ಏಷ್ಯಾಕಪ್ 
ಕ್ರೀಡೆ

ಏಷ್ಯಾಕಪ್ ರಹಸ್ಯಕ್ಕೆ ತಿರುವು!

ಐದು ವರ್ಷಗಳ ಹಿಂದೆ ಭಾರತೀಯ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾಗ ನಡೆದಿದೆ ಎನ್ನಲಾದ ಅನುಮಾನಾಸ್ಪದ ಪ್ರಕರಣವೊಂದರಲ್ಲಿ ಟೀಂ...

ನವದೆಹಲಿ: ಐದು ವರ್ಷಗಳ ಹಿಂದೆ ಭಾರತೀಯ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾಗ ನಡೆದಿದೆ ಎನ್ನಲಾದ ಅನುಮಾನಾಸ್ಪದ ಪ್ರಕರಣವೊಂದರಲ್ಲಿ ಟೀಂ ಇಂಡಿಯಾದ ಇಬ್ಬರು ಬ್ಯಾಟ್ಸ್‍ಮನ್‍ಗಳ ಪಾತ್ರವಿರುವುದನ್ನು ಪತ್ರಿಕೆಯೊಂದು ಬಹಿರಂಗಪಡಿಸಿದೆ. 
2010ರಲ್ಲಿ ಏಷ್ಯಾಕಪ್ ಟೂರ್ನಿಗಾಗಿ ಲಂಕಾಗೆ ತೆರಳಿದ್ದ ಸಂದರ್ಭದಲ್ಲಿ, ಭಾರತ ತಂಡದ ಆಟಗಾರನೊಬ್ಬ ತಾನು ಉಳಿದು ಕೊಂಡಿದ್ದ ಹೋಟೆಲ್‍ನಲ್ಲಿ ಬುಕೀ ಜತೆಗೆ ಸಂಪರ್ಕ ಹೊಂದಿದ್ದ ಮಹಿಳೆಯೊಬ್ಬರೊಂದಿಗೆ ಮಾತುಕತೆ ನಡೆಸಿದ್ದಾಗಿ ಕೆಲ ಅನುಮಾನಾಸ್ಪದ ವರದಿಗಳು ಮಾಧ್ಯಮಗಳಲ್ಲಿ ಬಂದಿದ್ದರಿಂದ ಶ್ರೀಲಂಕಾ ಕ್ರಿಕೆಟ್ ಮಂಡಳಿ ಇದರ ತನಿಖೆ ನಡೆಸಿತ್ತು. 
ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಆಗಿನ ಭದ್ರತಾ ಸಲಹೆಗಾರ ಮೇಜರ್ ಜನರಲ್ ಲಾರೆನ್ಸ್ ಫರ್ನಾಂಡೊ ಅವರು, ಆಗಿನ ಭಾರತೀಯ ಕ್ರಿಕೆಟ್ ತಂಡದ ವ್ಯವಸ್ಥಾಪಕರಾಗಿದ್ದ ರಂಜಿಬ್ ಬಿಸ್ವಾಲ್ ಅವರಿಗೆ ರಹಸ್ಯ ಪತ್ರವೊಂದನ್ನು ಬರೆದಿದ್ದು, ಅದರಲ್ಲಿ ಮಹಿಳೆ ಭೇಟಿ ಪ್ರಕರಣದಲ್ಲಿ ಟೀಂ ಇಂಡಿಯಾದ ಕೇವಲ ಒಬ್ಬ ಆಟಗಾರನಲ್ಲದೆ, ಮತ್ತೊಬ್ಬ ಆಟಗಾರನೂ ಭಾಗಿಯಾಗಿದ್ದಾಗಿ ತಿಳಿಸಿದ್ದರು. ಇದೀಗ, ಈ ಪತ್ರದ ಪ್ರತಿಯನ್ನು ಪ್ರಕಟಗೊಳಿಸಿರುವ 'ಡೈಲಿ ಮೇಲ್', 2000ರ ಜೂನ್ 18ರಂದು ನಡೆದಿದ್ದ ಆ ಪ್ರಕರಣದ ಮತ್ತೊಂದು ಸತ್ಯವನ್ನು ಅನಾವರಣಗೊಳಿಸಿದೆ ಎಂದು ಯಾಹೂ ಕ್ರಿಕೆಟ್ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT