ಪಾಕಿಸ್ತಾನ ತಂಡದ ಯೂನಿಸ್ ಖಾನ್ (ಸಂಗ್ರಹ ಚಿತ್ರ) 
ಕ್ರೀಡೆ

ಪಾಕಿಸ್ತಾನ ಇತಿಹಾಸ ಬದಲಿಸಬಲ್ಲದು: ಯೂನಿಸ್ ಖಾನ್

ಪ್ರಸಕ್ತ ಸಾಲಿನ ವಿಶ್ವಕಪ್ ಸರಣಿಯಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸುವ ಮೂಲಕ ಪಾಕಿಸ್ತಾನ ತಂಡ..

ಇಸ್ಲಾಮಾಬಾದ್: ಪ್ರಸಕ್ತ ಸಾಲಿನ ವಿಶ್ವಕಪ್ ಸರಣಿಯಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸುವ ಮೂಲಕ ಪಾಕಿಸ್ತಾನ ತಂಡ ಇತಿಹಾಸವನ್ನು ಬದಲಿಸಬಲ್ಲದು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಯೂನಿಸ್ ಖಾನ್ ಹೇಳಿದ್ದಾರೆ.

2015 ಕ್ರಿಕೆಟ್ ವಿಶ್ವಕಪ್ ಸರಣಿಯ ಹಿನ್ನಲೆಯಲ್ಲಿ ಮಾತನಾಡಿದ ಯೂನಿಸ್ ಖಾನ್, 'ಇತಿಹಾಸ ಬದಲಾಗುತ್ತದೆ. ನನ್ನ ಅಭಿಪ್ರಾಯದ ಪ್ರಕಾರ ಪ್ರಸ್ತುತ ಪಾಕಿಸ್ತಾನ ತಂಡ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದು, ಈ ಬಾರಿಯ ಸರಣಿಯಲ್ಲಿ ಭಾರತ ತಂಡವನ್ನು ಮಣಿಸುವ ಸಾಮರ್ಥ್ಯ ಹೊಂದಿದೆ' ಎಂದು ಹೇಳಿದರು.

'ಈ ಹಿಂದೆ ನನ್ನ ಬಗ್ಗೆಯೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಇತ್ತೀಚಿಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ನನ್ನ ವೃತ್ತಿ ಜೀವನ ಅಂತ್ಯವಾಯಿತು ಎಂದು ಬಹುತೇಕರು ಟೀಕಿಸಿದ್ದರು. ಆದರೆ ಆ ಸರಣಿಯಲ್ಲಿ ಶತಕ ಬಾರಿಸುವ ಮೂಲಕ ನಾನು ಮತ್ತೆ ಮರಳಿ ಫಾರ್ಮ್‌ಗೆ ವಾಪಸಾದೆ. ಮುಂಬರುವ ವಿಶ್ವಕಪ್ ಸರಣಿಯಲ್ಲಿಯೂ ಇದೇ ಉತ್ತಮ ಫಾರ್ಮ್ ಅನ್ನು ಮುಂದುವರೆಸುವ ವಿಶ್ವಾಸವಿದೆ. ಅಂತೆಯೇ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಲಿದ್ದೇವೆ' ಎಂದು ಯೂನಿಸ್ ಖಾನ್ ಹೇಳಿದರು.

ವಿಶ್ವಕಪ್ ಕ್ರಿಕೆಟ್ ಸರಣಿ ಆರಂಭವಾದ 1975ರಿಂದ ಇವರೆಗೂ ಪಾಕಿಸ್ತಾನ ತಂಡ ಭಾರತ ತಂಡದ ವಿರುದ್ಧ ಗೆಲುವು ಸಾಧಿಸಿಲ್ಲ. ಕ್ರಿಕೆಟ್ ಇತಿಹಾಸದಲ್ಲಿ ಇದೊಂದು ದಾಖಲೆಯಾಗಿದ್ದು, ಪ್ರಸಕ್ತ ಬಾರಿಯ ವಿಶ್ವಕಪ್ ಸರಣಿಯಲ್ಲಿ ಭಾರತದ ವಿರುದ್ಧ ಪಂದ್ಯ ಗೆಲ್ಲುವ ಮೂಲಕ ಪಾಕಿಸ್ತಾನ ಈ ದಾಖಲೆಯನ್ನು ಅಳಿಸಿ ಹಾಕುವ ಹುಮ್ಮಸ್ಸಿನಲ್ಲಿದೆ. ಮುಂಬರುವ ಫೆಬ್ರವರಿಯಲ್ಲಿ ವಿಶ್ವಕಪ್ ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ಫೆಬ್ರವರಿ 15ರಂದು ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT