ಶಹರ್ಯಾರ್ ಖಾನ್ 
ಕ್ರೀಡೆ

ಸರಣಿ ಆಸೆ ಕೈಬಿಡುವತ್ತ ಪಾಕಿಸ್ತಾನ ಕ್ರಿಕೆಟ್ ಮಂಡಳಿ:ಶಹರ್ಯಾರ್ ಖಾನ್

ಭಾರತ ವಿರುದ್ಧ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಕುರಿತಂತೆ ಬಿಸಿಸಿಐನ ತೀರ್ಮಾನವನ್ನು ಕಾದು ಕಾದು ಸುಸ್ತಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗ ಈ ಸರಣಿ ಮೇಲಿನ ಆಸೆಯನ್ನು ಕೈಬಿಡಲು ನಿರ್ಧರಿಸಿದೆ...

ಲಾಹೋರ್: ಭಾರತ ವಿರುದ್ಧ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಕುರಿತಂತೆ ಬಿಸಿಸಿಐನ ತೀರ್ಮಾನವನ್ನು ಕಾದು ಕಾದು ಸುಸ್ತಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗ ಈ ಸರಣಿ ಮೇಲಿನ ಆಸೆಯನ್ನು ಕೈಬಿಡಲು ನಿರ್ಧರಿಸಿದೆ. ಈ ಕುರಿತು ಬಿಸಿಸಿಐಗೆ ಪತ್ರ ಬರೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂದಿನ 48 ಗಂಟೆಗಳಲ್ಲಿ ಸರಣಿ ಕುರಿತಂತೆ ಅಂತಿಮ ತೀರ್ಮಾನ ತಿಳಿಸುವಂತೆ ಕೇಳಿಕೊಂಡಿತ್ತು.

ಆದರೆ, ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಸೋಮವಾರ ಪಿಸಿಬಿ ತನ್ನ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದೆ. ಈ ಕುರಿತು ಮಾತನಾಡಿರುವ ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್, ಈ ಅಧ್ಯಾಯವನ್ನು ಮುಕ್ತಾಯಗೊಳಿಸಲು ನಿರ್ಧರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

``ಹೌದು, ಬಿಸಿಸಿಐನಿಂದ ನಮಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಶನಿವಾರ ಸಂಜೆಯವರೆಗೂ ಈ ಕುರಿತು ಸಿಸಿಐನ ನಿರ್ಧಾರಕ್ಕಾಗಿ ಕಾಯುತ್ತಿದ್ದೆವು. ಹಾಗಾಗಿ ಈಗ ಈ ಅಧ್ಯಾಯವನ್ನು ಅಂತ್ಯಗೊಳಿಸಲಿದ್ದೇವೆ. ಈ ಕುರಿತ ಅಧಿಕೃತ ನಿರ್ಧಾರವನ್ನು ಸೋಮವಾರ ತಿಳಿಸುತ್ತೇವೆ ಎಂದು ಖಾನ್ ತಿಳಿಸಿದ್ದಾರೆ.

ಈ ಸರಣಿಯನ್ನು ಆಡಲು ನಾವು ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ. ಸರಣಿಯ ಸ್ಥಳವನ್ನು ಯುಎಇಯಿಂದ ಶ್ರೀಲಂಕಾಗೆ ಸ್ಥಳಾಂತರಿಸಲು ಮನವಿ ಮಾಡಿದ್ದೆವು. ಈ ಎಲ್ಲ ಪ್ರಯತ್ನಗಳು ವ್ಯರ್ಥವಾಗಿವೆ. ಕಳೆದ ವರ್ಷ ಬಿಸಿಸಿಐ ಜತೆ ಒಪ್ಪಂದ ಮಾಡಿಕೊಂಡಿದ್ದೆವು. ಹಾಗಾಗಿ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಹೊಂದಿದ್ದೆವು.

ಸರಣಿ ಸಾಧ್ಯವಾಗದಿರುವುದು ಭಾರತ ಮತ್ತು ಪಾಕಿಸ್ತಾನದ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗಿದೆ ಎಂದು ಶಹರ್ಯಾರ್ ತಿಳಿಸಿದ್ದಾರೆ. ಈ ಸರಣಿಯ ಕುರಿತಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಯ ದ್ವಿಪಕ್ಷೀಯ ಸರಣಿ ಮಟ್ಟದಲ್ಲಿ ಚರ್ಚೆ ನಡೆಸುತ್ತೇವೆ. ಸರಣಿ ಸಾಧ್ಯವಾಗದಿರುವುದಕ್ಕೆ ಪಾಕಿಸ್ತಾನ ಯಾವುದೇ ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಕಳೆದ ವರ್ಷ ಬಿಸಿಸಿಐ, ಪಿಸಿಬಿ ಒಪ್ಪಂದ ಮಾಡಿಕೊಳ್ಳುವ ಮೂಲಕ 2015ರಿಂದ 2023ರವರೆಗೆ ಒಟ್ಟು 6 ದ್ವಿಪಕ್ಷೀಯ ಸರಣಿಗಳನ್ನಾಡಲು ನಿರ್ಧರಿಸಲಾಗಿತ್ತು. 2008ರಲ್ಲಿ ಮುಂಬೈ ಮೇಲೆ ಭಯೋತ್ಪಾದಕರ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಟೆಸ್ಟ್ ಸರಣಿಯನ್ನು ಆಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT