ಶಹರ್ಯಾರ್ ಖಾನ್ 
ಕ್ರೀಡೆ

ಸರಣಿ ಆಸೆ ಕೈಬಿಡುವತ್ತ ಪಾಕಿಸ್ತಾನ ಕ್ರಿಕೆಟ್ ಮಂಡಳಿ:ಶಹರ್ಯಾರ್ ಖಾನ್

ಭಾರತ ವಿರುದ್ಧ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಕುರಿತಂತೆ ಬಿಸಿಸಿಐನ ತೀರ್ಮಾನವನ್ನು ಕಾದು ಕಾದು ಸುಸ್ತಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗ ಈ ಸರಣಿ ಮೇಲಿನ ಆಸೆಯನ್ನು ಕೈಬಿಡಲು ನಿರ್ಧರಿಸಿದೆ...

ಲಾಹೋರ್: ಭಾರತ ವಿರುದ್ಧ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಕುರಿತಂತೆ ಬಿಸಿಸಿಐನ ತೀರ್ಮಾನವನ್ನು ಕಾದು ಕಾದು ಸುಸ್ತಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗ ಈ ಸರಣಿ ಮೇಲಿನ ಆಸೆಯನ್ನು ಕೈಬಿಡಲು ನಿರ್ಧರಿಸಿದೆ. ಈ ಕುರಿತು ಬಿಸಿಸಿಐಗೆ ಪತ್ರ ಬರೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂದಿನ 48 ಗಂಟೆಗಳಲ್ಲಿ ಸರಣಿ ಕುರಿತಂತೆ ಅಂತಿಮ ತೀರ್ಮಾನ ತಿಳಿಸುವಂತೆ ಕೇಳಿಕೊಂಡಿತ್ತು.

ಆದರೆ, ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಸೋಮವಾರ ಪಿಸಿಬಿ ತನ್ನ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದೆ. ಈ ಕುರಿತು ಮಾತನಾಡಿರುವ ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್, ಈ ಅಧ್ಯಾಯವನ್ನು ಮುಕ್ತಾಯಗೊಳಿಸಲು ನಿರ್ಧರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

``ಹೌದು, ಬಿಸಿಸಿಐನಿಂದ ನಮಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಶನಿವಾರ ಸಂಜೆಯವರೆಗೂ ಈ ಕುರಿತು ಸಿಸಿಐನ ನಿರ್ಧಾರಕ್ಕಾಗಿ ಕಾಯುತ್ತಿದ್ದೆವು. ಹಾಗಾಗಿ ಈಗ ಈ ಅಧ್ಯಾಯವನ್ನು ಅಂತ್ಯಗೊಳಿಸಲಿದ್ದೇವೆ. ಈ ಕುರಿತ ಅಧಿಕೃತ ನಿರ್ಧಾರವನ್ನು ಸೋಮವಾರ ತಿಳಿಸುತ್ತೇವೆ ಎಂದು ಖಾನ್ ತಿಳಿಸಿದ್ದಾರೆ.

ಈ ಸರಣಿಯನ್ನು ಆಡಲು ನಾವು ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ. ಸರಣಿಯ ಸ್ಥಳವನ್ನು ಯುಎಇಯಿಂದ ಶ್ರೀಲಂಕಾಗೆ ಸ್ಥಳಾಂತರಿಸಲು ಮನವಿ ಮಾಡಿದ್ದೆವು. ಈ ಎಲ್ಲ ಪ್ರಯತ್ನಗಳು ವ್ಯರ್ಥವಾಗಿವೆ. ಕಳೆದ ವರ್ಷ ಬಿಸಿಸಿಐ ಜತೆ ಒಪ್ಪಂದ ಮಾಡಿಕೊಂಡಿದ್ದೆವು. ಹಾಗಾಗಿ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಹೊಂದಿದ್ದೆವು.

ಸರಣಿ ಸಾಧ್ಯವಾಗದಿರುವುದು ಭಾರತ ಮತ್ತು ಪಾಕಿಸ್ತಾನದ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗಿದೆ ಎಂದು ಶಹರ್ಯಾರ್ ತಿಳಿಸಿದ್ದಾರೆ. ಈ ಸರಣಿಯ ಕುರಿತಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಯ ದ್ವಿಪಕ್ಷೀಯ ಸರಣಿ ಮಟ್ಟದಲ್ಲಿ ಚರ್ಚೆ ನಡೆಸುತ್ತೇವೆ. ಸರಣಿ ಸಾಧ್ಯವಾಗದಿರುವುದಕ್ಕೆ ಪಾಕಿಸ್ತಾನ ಯಾವುದೇ ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಕಳೆದ ವರ್ಷ ಬಿಸಿಸಿಐ, ಪಿಸಿಬಿ ಒಪ್ಪಂದ ಮಾಡಿಕೊಳ್ಳುವ ಮೂಲಕ 2015ರಿಂದ 2023ರವರೆಗೆ ಒಟ್ಟು 6 ದ್ವಿಪಕ್ಷೀಯ ಸರಣಿಗಳನ್ನಾಡಲು ನಿರ್ಧರಿಸಲಾಗಿತ್ತು. 2008ರಲ್ಲಿ ಮುಂಬೈ ಮೇಲೆ ಭಯೋತ್ಪಾದಕರ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಟೆಸ್ಟ್ ಸರಣಿಯನ್ನು ಆಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT