ಟೆನಿಸ್ ತರಬೇತುದಾರ ಶಿವಪ್ರಕಾಶ್ ಮಿಶ್ರಾ (ಸಂಗ್ರಹ ಚಿತ್ರ) 
ಕ್ರೀಡೆ

ಶಿವಪ್ರಕಾಶ್, ಜೇಮ್ಸ್ ಗೆ ಧ್ಯಾನ್‍ಚಂದ್ ಗೌರವ

ಪ್ರತಿಷ್ಠಿತ ಧ್ಯಾನ್‍ಚಂದ್ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯು ಇತ್ತೀಚೆಗೆ ಶಿಫಾರಸು ಮಾಡಿದ್ದ ಹಾಕಿ ತರಬೇತುದಾರ ರೋಮಿಯೋ ಜೇಮ್ಸ್, ಟೆನಿಸ್ ತರಬೇತುದಾರ ಶಿವಪ್ರಕಾಶ್ ಮಿಶ್ರಾ ಹಾಗೂ ವಾಲಿಬಾಲ್ ತರಬೇತುದಾರ ಟಿಪಿಪಿ ನಾಯರ್...

ನವದೆಹಲಿ: ಪ್ರತಿಷ್ಠಿತ ಧ್ಯಾನ್‍ಚಂದ್ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯು ಇತ್ತೀಚೆಗೆ ಶಿಫಾರಸು ಮಾಡಿದ್ದ ಹಾಕಿ ತರಬೇತುದಾರ ರೋಮಿಯೋ ಜೇಮ್ಸ್, ಟೆನಿಸ್ ತರಬೇತುದಾರ ಶಿವಪ್ರಕಾಶ್ ಮಿಶ್ರಾ ಹಾಗೂ ವಾಲಿಬಾಲ್ ತರಬೇತುದಾರ ಟಿಪಿಪಿ ನಾಯರ್ ಹೆಸರುಗಳನ್ನು ಕೇಂದ್ರ ಕ್ರೀಡಾ ಇಲಾಖೆ ಅಧಿಕೃತವಾಗಿ ಅಂಗೀಕರಿಸಿದೆ.

ಇದರೊಂದಿಗೆ, ದ್ರೋಣಾಚಾರ್ಯ ಪ್ರಶಸ್ತಿಗಾಗಿ ಆಯ್ಕೆ ಸಮಿತಿ ಶಿಫಾರಸು ಮಾಡಿದ್ದ ಕುಸ್ತಿ ತರಬೇತುದಾರ ಅನೂಪ್ ಸಿಂಗ್, ಪ್ಯಾರಾಲಿಂಪಿಕ್ಸ್ ತರಬೇತುದಾರ ನಾವಲ್ ಸಿಂಗ್ ಸೇರಿದಂತೆ ಐವರ ಹೆಸರುಗಳನ್ನೂ ಸಚಿವಾಲಯ ಅಂಗೀಕರಿಸಿದ್ದು, ಇದೇ ತಿಂಗಳ 29ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜೀವಮಾನ ಸಾಧನೆ ಪ್ರಶಸ್ತಿ: ಇನ್ನು ಈಜು ತರಬೇತುದಾರ ನಿಹಾರ್ ಅಮಿನ್, ಬಾಕ್ಸಿಂಗ್ ತರಬೇತುದಾರ ಎಸ್.ಆರ್. ಸಿಂಗ್ ಹಾಗೂ ಅಥ್ಲೆಟಿಕ್ಸ್ ತರಬೇತುದಾರ ಹರ್ಬನ್ಸ್ ಸಿಂಗ್
ಅವರು ಜೀವಮಾನ ಸಾಧನಾ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ. ದ್ರೋಣಾಚಾರ್ಯ ಹಾಗೂ ಧ್ಯಾನ್ ಚಂದ್ ಪ್ರಶಸ್ತಿ ಪಡೆಯುವ ಸಾಧಕರು, ನೆನಪಿನ ಕಾಣಿಕೆಯೊಂದಿಗೆ ಪ್ರಶಸ್ತಿ ಫಲಕ ಹಾಗೂ ರು.5 ಲಕ್ಷ ನಗದು ಬಹುಮಾನ ಪಡೆಯಲಿದ್ದಾರೆ. ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ್ ಪ್ರಶಸ್ತಿ ವಿಜೇತರು ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಫಲಕ ಪಡೆಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT