ಟೆನಿಸ್ ತರಬೇತುದಾರ ಶಿವಪ್ರಕಾಶ್ ಮಿಶ್ರಾ (ಸಂಗ್ರಹ ಚಿತ್ರ) 
ಕ್ರೀಡೆ

ಶಿವಪ್ರಕಾಶ್, ಜೇಮ್ಸ್ ಗೆ ಧ್ಯಾನ್‍ಚಂದ್ ಗೌರವ

ಪ್ರತಿಷ್ಠಿತ ಧ್ಯಾನ್‍ಚಂದ್ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯು ಇತ್ತೀಚೆಗೆ ಶಿಫಾರಸು ಮಾಡಿದ್ದ ಹಾಕಿ ತರಬೇತುದಾರ ರೋಮಿಯೋ ಜೇಮ್ಸ್, ಟೆನಿಸ್ ತರಬೇತುದಾರ ಶಿವಪ್ರಕಾಶ್ ಮಿಶ್ರಾ ಹಾಗೂ ವಾಲಿಬಾಲ್ ತರಬೇತುದಾರ ಟಿಪಿಪಿ ನಾಯರ್...

ನವದೆಹಲಿ: ಪ್ರತಿಷ್ಠಿತ ಧ್ಯಾನ್‍ಚಂದ್ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯು ಇತ್ತೀಚೆಗೆ ಶಿಫಾರಸು ಮಾಡಿದ್ದ ಹಾಕಿ ತರಬೇತುದಾರ ರೋಮಿಯೋ ಜೇಮ್ಸ್, ಟೆನಿಸ್ ತರಬೇತುದಾರ ಶಿವಪ್ರಕಾಶ್ ಮಿಶ್ರಾ ಹಾಗೂ ವಾಲಿಬಾಲ್ ತರಬೇತುದಾರ ಟಿಪಿಪಿ ನಾಯರ್ ಹೆಸರುಗಳನ್ನು ಕೇಂದ್ರ ಕ್ರೀಡಾ ಇಲಾಖೆ ಅಧಿಕೃತವಾಗಿ ಅಂಗೀಕರಿಸಿದೆ.

ಇದರೊಂದಿಗೆ, ದ್ರೋಣಾಚಾರ್ಯ ಪ್ರಶಸ್ತಿಗಾಗಿ ಆಯ್ಕೆ ಸಮಿತಿ ಶಿಫಾರಸು ಮಾಡಿದ್ದ ಕುಸ್ತಿ ತರಬೇತುದಾರ ಅನೂಪ್ ಸಿಂಗ್, ಪ್ಯಾರಾಲಿಂಪಿಕ್ಸ್ ತರಬೇತುದಾರ ನಾವಲ್ ಸಿಂಗ್ ಸೇರಿದಂತೆ ಐವರ ಹೆಸರುಗಳನ್ನೂ ಸಚಿವಾಲಯ ಅಂಗೀಕರಿಸಿದ್ದು, ಇದೇ ತಿಂಗಳ 29ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜೀವಮಾನ ಸಾಧನೆ ಪ್ರಶಸ್ತಿ: ಇನ್ನು ಈಜು ತರಬೇತುದಾರ ನಿಹಾರ್ ಅಮಿನ್, ಬಾಕ್ಸಿಂಗ್ ತರಬೇತುದಾರ ಎಸ್.ಆರ್. ಸಿಂಗ್ ಹಾಗೂ ಅಥ್ಲೆಟಿಕ್ಸ್ ತರಬೇತುದಾರ ಹರ್ಬನ್ಸ್ ಸಿಂಗ್
ಅವರು ಜೀವಮಾನ ಸಾಧನಾ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ. ದ್ರೋಣಾಚಾರ್ಯ ಹಾಗೂ ಧ್ಯಾನ್ ಚಂದ್ ಪ್ರಶಸ್ತಿ ಪಡೆಯುವ ಸಾಧಕರು, ನೆನಪಿನ ಕಾಣಿಕೆಯೊಂದಿಗೆ ಪ್ರಶಸ್ತಿ ಫಲಕ ಹಾಗೂ ರು.5 ಲಕ್ಷ ನಗದು ಬಹುಮಾನ ಪಡೆಯಲಿದ್ದಾರೆ. ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ್ ಪ್ರಶಸ್ತಿ ವಿಜೇತರು ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಫಲಕ ಪಡೆಯಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT