ಭಾರತ ಹಾಕಿ ತಂಡ 
ಕ್ರೀಡೆ

ಜಯದ ಒತ್ತಡದಲ್ಲಿ ಸರ್ದಾರ್ ಪಡೆ

ವಿಶ್ವ ಹಾಕಿ ಲೀಗ್ ಟೂರ್ನಿಯಲ್ಲಿ ಗೆಲುವಿನ ಮರೀಚಿಕೆಯ ಬೆನ್ನು ಹತ್ತಿರುವ ಸರ್ದಾರ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ಪಡೆಗೆ, ಗುರುವಾರ ನಡೆಯಲಿರುವ...

ರಾಯ್ಪುರ: ವಿಶ್ವ ಹಾಕಿ ಲೀಗ್ ಟೂರ್ನಿಯಲ್ಲಿ ಗೆಲುವಿನ ಮರೀಚಿಕೆಯ ಬೆನ್ನು ಹತ್ತಿರುವ ಸರ್ದಾರ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ಪಡೆಗೆ, ಗುರುವಾರ ನಡೆಯಲಿರುವ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಪಾಯಕಾರಿ ಬ್ರಿಟನ್ ಎದುರಾಗುತ್ತಿದೆ. 
ಲೀಗ್ ಹಂತದಲ್ಲಿ ಭಾರತ ಆಡಿದ ಮೂರು ಪಂದ್ಯಗಳಲ್ಲಿ ಒಂದರಲ್ಲೂ ಗೆಲುವು ಕಂಡಿಲ್ಲ. ಎರಡು ಸೋಲು ಹಾಗೂ ಒಂದು ಡ್ರಾ ಸಾಧಿಸಿದ ಪರಿಣಾಮ ತಾನಿರುವ 'ಬಿ' ಗುಂಪಿನಲ್ಲಿ ಅಂತಿಮ ಸ್ಥಾನ ಪಡೆಯಿತು. ಹಾಗಿದ್ದರೂ, ಅದು ಕ್ವಾರ್ಟರ್ ಫೈನಲ್ ತಲುಪಿದೆ. ಇದಕ್ಕೆ, ಪಂದ್ಯಾವಳಿಯ ಮಾದರಿಯೇ ಕಾರಣ. ಈ ಮಾದರಿಯು, ಟೂರ್ನಿಯಲ್ಲಿ ಭಾಗವಹಿಸಿರುವ ಎಲ್ಲಾ ಎಂಟು ತಂಡಗಳಿಗೂ ಕ್ವಾರ್ಟರ್ ಫೈನಲ್ ಹಂತಕ್ಕೆ ತಲುಪುವ ಅವಕಾಶ ನೀಡಿದೆ. ಇದೀಗ ಈ ಅವಕಾಶವನ್ನು ಉಪಯೋಗಿಸಿಕೊಳ್ಳದೆ ಹೋದರೆ, ಸರ್ದಾರ್ ಪಡೆಯ ಪದಕದ ಕನಸು ನುಚ್ಚುನೂರಾಗಲಿದೆ. 
ಮೇಳೈಸಿದ ಲೋಪ ದೋಷಗಳು: ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಲೋಪ ದೋಷಗಳಿಂದಲೇ ಭಾರತ ಮುಗ್ಗರಿಸಿದೆ. ರಕ್ಷಣಾ ವಿಭಾಗದಲ್ಲಿನ ಕೊರತೆಗಳು ಎದ್ದು ಕಾಣುತ್ತಿವೆ. ಇದರ ಜತೆಗೇ, ಭರವಸೆಯ ಆಟಗಾರರಾದ ಆಕಾಶ್‍ದೀಪ್ ಸಿಂಗ್, ರಮಣ್-ದೀಪ್ ಸಿಂಗ್, ಎಸ್.ವಿ. ಸುನಿಲ್, ತಲ್ವಿಂದರ್ ಸಿಂಗ್, ಮೊಹಮ್ಮದ್ ಅಮೀರ್ ಅವರಿಂದ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ಹೊರಹೊಮ್ಮಿಲ್ಲ. ತಂಡದ ವೈಫಲ್ಯಕ್ಕೆ ಇದೂ ಒಂದು ಪ್ರಮುಖ ಕಾರಣ. ಇದೇ ಲೋಪ ದೋಷಗಳು ಬ್ರಿಟನ್ ವಿರುದ್ಧದ ಪಂದ್ಯದಲ್ಲೂ ಪುನರಾವರ್ತನೆಯಾದಲ್ಲಿ ಭಾರತಕ್ಕೆ ಸೋಲು ಕಟ್ಟಿಟ್ಟ ಬುತ್ತಿ. 
ಆತ್ಮವಿಶ್ವಾಸದಲ್ಲಿ ಆಂಗ್ಲರು ಅತ್ತ, 'ಎ' ಗುಂಪಿನ ಅಗ್ರಸ್ಥಾನದಲ್ಲಿರುವ ಬ್ರಿಟನ್, ಎರಡು ಭರ್ಜರಿ ಗೆಲುವುಗಳೊಂದಿಗೆ ತನ್ನ ಆತ್ಮವಿಶ್ವಾಸವನ್ನು ಮತ್ತೆ ಹೆಚ್ಚಿಸಿಕೊಂಡಿದೆ. ಅದರಲ್ಲಿ, ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಬಗ್ಗುಬಡಿದಿದ್ದೂ ಅದರ ಆತ್ಮವಿಶ್ವಾಸ ಹೆಚ್ಚಿಸಿದೆ. ಹಾಗಾಗಿ, ಭಾರತ ವಿರುದ್ಧವೂ ಅದು ಆತ್ಮವಿಶ್ವಾಸದಲ್ಲೇ ಕಣಕ್ಕಿಳಿಯು ವುದು ಖಾತ್ರಿಯಾಗಿದೆ.
ಸೆಮಿಫೈನಲ್‍ಗೆ ಆಸೀಸ್, ಹಾಲೆಂಡ್ 
ಬುಧವಾರ ಆರಂಭಗೊಂಡ ವಿಶ್ವ ಹಾಕಿ ಲೀಗ್ ಕ್ವಾರ್ಟರ್ ಫೈನಲ್ ಸುತ್ತಿನ ಮೊದಲೆರಡು ಪಂದ್ಯಗಳಲ್ಲಿ ಹಾಲೆಂಡ್ ಹಾಗೂ ಆಸ್ಟ್ರೇಲಿಯಾ ಜಯ ಸಾಧಿಸಿವೆ. ಕೆನಡಾ ವಿರುದ್ದ ಹಾಲೆಂಡ್ 6-0 ಗೋಲುಗಳ ಅಂತರದಲ್ಲಿ, ಜರ್ಮನಿ ವಿರುದ್ಧ ಆಸ್ಟ್ರೇಲಿಯಾ 3-1 ಅಂತರದಲ್ಲಿ ಜಯಿಸಿ, ಉಪಾಂತ್ಯಕ್ಕೆ ಕಾಲಿಟ್ಟವು. ಡಿ. 4ರಂದು ನಡೆಯುವ ಮೊದಲ ಸೆಮೀಸ್‍ನಲ್ಲಿ ಆಸ್ಟ್ರೇಲಿಯಾ ಹಾಗೂ ಹಾಲೆಂಡ್ ಸೆಣಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT