ವಿರೇಂದ್ರ ಸೆಹ್ವಾಗ್ ಮತ್ತು ಗೌತಂ ಗಂಭೀರ್ 
ಕ್ರೀಡೆ

ಅರುಣ್ ಜೇಟ್ಲಿಗೆ ಸೆಹ್ವಾಗ್, ಗಂಭೀರ್ ಬೆಂಬಲ

ದೆಹಲಿ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿನ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅರುಣ್ ಜೇಟ್ಲಿ ಅವರಿಗೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮತ್ತು...

ದೆಹಲಿ: ದೆಹಲಿ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿನ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅರುಣ್ ಜೇಟ್ಲಿ ಅವರಿಗೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮತ್ತು ಗೌತಂ ಗಂಭೀರ್ ಬೆಂಬಲ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಈ ಆಟಗಾರರು ಜೇಟ್ಲಿ ಪರ ಬೆಂಬಲ ಸೂಚಿಸಿದ್ದಾರೆ .  
ಡಿಡಿಸಿಎಯಲ್ಲಿನ ಅವ್ಯವಸ್ಥೆಗೆ ಜೇಟ್ಲಿ ಅವರನ್ನು ಹೊಣೆಯಾಗಿಸುವುದು ಸರಿಯಲ್ಲ. ದೆಹಲಿ ಕ್ರಿಕೆಟ್‌ನ ಅಭಿವೃದ್ಧಿ ಮತ್ತು ಉತ್ತಮ ಕ್ರೀಡಾಂಗಣ ಕಲ್ಪಿಸಿಕೊಡುವುದರಲ್ಲಿ ಜೇಟ್ಲಿ ಪ್ರಧಾನ ಪಾತ್ರ ವಹಿಸಿದ್ದರು ಎಂದು ಗಂಭೀರ್ ಹೇಳಿದ್ದಾರೆ. 
ಜೇಟ್ಲಿಯವರು ಕ್ರಿಕೆಟಿಗರ ಪರವಾಗಿ ನಿಂತ ಅಧಿಕಾರಿಯಾಗಿದ್ದರು. ಸಾಮರ್ಥ್ಯ, ಪ್ರತಿಭೆಯುಳ್ಳ  ಕ್ರಿಕೆಟಿಗರನ್ನು ತಂಡಕ್ಕೆ ಆಯ್ಕೆ ಮಾಡಿ ಅವರಿಗೆ ಬೆಂಬಲ ನೀಡಿದವರು ಜೇಟ್ಲಿ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.
ಅದೇ ವೇಳೆ ತನ್ನ ವೃತ್ತಿ ಜೀವನ ಮುಂದುವರಿಸುವಲ್ಲಿ ಜೇಟ್ಲಿ ಪ್ರಧಾನ ಪಾತ್ರ ವಹಿಸಿದ್ದರು ಎಂದು ಇಶಾಂತ್ ಶರ್ಮಾ ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT