ಕೆ. ಶ್ರೀಕಾಂತ್ 
ಕ್ರೀಡೆ

ಶ್ರೀಕಾಂತ್ ಫೈನಲ್ ಪ್ರವೇಶ

ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಕೆ. ಶ್ರೀಕಾಂತ್ ಇಂಡೋನೇಷಿಯಾ ಮಾಸ್ಟರ್ಸ್ ಗ್ರಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ...

ಮಲಾಂಗ್  : ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಕೆ. ಶ್ರೀಕಾಂತ್ ಇಂಡೋನೇಷಿಯಾ ಮಾಸ್ಟರ್ಸ್ ಗ್ರಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಸುತ್ತಿಗೆ  ಧಾವಿಸಿದ್ದಾರೆ. ಆದರೆ, ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ. ಸಿಂಧು ಅವರ ಹೋರಾಟಕ್ಕೆ ತೆರೆಬಿದ್ದಿದೆ. ಇಲ್ಲಿನ ಗೆಡುಂಗ್ ಗ್ರಾಹ ಚಕ್ರವಾಲದಲ್ಲಿ ನಡೆಯುತ್ತಿರುವ 120,000 ಡಾಲರ್ ಮೊತ್ತದ ಪಂದ್ಯಾವಳಿಯಲ್ಲಿ ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತ ಶ್ರೀಕಾಂತ್ ಸ್ಥಳೀಯ ಆಟಗಾರ ಗಿಂಟಿಂಗ್ ಆಂಟನಿ ವಿರುದ್ಧ 21-13, 21-19ರ ಎರಡು ನೇರ ಗೇಮ್ ಗಳಲ್ಲಿ ಗೆಲುವು ಸಾಧಿಸಿ ಫೈನಲ್‍ಗೆ  ಅರ್ಹತೆ ಪಡೆದರು. ಕೇವಲ 37 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಮೊದಲ ಗೇಮ್  ಅನ್ನು ಸುನಾಯಾಸವಾಗಿ ಜಯಿಸಿದ ಶ್ರೀಕಾಂತ್,ಎರಡನೇ ಗೇಮ್ ನಲ್ಲಿ ತುಸು ಪೈಪೋಟಿಯನ್ನು ಎದುರಿಸಬೇಕಾಯಿತು. ಈ ಗೆಲುವಿನೊಂದಿಗೆ ಗುಂಟೂರು ಮೂಲದ ಶ್ರೀಕಾಂತ್ ಆಂಟನಿ ವಿರುದ್ಧದ ವೃತ್ತಿಬದುಕಿನ ಮುಖಾಮುಖಿಯಲ್ಲಿ  1-1ರ ಸಮಬಲ ಸಾಧಿಸಿದ್ದಾರೆ. 
ಸಿಂಧುಗೆ ನಿರಾಸೆ: ಇನ್ನು ಮಕಾವ್ ಓಪನ್  ಗ್ರಾಂಡ್ ಪ್ರಿಕ್ಸ್ ಗೋಲ್ಡ್ ಟೂರ್ನಿಯಲ್ಲಿಗೆಲುವು ಸಾಧಿಸಿ ಮಿಂಚು ಹರಿಸಿದ್ದ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್‍ನಲ್ಲಿ ಚೀನಾದ ಹೀ
ಬಿಂಗ್ಜಿಯಾವೊ ವಿರುದ್ಧ 23-21, 13-21ರಿಂದ ಸೋತು ಟೂರ್ನಿಯಿಂದ ಹೊರಬಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT