ವಿನಯ್‌ಕುಮಾರ್‌ 
ಕ್ರೀಡೆ

ರಣಜಿ: ಕರ್ನಾಟಕ ವಿರುದ್ಧ ಮುಂಬೈ ಆಲೌಟ್; ವಿನಯ್ ಕುಮಾರ್ ಗೆ 6 ವಿಕೆಟ್

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಸೆಮಿಫೈನಲ್‌ನ ಮೊದಲ...

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಸೆಮಿಫೈನಲ್‌ನ ಮೊದಲ ಇನಿಂಗ್ಸ್‌ನಲ್ಲಿ ಮುಂಬೈ ತಂಡವನ್ನು 44 ರನ್‌ಗಳಿಗೆ ಆಲೌಟ್‌ ಮಾಡುವ ಮೂಲಕ ಕರ್ನಾಟಕ ತಂಡ ಮುಂಬೈ ಬ್ಯಾಟ್ಸ್ ಮನ್ ಗಳ ಬೆವರಿಳಿಸಿದೆ.
ಎರಡನೇ ಇನಿಂಗ್ಸ್ ಆರಂಭಿಸಿರುವ ಕರ್ನಾಟಕವು ದಿನದ ಆಟದ ಅಂತ್ಯಕ್ಕೆ 5 ಓವರ್ ಗಳಲ್ಲಿ 2 ವಿಕೆಟ್ ಗೆ 10 ರನ್ ಗಳಿಸಿದೆ.

ಮೊದಲು ಬ್ಯಾಟ್‌ ಮಾಡಿದ ಕರ್ನಾಟಕ ಎಲ್ಲ ವಿಕೆಟ್‌ ಕಳೆದುಕೊಂಡು 202 ರನ್‌ ಗಳಿಸಿತು. ರಾಬಿನ್‌ ಉತ್ತಪ್ಪ (68) ಗರಿಷ್ಠ ರನ್‌ ಗಳಿಸಿದರು. ಕರುಣ್‌ ನಾಯರ್‌ (49) ಔಟಾಗದೆ ಉಳಿದರು. ಕರ್ನಾಟಕ ತಂಡದ ನಾಯಕ ವಿನಯ್‌ಕುಮಾರ್‌ 6 ವಿಕೆಟ್‌ ಕಬಳಿಸಿದರು. ಅರವಿಂದ್‌ 2 ಹಾಗೂ ಅಭಿಮನ್ಯು ಮಿಥುನ್ 1ವಿಕೆಟ್‌ ಪಡೆದರು.

ಕರ್ನಾಟಕ ನೀಡಿದ 202 ರನ್‌ಗಳಿಗೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಮುಂಬೈ ತಂಡ ಒಂದರ ಬೆನ್ನಿಗೊಂದು ವಿಕೆಟ್‌ ಕಳೆದುಕೊಂಡಿತು.

ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಎದುರು ಕರ್ನಾಟಕ ಗೆಲುವು ಸಾಧಿಸಿತ್ತು. ರಣಜಿ ಇತಿಹಾಸದಲ್ಲಿ ಮುಂಬೈ ವಿರುದ್ಧ ಕರ್ನಾಟಕ ಪಡೆದ ಚೊಚ್ಚಲ ಗೆಲುವು ಅದಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT