ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ) 
ಕ್ರೀಡೆ

ಎಲ್‍ಬಿ ಡಿಆರ್‍ಎಸ್‍ಗೆ ಭಾರತ ಒಪ್ಪದು: ಬಿಸಿಸಿಐ

ಟೆಸ್ಟ್ ಕ್ರಿಕೆಟ್‍ನಲ್ಲಿ ಬಳಸಲಾಗುತ್ತಿರುವ ಅಂಪೈರ್ ತೀರ್ಪು ಪರಿಶೀಲನಾ ವ್ಯವಸ್ಥೆ (ಡಿಆರ್‍ಎಸ್)ನಲ್ಲಿ ಕೆಲವು ಬದಲಾವಣೆ ತರುವವರೆಗೂ ಭಾರತ ಈ ವ್ಯವಸ್ಥೆಯನ್ನು ಒಪ್ಪುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ...

ಬೆಂಗಳೂರು: ಟೆಸ್ಟ್ ಕ್ರಿಕೆಟ್‍ನಲ್ಲಿ ಬಳಸಲಾಗುತ್ತಿರುವ ಅಂಪೈರ್ ತೀರ್ಪು ಪರಿಶೀಲನಾ ವ್ಯವಸ್ಥೆ (ಡಿಆರ್‍ಎಸ್)ನಲ್ಲಿ ಕೆಲವು ಬದಲಾವಣೆ ತರುವವರೆಗೂ ಭಾರತ ಈ ವ್ಯವಸ್ಥೆಯನ್ನು ಒಪ್ಪುವುದಿಲ್ಲ  ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಈ ವ್ಯವಸ್ಥೆಯಲ್ಲಿ ಐಸಿಸಿ ಬದಲಾವಣೆ ತರುವುದೇ ಎಂಬುದನ್ನು ನೋಡುತ್ತೇವೆ. ಡಿಆರ್‍ಎಸ್‍ನಲ್ಲಿ ನೋಬಾಲ್, ಬ್ಯಾಟ್ ಪ್ಯಾಡ್ ಕ್ಯಾಚ್, ಮತ್ತು ಇತರೆ ರಿವ್ಯೂಗಳಲ್ಲಿ ಇನ್ನಷ್ಟು ಸುಧಾರಣೆ  ತರಬಹುದಾಗಿದೆ. ಆದರೆ ಎಲ್‍ಬಿಡಬ್ಲ್ಯೂನಲ್ಲಿ ಡಿಆರ್‍ಎಸ್ ಅನ್ನು ಭಾರತ ಒಪ್ಪುವುದಿಲ್ಲ. ಈ ಕುರಿತು ನಾವು ಸಾಕಷ್ಟು ಅಸಮಾಧಾನ ಹೊಂದಿದ್ದೇವೆ. ಐಸಿಸಿ ನಿಖರ ವ್ಯವಸ್ಥೆ ತರುವವರೆಗೂ ಎಲ್ ಬಿಡಬ್ಲ್ಯೂಗೆ ಡಿಆರ್‍ಎಸ್ ಅನ್ನು ಒಪ್ಪುವುದಿಲ್ಲ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಎನ್‍ಸಿಎ ಸ್ಥಳಾಂತರ ಅನಿವಾರ್ಯ
ಇನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು ಸ್ಥಳಾಂತರಿಸುವ ಬಗ್ಗೆ ಮಾತನಾಡಿರುವ ಠಾಕೂರ್, ಬೇರೆ ರಾಜ್ಯ ಸರ್ಕಾರಗಳು ಈ ಸಂಸ್ಥೆ ನಿರ್ಮಿಸಲು ಉಚಿತವಾಗಿ ಭೂಮಿಯನ್ನು ನೀಡಲು   ಮುಂದಾಗಿದೆ. ಆದರೆ, ಉಪೇಕ್ಷೆಯಿಂದಾಗಿ ಇಲ್ಲಿ ರು.50 ಕೋಟಿ ನೀಡಿದ್ದರೂ ಅಗತ್ಯ ಭೂಮಿ ಸಿಗುವುದು ಅನುಮಾನ. ಹಿಮಾಚಲ ಪ್ರದೇಶ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಮುಂದೆ ಬಂದಿದ್ದು, ಕರ್ನಾಟಕ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT