ವಿಜಯ್ ಹಜಾರೆ ಟ್ರೋಫಿ 
ಕ್ರೀಡೆ

ಗುಜರಾತ್‍ಗೆ ತಮಿಳುನಾಡು ಸವಾಲು

ಪ್ರಸಕ್ತ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಫೈನಲ್ ಸುತ್ತಿಗೆ ಪ್ರವೇಶಿಸಲು ಗುಜರಾತ್ ಮತ್ತು ತಮಿಳುನಾಡು ತಂಡ ಪರಸ್ಪರ ಕಾದಾಟ ನಡೆಸಲಿದ್ದು...

ಬೆಂಗಳೂರು: ಪ್ರಸಕ್ತ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಫೈನಲ್ ಸುತ್ತಿಗೆ ಪ್ರವೇಶಿಸಲು ಗುಜರಾತ್ ಮತ್ತು ತಮಿಳುನಾಡು ತಂಡ ಪರಸ್ಪರ ಕಾದಾಟ ನಡೆಸಲಿದ್ದು, ಜಯ ಸಾಧಿಸುವ ವಿಶ್ವಾಸದಲ್ಲಿವೆ.

ಶನಿವಾರ ನಗರದ ಚಿನ್ನಸ್ವಾಮಿ ಅಂಗಣದಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಈ ತಂಡಗಳು ಸೆಣಸಲಿದ್ದು, ವಿಜೇತ ತಂಡ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಲಿದೆ.

ಗುಜರಾತ್ ತಂಡ ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಗುಜರಾತ್ ತಂಡ ಪ್ರಬಲವೆನಿಸಿದರೂ, ಮತ್ತೊಂದೆಡೆ ತಮಿಳುನಾಡು ತಂಡವನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಗುಜರಾತ್ ತಂಡ ಲೀಗ್ ಹಂತದಲ್ಲಿ ಬಿ ಗುಂಪಿನಲ್ಲಿ ಆಡಿದ 6 ಪಂದ್ಯಗಳ ಪಾಕಿ 5ರಲ್ಲಿ ಜಯ ಸಾಧಿಸಿ ಎರಡನೇ ಸ್ಥಾನ ಪಡೆದಿತ್ತು. ಇನ್ನು ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ 2 ವಿಕೆಟ್ ಜಯ ಸಾಧಿಸಿತ್ತು. ಮತ್ತೊಂದೆಡೆ ತಮಿಳುನಾಡು ತಂಡ ಎ ಗುಂಪಿನಲ್ಲಿ ಆಡಿದ 6 ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಅಗ್ರಸ್ಥಾನ ಪಡೆದಿತ್ತು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ಪ್ರದೇಶ ವಿರುದ್ಧದ ರೋಚಕ 1 ವಿಕೆಟ್  ಜಯ ತಂಡದಲ್ಲಿ ಆತ್ಮ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

ಗಂಭೀರ್ ಪಡೆಗೆ ಹಿ.ಪ್ರದೇಶ ಸವಾಲು: ಇನ್ನು ಆಲೂರಿನಲ್ಲಿರುವ ಕೆಎಸ್‍ಸಿಎ ಕ್ರೀಡಾಂಗಣದಲ್ಲಿ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದ್ದು, ದೆಹಲಿ ಮತ್ತು ಹಿಮಾಚಲ ಪ್ರದೇಶ ತಂಡಗಳು ಮುಖಾಮುಖಿಯಾಗಲಿವೆ. ಇದೇ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ ಮೂಲಕ ದಾಖಲೆ ಬರೆದಿರುವ ಹಿಮಾಚಲ ಪ್ರದೇಶ ಹೊಸ ಉತ್ಸಾಹದಲ್ಲಿದ್ದರೆ, ಗಂಭೀರ್ ನೇತೃತ್ವದ ಖ್ಯಾತನಾಮ ಆಟಗಾರರನ್ನು ಹೊಂದಿರುವ ದೆಹಲಿ ತಂಡ ಜಯದ ವಿಶ್ವಾಸದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT