(ಸಾಂದರ್ಭಿಕ ಚಿತ್ರ) 
ಕ್ರೀಡೆ

ಮುಂದುವರಿದ ಇಂಡೋ ಪಾಕ್ ಕ್ರಿಕೆಟ್ ಅನಿಶ್ಚಿತತೆ

ಕ್ರಿಕೆಟ್ ಪ್ರಿಯರು ಕಾತುರದಿಂದ ನಿರೀಕ್ಷಿಸುತ್ತಿದ್ದ ಈ ವರ್ಷದ ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿಯು ರದ್ದಾಗುವ ಸಾಧ್ಯತೆಗಳಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ...

ನವದಹೆಲಿ: ಕ್ರಿಕೆಟ್ ಪ್ರಿಯರು ಕಾತುರದಿಂದ ನಿರೀಕ್ಷಿಸುತ್ತಿದ್ದ ಈ ವರ್ಷದ ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿಯು ರದ್ದಾಗುವ ಸಾಧ್ಯತೆಗಳಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಸರಣಿ ನಡೆಸಲು ಅನುಮತಿ ಕೋರಿದ್ದ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ)ಗೆ ಈ ಬಗ್ಗೆ ಕೇಂದ್ರ ಪರೋಕ್ಷ ಸೂಚನೆ ನೀಡಿದ್ದು, ಈ ಮೂಲಕ ಉಭಯ ದೇಶಗಳ ಸರಣಿ ನಡೆಯುವ ನಿರೀಕ್ಷೆ ಇತ್ತು.

ಏನಿದು ಪರೋಕ್ಷ ಸೂಚನೆ?: ಹೆಸರನ್ನೇಳಲು ಇಚ್ಛಿಸದ ಬಿಸಿಸಿಐನ ಅಧಿಕಾರಿಯೊಬ್ಬರು ಹಿಂದೂಸ್ತಾನ್ ಟೈಮ್ಸ್ ಗೆ ನೀಡಿದ ಮಾಹಿತಿಯಂತೆ ``ಉದ್ದೇಶಿತ ಸರಣಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದರೂ ಕೇಂದ್ರ ಸರ್ಕಾರ ಇನ್ನೂ ಈ ಕುರಿತು ಮೀನಾಮೇಷ ಎಣಿಸುತ್ತಿರುವುದು ಸರ್ಕಾರಕ್ಕಿರುವ ಅನಾಸಕ್ತಿಯನ್ನು ತೋರುತ್ತದೆ.

ಪ್ರತಿಷ್ಠಿತ ಹಾಗೂ ಅಂತಾರಾಷ್ಟ್ರೀಯ ಸರಣಿಯನ್ನು ಆಯೋಜಿಸಬೇಕೆಂದಾದಲ್ಲಿ, ಈಗಾಗಲೇ ಕೇಂದ್ರ ತನ್ನ ಅನುಮತಿ ನೀಡುತ್ತಿತ್ತು'' ಎಂದಿದ್ದಾರೆ. ಇನ್ನು ಈ ಬಗ್ಗೆ ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿದಾಗ, `ದ್ವಿಪಕ್ಷೀಯ ಸರಣಿಯ ಪ್ರಸ್ತಾವನೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ' ಎಂಬ ಉತ್ತರ ಬಂದಿದ್ದು, ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಸಹ ಇದೇ ಮಾತುಗಳನ್ನು ಪ್ರತಿಧ್ವನಿಸಿರುವುದು ಇಂಡೋ-ಪಾಕ್ ಕ್ರಿಕೆಟ್‍ನ ಅನಿಶ್ಚಿತತೆಯನ್ನು ಮುಂದುವರೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT